ಈ ಮನೆ 2 ರಾಜ್ಯಕ್ಕೆ ಸೇರ್ಪಡೆ; ನಾಲ್ಕು ಕೋಣೆ ಮಹಾರಾಷ್ಟ್ರಕ್ಕೆ, ನಾಲ್ಕು ಕೋಣೆ ತೆಲಂಗಾಣಕ್ಕೆ ಸೇರಿದೆ!

ಎಎನ್ ಐ ನ್ಯೂಸ್ ಏಜೆನ್ಸಿ ವರದಿ ಪ್ರಕಾರ, ಕಾನೂನು ಬದ್ಧವಾಗಿ ಈ ಗ್ರಾಮಗಳು ಮಹಾರಾಷ್ಟ್ರಕ್ಕೆ ಸೇರಿವೆ.

Team Udayavani, Dec 16, 2022, 1:52 PM IST

ಈ ಮನೆ 2 ರಾಜ್ಯಕ್ಕೆ ಸೇರ್ಪಡೆ; ನಾಲ್ಕು ಕೋಣೆ ಮಹಾರಾಷ್ಟ್ರಕ್ಕೆ, ನಾಲ್ಕು ಕೋಣೆ ತೆಲಂಗಾಣಕ್ಕೆ ಸೇರಿದೆ!

ಮಹಾರಾಷ್ಟ್ರ/ತೆಲಂಗಾಣ: ಒಂದೇ ಮನೆಯ ಕುಟುಂಬ ಸದಸ್ಯರು ಎರಡು ರಾಜ್ಯಗಳ ಗಡಿಯಲ್ಲಿ ವಾಸಿಸುತ್ತಿರುವುದನ್ನು ಕಂಡಿದ್ದೀರಾ? ಒಂದು ಅಪರೂಪದ ಪ್ರಕರಣದಲ್ಲಿ ಚಂದ್ರಾಪುರ ಜಿಲ್ಲೆಯ ಸೀಮಾವರ್ತಿ ಜೀವತಿ ತೆಹಸಿಲ್ ನ ಮಹಾರಾಜಗುಡಾ ಗ್ರಾಮದಲ್ಲಿ ಪವಾರ್ ಕುಟುಂಬ ಮಹಾರಾಷ್ಟ್ರ ಮತ್ತು ತೆಲಂಗಾಣ ರಾಜ್ಯದಲ್ಲಿ ವಾಸವಾಗಿರುವುದಾಗಿ ಎಎನ್ ಐ ನ್ಯೂಸ್ ಏಜೆನ್ಸಿ ವರದಿ ಮಾಡಿದೆ.

ಇದನ್ನೂ ಓದಿ:ಸೇಫ್ ಲಾಕರ್‌ನಲ್ಲಿದ್ದ ಅರ್ಧ ಕೇಜಿ ಚಿನ್ನ ಮಾಯ; 30 ಲಕ್ಷ ರೂ. ಮೌಲ್ಯದ ಚಿನ್ನ ಕಳೆದುಕೊಂಡ ವೃದ್ಧ

13 ಸದಸ್ಯರನ್ನು ಹೊಂದಿರುವ ಪವಾರ್ ಕುಟುಂಬವು ಎರಡೂ ರಾಜ್ಯದ ಗಡಿಯಲ್ಲಿರುವ 14 ಹಳ್ಳಿಗಳ ಜಟಾಪಟಿ ನಡುವೆ ವಾಸಿಸುತ್ತಿವೆ. ಮಹಾರಾಷ್ಟ್ರ-ತೆಲಂಗಾಣ ಗಡಿಯಲ್ಲಿರುವ 14 ಹಳ್ಳಿಗಳು ತಮಗೆ ಸೇರಿವೆ ಎಂದು ಎರಡೂ ರಾಜ್ಯಗಳು ಕಿತ್ತಾಡುತ್ತಿರುವುದಾಗಿ ವರದಿ ವಿವರಿಸಿದೆ.

ಪವಾರ್ ಕುಟುಂಬ ಎರಡೂ ರಾಜ್ಯಗಳ ಪಡಿತರ ಸೇರಿದಂತೆ ಕಲ್ಯಾಣ ಕಾರ್ಯಕ್ರಮಗಳ ಸೌಲಭ್ಯಗಳನ್ನು ಪಡೆಯುತ್ತಿದೆ. ಅಷ್ಟೇ ಅಲ್ಲ ತಮ್ಮ ವಾಹನಗಳಿಗೆ ಮಹಾರಾಷ್ಟ್ರ-ತೆಲಂಗಾಣ ರಾಜ್ಯದ ನಂಬರ್ ಪ್ಲೇಟ್ ಗಳನ್ನು ಹೊಂದಿರುವುದಾಗಿ ವರದಿ ಹೇಳಿದೆ.

ಪವಾರ್ ಕುಟುಂಬ ಎರಡೂ ರಾಜ್ಯಗಳಿಗೆ ತೆರಿಗೆ ಪಾವತಿಸುತ್ತಿದೆ. ಮಹಾರಾಜಗುಡದಲ್ಲಿರುವ 10 ಕೋಣೆಯುಳ್ಳ ಮನೆಯ ನಾಲ್ಕು ಕೋಣೆ ತೆಲಂಗಾಣ ರಾಜ್ಯಕ್ಕೆ ಸೇರಿದ್ದು, ಇನ್ನುಳಿದ ನಾಲ್ಕು ಕೋಣೆಗಳು ಮಹಾರಾಷ್ಟ್ರಕ್ಕೆ ಸೇರಿದೆ. ಮನೆಯ ಅಡುಗೆ ಕೋಣೆ ತೆಲಂಗಾಣ ಪ್ರದೇಶದಲ್ಲಿದ್ದು, ಬೆಡ್ ರೂಂ ಮತ್ತು ಹಾಲ್ ಮಹಾರಾಷ್ಟ್ರ ಪ್ರದೇಶಕ್ಕೆ ಸೇರಿದೆ. ಪವಾರ್ ಕುಟುಂಬ ಕಳೆದ ಕೆಲವು ವರ್ಷಗಳಿಂದ ಈ ಪ್ರದೇಶದಲ್ಲಿ ವಾಸಿಸುತ್ತಿರುವುದಾಗಿ ವರದಿ ತಿಳಿಸಿದೆ.

ಮನೆ ಮಾಲೀಕ ಉತ್ತಮ್ ಪವಾರ್ ಎಎನ್ ಐ ಜೊತೆ ಮಾತನಾಡುತ್ತ, ನಮ್ಮ ಮನೆ ಮಹಾರಾಷ್ಟ್ರ ಮತ್ತು ತೆಲಂಗಾಣ ರಾಜ್ಯದ ನಡುವೆ ಹಂಚಿಹೋಗಿದೆ. ಆದರೆ ಈವರೆಗೂ ನಮಗೆ ಯಾವುದೇ ಸಮಸ್ಯೆಯಾಗಿಲ್ಲ. ನಾವು ಎರಡೂ ರಾಜ್ಯಗಳಿಗೆ ಆಸ್ತಿ ತೆರಿಗೆಯನ್ನು ಪಾವತಿಸುತ್ತಿದ್ದು, ಎರಡೂ ರಾಜ್ಯಗಳ ಯೋಜನೆಗಳ ಪ್ರಯೋಜನ ಪಡೆದುಕೊಳ್ಳುತ್ತಿದ್ದೇವೆ ಎಂದು ತಿಳಿಸಿದ್ದಾರೆ.

1969ರಲ್ಲಿ ಗಡಿ ವಿವಾದ ಇತ್ಯರ್ಥವಾದ ನಂತರ ಪವಾರ್ ಕುಟುಂಬ ಎರಡು ರಾಜ್ಯಗಳಲ್ಲಿ ಹಂಚಿ ಹೋಗಿದೆ. ನಂತರ ಕುಟುಂಬ ಸದಸ್ಯರ ಒಮ್ಮತದ ಮೇರೆಗೆ ಮನೆಯೂ ಇಬ್ಬಾಗವಾಗಿತ್ತು. ಎಎನ್ ಐ ನ್ಯೂಸ್ ಏಜೆನ್ಸಿ ವರದಿ ಪ್ರಕಾರ, ಕಾನೂನು ಬದ್ಧವಾಗಿ ಈ ಗ್ರಾಮಗಳು ಮಹಾರಾಷ್ಟ್ರಕ್ಕೆ ಸೇರಿವೆ. ಆದರೂ ತೆಲಂಗಾಣ ಸರ್ಕಾರ ನಿರಂತರವಾಗಿ ವಿವಿಧ ಯೋಜನೆಗಳ ಮೂಲಕ ಈ ಹಳ್ಳಿಗಳ ಜನರನ್ನು ತನ್ನತ್ತ ಸೆಳೆಯುತ್ತಿರುವುದಾಗಿ ತಿಳಿಸಿದೆ.

ಟಾಪ್ ನ್ಯೂಸ್

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.