ನಕ್ಸಲ್ ದಾಳಿ : ಹುತಾತ್ಮ ಯೋಧರ ಕುಟುಂಬಗಳಿಗೆ ಸಚಿವ ಅಮಿತ್ ಶಾ ಸಾಂತ್ವನ
Team Udayavani, Apr 4, 2021, 11:44 AM IST
ನವದೆಹಲಿ: ‘ಛತ್ತೀಸಗಡದಲ್ಲಿ ನಕ್ಸಲರ ವಿರುದ್ಧ ನಡೆದ ಕಾರ್ಯಾಚರಣೆ ವೇಳೆ ಹುತಾತ್ಮರಾದ ಯೋಧರ ಕುಟುಂಬಗಳಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಸಾಂತ್ವನ ಹೇಳಿದ್ದಾರೆ.
ಭಾನುವಾರ ಛತ್ತೀಸಗಡದ ಮುಖ್ಯಮಂತ್ರಿ ಭೂಪೇಶ್ ಬಾಘೇಲ್ ಜೊತೆ ಮಾತಾಡಿರುವ ಶಾ, ಘಟನೆ ಕುರಿತು ಮಾಹಿತಿ ಪಡೆದಿದ್ದಾರೆ. ಹಾಗೂ CRPF ಜನರಲ್ ಡೈರೆಕ್ಟರ್ ಕುಲದೀಪ್ ಸಿಂಗ್ ಅವರಿಗೆ ಛತ್ತೀಸಗಡಕ್ಕೆ ಭೇಟಿ ನೀಡಿ ಘಟನೆ ಕುರಿತು ಪರಿಶೀಲಿಸುವಂತೆ ಸೂಚನೆ ನೀಡಿದ್ದಾರೆ.
ಎನ್ಕೌಂಟರ್ ವೇಳೆ ವೀರಮರಣ ಹೊಂದಿರುವ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಿರುವ ಗೃಹ ಮಂತ್ರಿಗಳು, ಹುತಾತ್ಮರಾದ ಯೋಧರ ಕುಟುಂಬಗಳಿಗೆ ಸಾಂತ್ವನ ಹೇಳಿದ್ದಾರೆ. ಗಾಯಗೊಂಡಿರುವ ಯೋಧರು ಶೀಘ್ರವೇ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ.
ಇದೇ ವೇಳೆ ನಕ್ಸಲೈಟ್ ವಿರುದ್ಧ ಗುಡುಗಿರುವ ಶಾ, ಶಾಂತಿ ಕದಡುವವರ ಹಾಗೂ ಅಭಿವೃದ್ಧಿಯ ಶತ್ರುಗಳ ವಿರುದ್ಧದ ಹೋರಾಟವನ್ನು ಸರ್ಕಾರ ಮುಂದುವರಿಸುವುದು ಎಂದು ಎಚ್ಚರಿಕೆ ನೀಡಿದ್ದಾರೆ.
‘ಛತ್ತೀಸಗಡದಲ್ಲಿ ನಕ್ಸಲರ ವಿರುದ್ಧದ ಕಾರ್ಯಾಚರಣೆಯಲ್ಲಿ ಹುತಾತ್ಮರಾದ ಯೋಧರು ಮರೆಯಲಾಗದ ತ್ಯಾಗ, ಅಪ್ರತಿಮ ಶೌರ್ಯ ಮೆರೆದಿದ್ದಾರೆ. ಅವರ ಈ ತ್ಯಾಗವನ್ನು ದೇಶವು ಎಂದೂ ಮರೆಯುವುದಿಲ್ಲ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ
MUST WATCH
ಹೊಸ ಸೇರ್ಪಡೆ
Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’
Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್ ಹೆಗ್ಡೆ
Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ
Subramanya ಏನೆಕಲ್ಲು: ಕಾರಿಗೆ ಗೂಡ್ಸ್ ಆಟೋ ಢಿಕ್ಕಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ