ಬಿಸಿಲ ಝಳ: ರೈಲಲ್ಲಿ ನಾಲ್ವರು ವೃದ್ಧರ ಸಾವು
Team Udayavani, Jun 12, 2019, 6:10 AM IST
ಝಾನ್ಸಿ: ಉತ್ತರಪ್ರದೇಶದ ಆಗ್ರಾದಿಂದ ಕೊಯಮತ್ತೂರುಗೆ ಕೇರಳ ಎಕ್ಸ್ಪ್ರೆಸ್ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ನಾಲ್ವರು ಹಿರಿಯ ನಾಗರಿಕರು ಬಿಸಿಲ ತಾಪದಿಂದಾಗಿ ಅಸುನೀಗಿದ್ದಾರೆ. ಮತ್ತೂಬ್ಬರ ಸ್ಥಿತಿ ಚಿಂತಾಜನಕವಾಗಿದ್ದು, ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಇವರೆಲ್ಲರೂ ಕೊಯ ಮತ್ತೂರಿನವರು. ಮೃತದೇಹಗಳನ್ನು ಝಾನ್ಸಿಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದ ಅನಂತರ ಕೊಯಮತ್ತೂರಿಗೆ ಕಳುಹಿಸಲಾಗಿದೆ.
ಸೋಮವಾರ ಆಗ್ರಾದಿಂದ ಕೊಯಮತ್ತೂರಿಗೆ ಪ್ರಯಾ ಣಿಸು ತ್ತಿದ್ದ ವೇಳೆ ರೈಲಿನಲ್ಲೇ ಪಚ್ಚಯ್ಯ (80), ಬಾಲಕೃಷ್ಣನ್ (67), ಧನಲಕ್ಷ್ಮೀ (74), ಸುಬ್ಬರಾಯಯ್ಯ (71) ಎಂಬವರು ಬಿಸಿಲಿನ ಬೇಗೆಯಿಂದ ತೀವ್ರ ಉಸಿರಾಟದ ತೊಂದರೆ ಅನುಭವಿಸಿದರು. ಬಳಿಕ ಅವರು ಪ್ರಜ್ಞೆ ತಪ್ಪಿ ಬಿದ್ದರು. ಝಾನ್ಸಿ ಆಸ್ಪತ್ರೆಯಲ್ಲಿ ಅವರು ಅಸುನೀಗಿದ್ದಾರೆ ಎಂದು ಪ್ರಕಟಿಸಲಾಯಿತು.
ಅಭಾವ ಇಲ್ಲ!: ಕೇಂದ್ರ ಸರಕಾರವೇ ಕಳೆದ ತಿಂಗಳು ಕರ್ನಾಟಕ, ಮಹಾರಾಷ್ಟ್ರ, ಆಂಧ್ರ, ತಮಿಳುನಾಡು ಸೇರಿದಂತೆ 6 ರಾಜ್ಯಗಳಿಗೆ “ಬರಗಾಲ’ದ ಎಚ್ಚರಿಕೆ ನೀಡಿದ್ದರೂ, ಹೊಸದಾಗಿ ನೇಮಕಗೊಂಡ ಜಲಶಕ್ತಿ ಸಚಿವ ಗಜೇಂದ್ರ ಶೇಖಾವತ್ ಮಾತ್ರ, ಅಂಥ ಪರಿಸ್ಥಿತಿಯೇ ಇಲ್ಲ ಎಂದು ಹೇಳುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ