ಬಿಲ್‌ ಬಾಕಿ ಇದ್ದರೆ ಡಿಸ್ಚಾರ್ಜ್ ತಡೆಹಿಡಿಯುವುದು ಅಪರಾಧ?


Team Udayavani, Sep 17, 2018, 9:40 AM IST

discharge.jpg

ಹೊಸದಿಲ್ಲಿ: ಬಿಲ್‌ ಪಾವತಿ ಮಾಡದೇ ಇರುವ ಕಾರಣಕ್ಕಾಗಿ ರೋಗಿಯನ್ನು ಡಿಸ್ಚಾರ್ಜ್ ಮಾಡದೇ ಇರುವುದು ಅಥವಾ ಅಸುನೀಗಿದರೆ ಮೃತದೇಹವನ್ನು ಕುಟುಂಬ ಸದಸ್ಯರಿಗೆ ನೀಡದೇ ಇರುವುದನ್ನು ಇನ್ನು ಮುಂದೆ ಮಾಡುವಂತಿಲ್ಲ. ಆಸ್ಪತ್ರೆಗಳಲ್ಲಿ ಈ ರೀತಿಯ ಘಟನೆಗಳು ನಡೆದರೆ ಅದು ಶಿಕ್ಷಾರ್ಹ ಅಪರಾಧವಾಗಲಿದೆ. ಕೇಂದ್ರ ಸರಕಾರ ಹೊರಡಿಸಿರುವ ರೋಗಿ ರಕ್ಷಣಾ ಮಾರ್ಗಸೂಚಿಯಲ್ಲಿ ಈ ವಿಚಾರವನ್ನು ಉಲ್ಲೇಖೀಸಲಾಗಿದೆ.

ರಾಜ್ಯ ಸರಕಾರಗಳ ಮೂಲಕ ಈ ಮಾರ್ಗಸೂಚಿಯನ್ನು ಅನುಷ್ಠಾನಗೊಳಿಸಲು ಉದ್ದೇಶಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಖಾತೆ ಜಂಟಿ ಕಾರ್ಯದರ್ಶಿ ಸುಧೀರ್‌ ಕುಮಾರ್‌ ಸುತ್ತೋಲೆಯಲ್ಲಿ ವಿವರಿಸಿದ್ದಾರೆ. ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ  ಸಿದ್ಧಪಡಿಸಿರುವ ಈ ಮಾರ್ಗ ಸೂಚಿಯನ್ನು ಕೇಂದ್ರ ಆರೋಗ್ಯ ಖಾತೆ ಸಚಿವಾಲಯದ ವೆಬ್‌ಸೈಟ್‌ನಲ್ಲಿ (https:// mohfw.gov.in/news-highlights/ draft-patient-charter-preparednational-human-rights-commission) ಅಪ್‌ಲೋಡ್‌ ಮಾಡಲಾಗಿದೆ. ಸಾರ್ವಜನಿಕರಿಂದ ಸಲಹೆಯನ್ನೂ ಆಹ್ವಾನಿಸಲಾಗಿದೆ.

ಮಾರ್ಗಸೂಚಿಯಲ್ಲೇನಿದೆ?: ಕರಡು ಮಾರ್ಗಸೂಚಿ ಪ್ರಕಾರ ರೋಗಿಯ ಪಾಲಕರು ಅಥವಾ ಕುಟುಂಬ ಸದಸ್ಯರು ಆಸ್ಪತ್ರೆಯಲ್ಲಿ ಉಂಟಾದ ಸಮಸ್ಯೆ ಬಗ್ಗೆ ನೀಡಿದ ದೂರನ್ನು ಸ್ವೀಕರಿಸಿದ 15 ದಿನಗಳಲ್ಲಿ ಪರಿಹಾರ ಸಿಗುವಂತಾಗಬೇಕು. ಈ ಬಗ್ಗೆ ಲಿಖೀತ ವಾಗ್ಧಾನ ಮಾಡಬೇಕು. ಆಸ್ಪತ್ರೆ ಅಥವಾ ಕ್ಲಿನಿಕ್‌ಗಳು ಆಂತರಿಕವಾಗಿ ಸಮಿತಿ ರಚಿಸಬೇಕು ಎಂದು ಕರಡು ಪ್ರತಿಯಲ್ಲಿದೆ. ಜತೆಗೆ ದೂರಿನ ತನಿಖೆ ವೇಳೆ ಸಹಕಾರ ನೀಡಬೇಕು. ಅಲ್ಲದೆ, ಆಯಾ ರಾಜ್ಯಗಳಲ್ಲಿರುವ ಕಾನೂನು ಅಥವಾ ರೋಗಿಗಳ ರಕ್ಷಣಾ ಮಾರ್ಗಸೂಚಿಯಲ್ಲಿ ಉಲ್ಲೇಖವಾಗಿರುವ ನಿಯಮಗಳ ಅನ್ವಯ ನಡೆದುಕೊಳ್ಳಬೇಕು. ಜತೆಗೆ ಅಗತ್ಯ ಬಿದ್ದ ಮಾಹಿತಿ ನೀಡಬೇಕು. 

ಆಸ್ಪತ್ರೆಯಿಂದ ಸಮಸ್ಯೆ ಉಂಟಾದಲ್ಲಿ ಸರಕಾರ ರಚಿಸಿದ ರೋಗಿ ಹಕ್ಕು ರಕ್ಷಣಾ ಪ್ರಾಧಿಕಾರ ಅಥವಾ ಕ್ಲಿನಿಕ್‌ಗಳ ನಿಯಂತ್ರಣಾ ಪ್ರಾಧಿಕಾರಕ್ಕೆ ದೂರು ನೀಡಲು ರೋಗಿಗಳ ಕುಟುಂಬಕ್ಕೆ ಅವಕಾಶ ಕಲ್ಪಿಸಲಾಗಿದೆ. ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದಿರುವ ಬಗೆಗಿನ  ದಾಖಲೆಗಳನ್ನು ರೋಗಿ ಡಿಸ್ಚಾರ್ಜ್ ಆದ 24 ಗಂಟೆಯೊಳಗೆ ಅಥವಾ 72 ಗಂಟೆಯ ಒಳಗೆ ನೀಡವಂತೆಯೂ ಸೂಚಿಸಲಾಗಿದೆ.  

ಅತ್ಯಂತ ತುರ್ತು ಪರಿಸ್ಥಿತಿಯ ಚಿಕಿತ್ಸೆ ವೇಳೆ ರೋಗಿಯ ಪಾಲಕರು ಮತ್ತೂಬ್ಬ ವೈದ್ಯರ ಅಭಿಪ್ರಾಯ ಕೇಳುವುದಕ್ಕೆ ಆಸ್ಪತ್ರೆಗೆ ಅಡ್ಡಿಪಡಿಸಬಾರದು. ಅದಕ್ಕೆ ಸಂಬಂಧಿಸಿದ ಎಲ್ಲಾ ದಾಖಲೆಗಳನ್ನೂ ಹೆಚ್ಚಿನ ವೆಚ್ಚ ಹೇರದೆ ನೀಡುವಂತೆಯೂ ಕರಡು ಪ್ರತಿಯಲ್ಲಿ ಉಲ್ಲೇಖೀಸಲಾಗಿದೆ. ಜತೆಗೆ ಆಸ್ಪತ್ರೆಗಳಲ್ಲಿ ವಿವಿಧ ಕಾಯಿಲೆಗಳ ತಪಾಸಣೆ ಮತ್ತು ಇತರರ ಪರೀಕ್ಷೆಗಳ ಬಗೆಗಿನ ಶುಲ್ಕದ ವಿವರಗಳನ್ನು ಪ್ರಕಟಿಸಬೇಕು.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

1-wwqw

CRPF DIG ಯಿಂದ ಲೈಂಗಿಕ ಕಿರುಕುಳ: ಖಜಾನ ವಜಾ ಸಾಧ್ಯತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.