ತಾರಕಕ್ಕೇರಿದ ದೆಹಲಿ ಹಿಂಸಾಚಾರ; 24 ಗಂಟೆಯಲ್ಲಿ ಮೂರು ಸಭೆ ನಡೆಸಿದ ಕೇಂದ್ರ ಗೃಹ ಸಚಿವ ಶಾ
ಹಿಂಸಾಚಾರ ತಾರಕಕ್ಕೇರಿದ್ದು, ಸಾವನ್ನಪ್ಪಿದ್ದವರ ಸಂಖ್ಯೆ 18ಕ್ಕೇರಿದೆ.
Team Udayavani, Feb 26, 2020, 11:01 AM IST
Amith Sha
ನವದೆಹಲಿ: ಈಶಾನ್ಯ ದೆಹಲಿಯಲ್ಲಿ ಪೌರತ್ವ ಕಾಯ್ದೆಯ ಪರ ಹಾಗೂ ವಿರೋಧಿ ಪ್ರತಿಭಟನಾಕಾರರಿಂದ ಆರಂಭವಾದ ಹಿಂಸಾಚಾರ ತಾರಕಕ್ಕೇರಿದ್ದು, ಸಾವನ್ನಪ್ಪಿದ್ದವರ ಸಂಖ್ಯೆ 18ಕ್ಕೇರಿದೆ. ಏತನ್ಮಧ್ಯೆ ಭುಗಿಲೆದ್ದ ಹಿಂಸಾಚಾರದ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಕೇವಲ 24 ಗಂಟೆಯಲ್ಲಿ ಮೂರು ಬಾರಿ ಸಭೆ ನಡೆಸಿರುವುದಾಗಿ ವರದಿ ತಿಳಿಸಿದೆ.
ದೆಹಲಿಯಲ್ಲಿ ಕಾನೂನು ಸುವ್ಯವಸ್ಥೆ ಹಾಗೂ ಶಾಂತಿ ನೆಲೆಸುವಂತೆ ಮಾಡಲು ಅಮಿತ್ ಶಾ ಮೂರು ಸಭೆ ನಡೆಸಿದ್ದು, ಇದರಲ್ಲಿ ಐಪಿಎಸ್ ಅಧಿಕಾರಿ ಎಸ್ ಎನ್ ಶ್ರೀವಾಸ್ತವ್ ಅವರು ಪಾಲ್ಗೊಂಡಿರುವುದಾಗಿ ವರದಿ ಹೇಳಿದೆ. ಶ್ರೀವಾಸ್ತವ್ ಅವರನ್ನು ಮಂಗಳವಾರ ದಿಲ್ಲಿಯ ವಿಶೇಷ ಪೊಲೀಸ್ ಕಮಿಷನರ್ ಆಗಿ ನೇಮಕ ಮಾಡಲಾಗಿತ್ತು.