ನಿತೀಶ್‌ ಬಗ್ಗೆ ಆರ್‌ಜೆಡಿ ಮೃದು ಧೋರಣೆ

ಮೈತ್ರಿಕೂಟಕ್ಕೆ ಬರುವುದಿದ್ದರೆ ಬರಲಿ: ಆರ್‌ಜೆಡಿ ನಾಯಕರಿಂದ ಆಹ್ವಾನ

Team Udayavani, Jun 5, 2019, 6:00 AM IST

e-26

ಪಾಟ್ನಾ: ಕೇಂದ್ರ ಸಂಪುಟದಲ್ಲಿ ನಿರೀಕ್ಷಿತ ಸ್ಥಾನ ಸಿಗದೆ ಇದ್ದ ಕಾರಣಕ್ಕೆ ಬಿಜೆಪಿ ಜತೆಗೆ ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಕ್ರುದ್ಧರಾಗಿರುವುದು ಈಗ ಬಹಿರಂಗ ಸತ್ಯ. ಮಂಗಳವಾರ ನಡೆದ ಬೆಳವಣಿಗೆಯಲ್ಲಿ ನಿತೀಶ್‌ ಕುಮಾರ್‌ ಮಹಾಮೈತ್ರಿಕೂಟಕ್ಕೆ ಸೇರ್ಪಡೆಯಾಗುವುದಿದ್ದರೆ ಸ್ವಾಗತವಿದೆ ಎಂಬ ಆಹ್ವಾನ ರವಾನೆಯಾಗಿದೆ. ಆರ್‌ಜೆಡಿಯ ಹಿರಿಯ ನಾಯಕ ರಘುವಂಶ ಪ್ರಸಾದ್‌ ಸಿಂಗ್‌ ಮತ್ತು ಬಿಹಾರದ ಮಾಜಿ ಸಿಎಂ ರಾಬ್ಡಿ ದೇವಿ ಈ ಆಹ್ವಾನ ನೀಡಿದ್ದಾರೆ.

“ಬಿಜೆಪಿಯೇತರ ಪಕ್ಷಗಳು ಅದು ನಿತೀಶ್‌ ಕುಮಾರ್‌ ಅಥವಾ ಇನ್ನು ಯಾರೇ ಇರಲಿ, ಅವರು ಒಂದೇ ವೇದಿಕೆಯಲ್ಲಿ ಸೇರಿಕೊಳ್ಳಬೇಕು. ಈ ಮೂಲಕ ದೇಶಕ್ಕೆ ಬದಲಿ ಆಯ್ಕೆ ನೀಡಬೇಕು. ನಾವು ಇಂಥವರು ಬೇಕು ಬೇಡ ಎಂಬ ಪಥ್ಯ ಹೊಂದಿಲ್ಲ’ ಎಂದಿದ್ದಾರೆ ರಘುವಂಶ ಸಿಂಗ್‌. 2020ರಲ್ಲಿ ಬಿಹಾರ ವಿಧಾನಸಭೆ ಚುನಾವಣೆ ಇರುವ ಹಿನ್ನೆಲೆಯಲ್ಲಿ ಈ ಅಂಶ ಮಹತ್ವದ್ದಾಗಿದೆ.

ಜೈಲಲ್ಲಿರುವ ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್‌ ಯಾದವ್‌ ಅವರು ನಿತೀಶ್‌ ಕುಮಾರ್‌ ಮೈತ್ರಿಕೂಟಕ್ಕೆ ಬರುವಾದರೆ ಸೇರ್ಪಡೆಗೆ ಒಪ್ಪಿದ್ದಾರೆಯೇ ಎಂಬ ಪ್ರಶ್ನೆಗೆ, ಅವರು ತಮ್ಮ ಅಭಿಪ್ರಾಯವನ್ನು ಈಗಾಗಲೇ ವ್ಯಕ್ತಪಡಿಸಿದ್ದಾರೆ ಎಂದಿದ್ದಾರೆ. ಆರ್‌ಜೆಡಿ ನಾಯಕಿ ರಾಬಿx ದೇವಿ, ಹಿಂದುಸ್ತಾನ್‌ ಅವಾಮ್‌ ಮೋರ್ಚಾ (ಎಚ್‌ಎಎಂ) ನಾಯಕ ಜಿತನ್‌ ರಾಮ್‌ ಮಾಂಝಿ ಕೂಡ ನಿತೀಶ್‌ ಪರ ನಿಲುವು ವ್ಯಕ್ತಪಡಿಸಿದ್ದಾರೆ.

ಜೆಡಿಯು ನಾಯಕರು ಆಯೋಜಿಸಿದ್ದ ಇಫ್ತಾರ್‌ ಕೂಟದಲ್ಲಿ ಬಿಹಾರದ ಮಾಜಿ ಮುಖ್ಯಮಂತ್ರಿ ಜಿತನ್‌ ರಾಂ ಮಾಂಝಿ ಭಾಗವಹಿಸಿದ್ದು ಮಹತ್ವದ ಬೆಳವಣಿಗೆಯಾಗಿದೆ. ಈ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗುತ್ತಲೇ ಆರ್‌ಜೆಡಿ ನಾಯಕರಾದ ತೇಜ್‌ ಪ್ರತಾಪ್‌ ಯಾದವ್‌, ರಾಬಿx ದೇವಿ ಅವರು ಜಿತನ್‌ ರಾಂ ಮಾಂಝಿ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿದ್ದರು.

ಬಿಹಾರ ಸರ್ಕಾರದ ಸಂಪುಟ ವಿಸ್ತರಣೆಯಲ್ಲಿ ಬಿಜೆಪಿ ನಾಯಕರಿಗೆ ಅವಕಾಶ ಕೊಡದೇ ಇರುವುದು ಮತ್ತು ಜಿತನ್‌ರಾಂ ಮಾಂಝಿ, ರಾಬ್ಡಿ ದೇವಿ ನಿತೀಶ್‌ ಪರವಾಗಿ ವಾದ ಮಂಡನೆ ಮಾಡಿರುವುದು ಮಹತ್ವದ ಬೆಳವಣಿಗೆಯಾಗಿದೆ. ನಿತೀಶ್‌ಕುಮಾರ್‌ರನ್ನು ಮನವೊಲಿಸಲು ಪ್ರಧಾನಿ ಮೋದಿ, ಬಿಜೆಪಿ ಅಧ್ಯಕ್ಷ ಅಮಿತ್‌ ಶಾ ಮುಂದಾಗುವ ವರೆಗೆ ಬಿಹಾರದ ಬಗ್ಗೆ ಏನನ್ನೂ ಹೇಳುವಂತಿಲ್ಲ.

ಮೈತ್ರಿ ಬಿಡಲು ನಾವೂ ರೆಡಿ: ಅಖೀಲೇಶ್‌
ಉತ್ತರಪ್ರದೇಶದಲ್ಲಿ ಪ್ರತಿಪಕ್ಷಗಳ ಮಹಾಮೈತ್ರಿ ಬಹುತೇಕ ಮುರಿದುಬೀಳುವ ಹಂತಕ್ಕೆ ತಲುಪಿದೆ. ಮುಂಬರುವ ವಿಧಾನಸಭೆ ಉಪಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸುವುದಾಗಿ ಬಿಎಸ್‌ಪಿ ನಾಯಕಿ ಮಾಯಾವತಿ ಘೋಷಿಸಿದ ಬೆನ್ನಲ್ಲೇ ಮಂಗಳವಾರ ಎಸ್‌ಪಿ ನಾಯಕ ಅಖೀಲೇಶ್‌ ಯಾದವ್‌ ಅವರೂ ಇದೇ ಮಾದರಿಯಲ್ಲಿ ಮಾತನಾಡಿದ್ದಾರೆ. ಬಿಎಸ್‌ಪಿ ಮೈತ್ರಿ ಮುರಿದುಕೊಂಡರೆ, ನಾವು ಕೂಡ ಏಕಾಂಗಿಯಾಗಿ ಸ್ಪರ್ಧಿಸಲು ಸಿದ್ಧ ಎಂದು ಅವರು ತಿಳಿಸಿದ್ದಾರೆ. ಈ ನಡುವೆ, ಮಂಗಳವಾರ ತಮ್ಮ ನಿಲುವು ಸ್ವಲ್ಪಮಟ್ಟಿಗೆ ಸಡಿಲಿಸಿರುವ ಮಾಯಾವತಿ, “ಉಪಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸಿದರೂ, ಎಸ್‌ಪಿ ಜತೆಗಿನ ಮೈತ್ರಿಯನ್ನು ಶಾಶ್ವತವಾಗಿ ಕಡಿದುಕೊಳ್ಳುವುದಿಲ್ಲ’ ಎಂದು ಸ್ಪಷ್ಟಪಡಿಸಿದ್ದಾರೆ.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaa

Ex-IPS officer ಸಂಜೀವ್ ಭಟ್‌ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

police crime

Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.