ಜೇನುತುಪ್ಪ ಉತ್ಪಾದನೆ ಹೆಚ್ಚಿಸಲು ಚಿಂತನೆ : ನಿತಿನ್ ಗಡ್ಕರಿ
Team Udayavani, Nov 28, 2019, 9:05 PM IST
ಹೊಸದಿಲ್ಲಿ : ಸಕ್ಕರೆ ಬದಲು ಜೇನುತುಪ್ಪ ಉತ್ಪಾದನೆಯನ್ನು ಪ್ರೋತ್ಸಾಹಿಸುವ ಯೋಜನೆ ಕುರಿತು ಸರಕಾರ ಚಿಂತನೆ ನಡೆಸುತ್ತಿದ್ದು, ಪೂರ್ವ ಸಿದ್ಧತೆ ಮಾಡಿಕೊಳ್ಳುತ್ತಿದೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ.
ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ ಉತ್ಪನ್ನಗಳನ್ನು ಉತ್ತೇಜಿಸುವ ದೃಷ್ಟಿಯಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ. ಜತೆಗೆ ಉತ್ಪನ್ನಗಳ ಮಾರಾಟಕ್ಕೆ ಸುಲಭವಾಗಲು ಭಾರತ್ ಕ್ರಾಫ್ಟ್ ಎಂಬ ಇ-ಕಾಮರ್ಸ್ ಪೋರ್ಟಲ್ ಅನ್ನು ಪ್ರಾರಂಭಿಸುವ ಯೋಜನೆ ಹಾಕಿಕೊಂಡಿದ್ದು, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದೊಂದಿಗೆ ಸರಕಾರ ಮಾತುಕತೆ ನಡೆಸುತ್ತಿದೆ ಎಂದು ಅವರು ಹೇಳಿದರು.
ಇನ್ನೂ ಆರೋಗ್ಯದ ದೃಷ್ಟಿಯಿಂದಲೂ ಸಕ್ಕರೆ ಬದಲು ಜೇನುತುಪ್ಪ ಉತ್ತಮವಾಗಿದ್ದು, ಹಲವಾರು ಆಹಾರೋತ್ಪನ್ನಗಳ ತಯಾರಿಕೆಯಲ್ಲಿ ಸಕ್ಕರೆ ಬದಲು ಜೇನುತುಪ್ಪ ಬಳಸಬಹುದಾಗಿದೆ. ಇದರಿಂದ ಜೇನು ಉತ್ಪಾದನೆ ಹೆಚ್ಚಾಗುತ್ತದೆ ಮತ್ತು ಜೇನು ಉತ್ಪಾದನೆಯಲ್ಲಿ ತೊಡಗಿರುವ ಬುಡಕಟ್ಟು ಜನಾಂಗ ಮತ್ತು ಇತರರಿಗೆ ಅನುಕೂಲವಾಗುತ್ತದೆ ಎಂದು ಅವರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jharkhand 32 ಕೋಟಿ ಪತ್ತೆ ಪ್ರಕರಣ: ಇಬ್ಬರ ಸೆರೆ
Loksabha; 3ನೇ ಹಂತದಲ್ಲಿ ಶೇ.61.66ರಷ್ಟು ಮತದಾನ; ಶಾ ಕ್ಷೇತ್ರದಲ್ಲಿ ಮೋದಿ ವೋಟಿಂಗ್
Loksabha election; ಆಯೋಗದ ಮತದಾನ ಮಾಹಿತಿಯಲ್ಲಿ ಲೋಪವಿದೆ, ಧ್ವನಿಯೆತ್ತಿ: ಖರ್ಗೆ ಪತ್ರ
CSIR: ಪ್ರತೀ ಸೋಮವಾರ ಇಸ್ತ್ರಿ ಹಾಕದ ವಸ್ತ್ರ ಧರಿಸಲು ಅವಕಾಶ!
West Bengal; ಶಿಕ್ಷಕರ ನೇಮಕ ಹಗರಣ: ಬಂಗಾಳ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ತರಾಟೆ