ಗೃಹ ಮತ್ತು ವಾಹನ ಸಾಲ ಮಂಜೂರಾತಿಗೆ ಇನ್ನು 59 ನಿಮಿಷ ಸಾಕು!


Team Udayavani, Aug 21, 2019, 10:22 AM IST

Bank-Loan-726

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ನವದೆಹಲಿ: ಸರಕಾರಿ ಸ್ವಾಮ್ಯದ ಬ್ಯಾಂಕುಗಳಲ್ಲಿ ಸಾಲ ಸೌಲಭ್ಯ ಪಡೆಯುವುದು ಅಷ್ಟು ಸುಲಭದ ಮಾತಲ್ಲ. ಗ್ರಾಹಕರಿಗೆ ಅಗತ್ಯವಿರುವ ಸಂದರ್ಭಕ್ಕೆ ತುರ್ತು ಸಾಲ ಸೌಲಭ್ಯವನ್ನು ಬ್ಯಾಂಕುಗಳಲ್ಲಿ ಪಡೆಯುವುದು ಕಷ್ಟಸಾಧ್ಯ ಎನ್ನುವುದು ಹಲವಾರು ಗ್ರಾಹಕರ ಸಾಮಾನ್ಯ ನಂಬಿಕೆ.

ಆದರೆ ಇತ್ತೀಚಿನ ಕೆಲ ವರ್ಷಗಳಲ್ಲಿ ಸರಕಾರಿ ಸ್ವಾಮ್ಯದ ಬ್ಯಾಂಕುಗಳೂ ಸಹ ತಮ್ಮ ಸೇವಾನೀತಿಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡಿಕೊಂಡಿವೆ. ಇದಕ್ಕಾಗಿ psbloansin59minutes ಎಂಬ ವೆಬ್ ಸೈಟೊಂದನ್ನು ಪ್ರಾರಂಭಿಸಲಾಗಿತ್ತು. ಇಲ್ಲಿಯತನಕ ಈ ವೆಬ್ ಸೈಟ್ ನಲ್ಲಿ ಅತೀ ಸಣ್ಣ, ಸಣ್ಣ ಮತ್ತು ಮಧ್ಯಮ ಉದ್ದಿಮೆಗಳಿಗೆ ಒಂದು ಕೋಟಿ ರೂಪಾಯಿಗಳವರೆಗೆ ಕೇವಲ 59 ನಿಮಿಷಗಳಲ್ಲಿ ಸಾಲ ಮಂಜೂರಾತಿ ನೀಡುವ ಸೌಲಭ್ಯವಿತ್ತು.

ಈ ಸೌಲಭ್ಯವನ್ನು ಇನ್ನಷ್ಟು ವಿಸ್ತರಿಸಲು ಉದ್ದೇಶಿಸಿರುವ ಸರಕಾರಿ ಸ್ವಾಮ್ಯದ ಬ್ಯಾಂಕುಗಳು, ಇನ್ನು ಮುಂದೆ ಈ ವೆಬ್ ಸೈಟ್ ಮೂಲಕ ಗೃಹ ಮತ್ತು ವಾಹನ ಸಾಲಗಳನ್ನೂ ಸಹ ಅರ್ಹ ಗ್ರಾಹಕರಿಗೆ 59 ನಿಮಿಷಗಳಲ್ಲಿ ಮಂಜೂರು ಮಾಡಲು ಕೆಲವು ಬ್ಯಾಂಕುಗಳು ನಿರ್ಧರಿಸಿವೆ.

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಮತ್ತು ಕಾರ್ಪೊರೇಷನ್ ಬ್ಯಾಂಕ್ ಗಳು ಐದು ಕೋಟಿ ರೂಪಾಯಿಗಳವರೆಗಿನ ಸಾಲ ಮೊತ್ತಕ್ಕೆ ಈ ವೆಬ್ ಸೈಟ್ ಮೂಲಕ ಮಂಜೂರಾತಿ ನೀಡಲು ನಿರ್ಧರಿಸಿವೆ.

ಇನ್ನು ಸಾಲ ಉತ್ಪನ್ನಗಳು ಗ್ರಾಹಕರಿಗೆ ಸುಲಭವಾಗಿ ಲಭ್ಯವಾಗುವಂತೆ ಮಾಡುವ ನಿಟ್ಟಿನಲ್ಲಿ ಬ್ಯಾಂಕ್ ಆಫ್ ಇಂಡಿಯಾ ಕೆಲವೊಂದು ಸಗಟು ಉತ್ಪನ್ನಗಳನ್ನು ಈ ವೆಬ್ ಸೈಟ್ ನಲ್ಲಿ ಪರಿಚಯಿಸಲು ನಿರ್ಧರಿಸಿದೆ. ಸದ್ಯದಲ್ಲೇ ಈ ವೆಬ್ ಸೈಟ್ ಮೂಲಕ ಗೃಹ ಮತ್ತು ವಾಹನ ಸಾಲ ಸೌಲಭ್ಯವನ್ನು ಬ್ಯಾಂಕ್ ಪರಿಚಯಿಸುತ್ತಿದೆ ಎಂದು ತಿಳಿದುಬಂದಿದೆ. ಹಾಗೆಯೇ ರಾಜ್ಯ ಸರಕಾರದ ಸ್ವಾಮ್ಯದ ಇಂಡಿಯನ್ ಓವರ್ ಸೀಸ್ ಬ್ಯಾಂಕ್ ಸಹ ಕೆಲವೊಂದು ಸಾಲ ಸೌಲಭ್ಯಗಳನ್ನು ಗ್ರಾಹಕರಿಗೆ ಪರಿಚಯಿಸಲು ನಿರ್ಧರಿಸಿದೆ.

ಈ ವೆಬ್ ಸೈಟ್ ಮೂಲಕ ಇದುವರೆಗೆ 35 ಸಾವಿರ ಕೋಟಿ ರೂಪಾಯಿಗಳಿಗೂ ಅಧಿಕ ಮೊತ್ತದ ಸಾಲ ಸೌಲಭ್ಯವನ್ನು ವಿವಿಧ ಬ್ಯಾಂಕುಗಳು ತಮ್ಮ ಗ್ರಾಹಕರಿಗೆ ಒದಗಿಸಿವೆ. 2019ರ ಮಾರ್ಚ್ 31ರವರೆಗೆ ಈ ವೆಬ್ ಸೈಟ್ ಮೂಲಕ 50,706 ಅರ್ಜಿಗಳು ಪ್ರಾಥಮಿಕ ಒಪ್ಪಿಗೆಗೆ ಒಳಗಾಗಿದ್ದು ಇವುಗಳಲ್ಲಿ 27,893 ಅರ್ಜಿಗಳಿಗೆ ಸಾಲ ಸೌಲಭ್ಯವನ್ನು ಒದಗಿಸಲಾಗಿದೆ.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Stock-market-Exchange

Stock market ಹೂಡಿಕೆದಾರರಿಗೆ 5.18 ಲಕ್ಷ ಕೋಟಿ ರೂ.ನಷ್ಟ

Iran-Israel ಯುದ್ಧ:‌ ಬಾಂಬೆ ಷೇರುಪೇಟೆ ಸೂಚ್ಯಂಕ 500 ಅಂಕ ಕುಸಿತ, 6 ಲಕ್ಷ ಕೋಟಿ ನಷ್ಟ!

Iran-Israel ಯುದ್ಧ:‌ ಬಾಂಬೆ ಷೇರುಪೇಟೆ ಸೂಚ್ಯಂಕ 500 ಅಂಕ ಕುಸಿತ, 6 ಲಕ್ಷ ಕೋಟಿ ನಷ್ಟ!

Bournvita ಪ್ಯಾಕ್‌ ಮೇಲಿನ ಹೆಲ್ತ್‌ ಡ್ರಿಂಕ್ಸ್‌ ಪದ ತೆಗೆದುಹಾಕಿ: ಕೇಂದ್ರದ ಆದೇಶ

Bournvita ಪ್ಯಾಕ್‌ ಮೇಲಿನ ಹೆಲ್ತ್‌ ಡ್ರಿಂಕ್ಸ್‌ ಪದ ತೆಗೆದುಹಾಕಿ: ಕೇಂದ್ರದ ಆದೇಶ

Mumbai: Sensex jumped to 75000 during Modi’s tenure

Mumbai: ಮೋದಿ ಅವಧಿಯಲ್ಲಿ ಸೆನ್ಸೆಕ್ಸ್‌ 75000ಕ್ಕೆ ಜಿಗಿತ

1-wqeqweqw

Apple ನಿಂದ 600ಕ್ಕೂ ಅಧಿಕ ಉದ್ಯೋಗಿಗಳ ವಜಾ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.