ಕಾಂಗ್ರೆಸ್ ಅಧ್ಯಕ್ಷನಾಗುವ ಭರವಸೆ ಇದೆ: ನಾಮಪತ್ರ ಸಲ್ಲಿಸಿ ಮಲ್ಲಿಕಾರ್ಜುನ ಖರ್ಗೆ
ನಾನು ಪಕ್ಷದಲ್ಲಿ ಬದಲಾವಣೆ ತಂದು ವಿಭಿನ್ನ ರೀತಿಯಲ್ಲಿ ಮುನ್ನಡೆಸುತ್ತೇನೆ ಎಂದ ತರೂರ್
Team Udayavani, Sep 30, 2022, 3:00 PM IST
ನವದೆಹಲಿ : ಕಾಂಗ್ರೆಸ್ ಅಧ್ಯಕ್ಷ ಹುದ್ದೆಯ ಚುನಾವಣೆ ದಿನಕ್ಕೊಂದು ತಿರುವು ಪಡೆಯುತ್ತಿದ್ದು, ಹಿರಿಯ ನಾಯಕ ಮತ್ತು ರಾಜ್ಯಸಭಾ ಸದಸ್ಯ ಮಲ್ಲಿಕಾರ್ಜುನ ಖರ್ಗೆ ಶುಕ್ರವಾರ ನಾಮಪತ್ರ ಸಲ್ಲಿಸಿದ್ದಾರೆ.
ನಾಮಪತ್ರ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ”ಇಂದು ನನ್ನ ಬೆಂಬಲಕ್ಕೆ ಬಂದ ಎಲ್ಲಾ ನಾಯಕರು, ಕಾರ್ಯಕರ್ತರು, ಪ್ರತಿನಿಧಿಗಳು ಮತ್ತು ಸಚಿವರು ಬಂದು ನನ್ನನ್ನು ಪ್ರೋತ್ಸಾಹಿಸಿದರು, ಅವರಿಗೆ ನಾನು ಧನ್ಯವಾದಗಳನ್ನು ಅರ್ಪಿಸುತ್ತೇನೆ. ಅಕ್ಟೋಬರ್ 17 ರಂದು ಫಲಿತಾಂಶಗಳು ಏನೆಂದು ನಾವು ನೋಡುತ್ತೇವೆ. ನಾನು ಗೆಲ್ಲುವ ಭರವಸೆ ಇದೆ” ಎಂದರು.
ಇದನ್ನೂ ಓದಿ : ಉತ್ತರಪ್ರದೇಶ:ಕಚೇರಿಗೆ ಹಾಜರಾಗದೇ 6 ತಿಂಗಳಿಂದ ಸಂಬಳ ಪಡೆಯುತ್ತಿದ್ದ ಮಹಿಳಾ ಅಧಿಕಾರಿ ಅಮಾನತು
”ನಾನು ಬಾಲ್ಯದಿಂದಲೂ ಕಾಂಗ್ರೆಸ್ ಸಿದ್ಧಾಂತದೊಂದಿಗೆ ಸಂಪರ್ಕ ಹೊಂದಿದ್ದೇನೆ, ನಾನು 8, 9 ನೇ ತರಗತಿಯಲ್ಲಿದ್ದಾಗ ಗಾಂಧಿ, ನೆಹರು ಸಿದ್ಧಾಂತದ ಪ್ರಚಾರ ಮಾಡುತ್ತಿದ್ದೆ” ಎಂದರು.
ಖರ್ಗೆ ಅವರ ಹೆಸರನ್ನು ಒಟ್ಟು 30 ಕಾಂಗ್ರೆಸ್ ನಾಯಕರು ಪ್ರಸ್ತಾಪಿಸಿದ್ದಾರೆ. ಜಿ-23 ಗುಂಪಿನ ನಾಯಕ ಮನೀಶ್ ತಿವಾರಿ ಅವರು ಅಧ್ಯಕ್ಷೀಯ ಚುನಾವಣೆಯಲ್ಲಿ ಖರ್ಗೆ ಅವರಿಗೆ ಬೆಂಬಲ ನೀಡಿದ್ದಾರೆ.
ಖರ್ಗೆ ಪಕ್ಷದ ಭೀಷ್ಮ: ತರೂರ್ ಪ್ರತಿಕ್ರಿಯೆ
”ನಾವು ಶತ್ರುಗಳಲ್ಲ, ಪ್ರತಿಸ್ಪರ್ಧಿಗಳಲ್ಲ, ನಾವು ಸಹೋದ್ಯೋಗಿಗಳು ಮತ್ತು ಪಕ್ಷವು ಮುಂದುವರಿಯುವುದನ್ನು ನೋಡಲು ನಮಗೆ ಆಸಕ್ತಿ ಇದೆ. ಮಲ್ಲಿಕಾರ್ಜುನ ಖರ್ಗೆ ಅವರು ನಮ್ಮ ಪಕ್ಷದ ‘ಭೀಷ್ಮ ಪಿತಾಮಹ’. ಪಕ್ಷದ ಕಾರ್ಯಕರ್ತರು ಹೇಗೆ ಮುಂದುವರಿಯಬೇಕು ಎಂಬುದನ್ನು ನಿರ್ಧರಿಸಲಿ. ಖರ್ಗೆ, ದಿಗ್ವಿಜಯ ಸಿಂಗ್, ತ್ರಿಪಾಠಿ ಬಗ್ಗೆ ನಾನು ನಕಾರಾತ್ಮಕವಾಗಿ ಏನನ್ನೂ ಹೇಳುವುದಿಲ್ಲ” ಎಂದು ಅಧ್ಯಕ್ಷ ಹುದ್ದೆಗೆ ಸ್ಪರ್ಧಿಸಿರುವ ಶಶಿ ತರೂರ್ ಪ್ರತಿಕ್ರಿಯೆ ನೀಡಿದ್ದಾರೆ.
ಗಾಂಧಿ ಕುಟುಂಬ ತಟಸ್ಥ
”ಪಕ್ಷಕ್ಕೆ ಅಧಿಕೃತ ಅಭ್ಯರ್ಥಿ ಇಲ್ಲ, ಗಾಂಧಿ ಕುಟುಂಬ ಈ ರೇಸ್ನಲ್ಲಿ ತಟಸ್ಥವಾಗಿರುತ್ತದೆ ಮತ್ತು ಸಾಧ್ಯವಾದಷ್ಟು ಅಭ್ಯರ್ಥಿಗಳನ್ನು ಅವರು ಸ್ವಾಗತಿಸುತ್ತಾರೆ ಎಂದು ಕಾಂಗ್ರೆಸ್ ಅಧ್ಯಕ್ಷರು ನನಗೆ ಭರವಸೆ ನೀಡಿದರು. ಆ ಉತ್ಸಾಹದಲ್ಲಿ ನಾನು ನನ್ನ ಉಮೇದುವಾರಿಕೆಯನ್ನು ಮುಂದಿಟ್ಟಿದ್ದೇನೆ. ಇದು ಯಾರನ್ನೂ ಅಗೌರವಿಸಲು ಅಲ್ಲ. ನಮ್ಮದು ಸೌಹಾರ್ದ ಸ್ಪರ್ಧೆ” ಎಂದು ಶಶಿ ತರೂರ್ ಹೇಳಿದ್ದಾರೆ.
”ಯಥಾಸ್ಥಿತಿಯನ್ನು ಮುಂದುವರಿಸಲು ಬಯಸುವವರು ನನಗೆ ಮತ ಹಾಕಲು ಒಲವು ತೋರುವುದಿಲ್ಲ. ಏಕೆಂದರೆ ನಾನು ಬದಲಾವಣೆ, ವಿಭಿನ್ನ ವಿಧಾನ ಮತ್ತು ಪಕ್ಷವನ್ನು ವಿಭಿನ್ನ ರೀತಿಯಲ್ಲಿ ಮುನ್ನಡೆಸುವ ದೃಷ್ಟಿಕೋನವನ್ನು ಪ್ರತಿನಿಧಿಸುತ್ತೇನೆ ಏಕೆಂದರೆ ಕೆಲವು ವರ್ಷಗಳಿಂದ ನಾವು ಹಿನ್ನಡೆ ಅನುಭವಿಸುತ್ತಿದ್ದೇವೆ” ಎಂದೂ ತರೂರ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್