ಹಿಜ್ಬುಲ್ ಮುಜಾಹಿದೀನ್ ಕಮಾಂಡರ್ ಶೌಕತ್ ಸೇರಿ ನಾಲ್ವರು ಉಗ್ರರು ಫಿನಿಶ್
Team Udayavani, May 18, 2019, 5:26 PM IST
Indian Army
ಜಮ್ಮು: ಜಮ್ಮು-ಕಾಶ್ಮೀರದ ಪುಲ್ವಾಮಾ ಮತ್ತು ಬಾರಾಮುಲ್ಲಾ ಜಿಲ್ಲೆಗಳಲ್ಲಿ ಭದ್ರತಾ ಪಡೆಗಳ ಪ್ರತ್ಯೇಕ ಕಾರ್ಯಾಚರಣೆಯಲ್ಲಿ ಪಾಕಿಸ್ತಾನ ಬೆಂಬಲಿತ ನಾಲ್ವರು ಉಗ್ರರು ಶನಿವಾರ ಎನ್ ಕೌಂಟರ್ ಗೆ ಬಲಿಯಾಗಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ.
ನಾಲ್ವರು ಉಗ್ರರಲ್ಲಿ ಮೂವರು ಹಿಜ್ಬುಲ್ ಮುಜಹಿದೀನ್ ಉಗ್ರಗಾಮಿ ಸಂಘಟನೆಗೆ ಸೇರಿದವರಾಗಿದ್ದಾರೆ ಎಂದು ವರದಿ ಹೇಳಿದೆ. ಪುಲ್ವಾಮಾದ ಪಂಝ್ ಗಾಮ್ ಗ್ರಾಮದಲ್ಲಿ ಅಡಗಿ ಕುಳಿತಿದ್ದ ಭಯೋತ್ಪಾದಕರ ವಿರುದ್ಧ ಭದ್ರತಾ ಪಡೆಗಳು ಕಾರ್ಯಾಚರಣೆ ನಡೆಸಿದ್ದ ವೇಳೆ ಪ್ರತಿದಾಳಿ ನಡೆಸಿದ್ದರು.
ಸಿಆರ್ ಪಿಎಫ್, 55 ರಾಷ್ಟ್ರೀಯ ರೈಫಲ್ಸ್, ವಿಶೇಷ ಕಾರ್ಯಾಚರಣೆ ಪಡೆ ಸೇರಿದಂತೆ ಜಂಟಿ ದಾಳಿಯಲ್ಲಿ ನಾಲ್ವರು ಉಗ್ರರು ಬಲಿಯಾಗಿದ್ದಾರೆ. ಮೂವರು ಕಾಶ್ಮೀರದ ನಿವಾಸಿಗಳಾಗಿದ್ದಾರೆ. ಉಗ್ರರನ್ನು ಶೌಕತ್ ಅಹ್ಮದ್ ದಾರ್, ಇರ್ಫಾನ್ ಅಹ್ಮದ್ ಮತ್ತು ಮುಜಾಫರ್ ಅಹ್ಮದ್ ಎಂದು ಗುರುತಿಸಲಾಗಿದೆ. ಹಿಜ್ಜುಲ್ ಮುಜಾಹಿದೀನ್ ಕಮಾಂಡರ್ ಆಗಿದ್ದ ಶೌಕತ್ ಅಹ್ಮದ್ ದಾರ್ ಕಳೆದ ವರ್ಷ ಭಾರತೀಯ ಸೇನೆಯ ಯೋಧ ಔರಂಗ್ ಜೇಬ್ ಅವರನ್ನು ಗುಂಡಿಟ್ಟು ಕೊಂದ ಪ್ರಕರಣದಲ್ಲಿ ಶಾಮೀಲಾಗಿದ್ದ ಎಂದು ವರದಿ ವಿವರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
MUST WATCH
ಹೊಸ ಸೇರ್ಪಡೆ
ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು
H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ
Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ
Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ