ಹೇಗೆ ಬದಲಾಗಿದೆ ಜಮ್ಮು-ಕಾಶ್ಮೀರ?


Team Udayavani, Dec 2, 2020, 6:10 AM IST

ಹೇಗೆ ಬದಲಾಗಿದೆ ಜಮ್ಮು-ಕಾಶ್ಮೀರ?

ಜಮ್ಮು-ಕಾಶ್ಮೀರ ಕೇಂದ್ರಾಡಳಿತ ಪ್ರದೇಶವಾಗಿ ಬದಲಾದ ಅನಂತರದಿಂದ ಕಣಿವೆ ಪ್ರದೇಶ ಹಲವು ಅಭೂತಪೂರ್ವ ಸುಧಾರಣೆಗೆ ಸಾಕ್ಷಿಯಾಗುತ್ತಿದೆ. ನಮ್ಮ ಭದ್ರತಾ ಪಡೆಗಳು ಜಮ್ಮು-ಕಾಶ್ಮೀರದಲ್ಲಿ ಉಗ್ರರ ಉಪಟಳವನ್ನು ನಿರಂತರವಾಗಿ ಹತ್ತಿಕ್ಕುತ್ತಾ ಸಾಗಿವೆ. ಪ್ರತ್ಯೇಕತಾವಾದದ ಕೂಗು, ಕಲ್ಲುತೂರಾಟದಂಥ ಘಟನೆಗಳು ಗಣನೀಯವಾಗಿ ತಗ್ಗಿವೆ. ಎಲ್ಲಕ್ಕಿಂತ ಮುಖ್ಯವಾಗಿ ಕಾಶ್ಮೀರದಲ್ಲಿನ ಹಳೆಯ ಕಾನೂನುಗಳು ಬದಲಾಗಿರುವುದರಿಂದ ಕಣಿವೆ ಪ್ರದೇಶದಲ್ಲಿ ಅಭಿವೃದ್ಧಿ ಕೆಲಸಗಳೂ ನಿರ್ವಿಘ್ನವಾಗಿ ಸಾಗುತ್ತಿವೆ…ಹಾಗಿದ್ದರೆ ಈ ಒಂದು ವರ್ಷದಲ್ಲಿ ಅಲ್ಲಿ ಏನೇನು ಬದಲಾವಣೆಯಾಗಿದೆ? ಇಲ್ಲಿದೆ ಮಾಹಿತಿ.

ನವ ಕಾನೂನುಗಳ ಅನುಷ್ಠಾನ
ಈ ಹಿಂದೆ ಜಮ್ಮು ಕಾಶ್ಮೀರದಲ್ಲಿ 354 ರಾಜ್ಯ ಕಾನೂನುಗಳಿದ್ದವು, ಇವುಗಳಲ್ಲಿ ಈಗ 164 ಕಾನೂನುಗಳನ್ನು ರದ್ದುಪಡಿಸಿದ್ದಷ್ಟೇ ಅಲ್ಲದೇ, 138 ಕಾನೂನುಗಳನ್ನು ಬದಲಿಸಲಾಗಿದೆ. ಇನ್ನು ಈವರೆಗೂ ಆ ಭಾಗಕ್ಕೆ ಅನ್ವಯವಾಗದಿದ್ದ 170 ಕೇಂದ್ರೀಯ ಕಾನೂನುಗಳನ್ನೀಗ ಜಾರಿ ಮಾಡಲಾಗಿದೆ.

ಪಹಾಡಿಗಳಿಗೆ ಮೊದಲ ಬಾರಿ ಆದ್ಯತೆ
ಪಹಾಡಿ ಭಾಷಿಗ ಜನರು ಕಾಶ್ಮೀರ ಕೇಂದ್ರಿತ ರಾಜಕಾರಣಿಗಳ ಅವಗಣನೆಗೆ ಗುರಿಯಾಗುತ್ತಲೇ ಬಂದಿದ್ದರು. ಈಗ ಪಹಾಡಿ ಜನರಿಗೆ 4 ಪ್ರತಿಶತ ಮೀಸಲಾತಿ ಹಾಗೂ ಆರ್ಥಿಕವಾಗಿ ದುರ್ಬಲ ವರ್ಗಗಳಿಗೆ 10 ಪ್ರತಿಶತ ಮೀಸಲಾತಿ ಕಲ್ಪಿಸಲಾಗಿದೆ. ಇಲ್ಲಿಯವರೆಗೂ ವಾಸ್ತವಿಕ ಗಡಿ ನಿಯಂತ್ರಣ ರೇಖೆಯ ಗ್ರಾಮಗಳಲ್ಲಿ ವಾಸಿಸುತ್ತಿದ್ದ ಜನರಿಗಷ್ಟೇ ಮೀಸಲಾತಿ ಸಿಗುತ್ತಿತ್ತು. ಇನ್ನು ಅಲ್ಪಸಂಖ್ಯಾಕ ವರ್ಗಗಳಿಗೆ ನೀಡಲಾಗುತ್ತಿದ್ದ ಸ್ಕಾಲರ್‌ಶಿಪ್‌ಗ್ಳಲ್ಲಿ ಕಳೆದೊಂದು ವರ್ಷದಲ್ಲಿ 262 ಪ್ರತಿಶತ ಏರಿಕೆಯಾಗಿದೆ.

ನಿದ್ದೆಗೆಟ್ಟ ಉಗ್ರ ಸಂಘಟನೆಗಳು
ಸದಾ ಕಲ್ಲು ತೂರಾಟಗಳಿಂದಲೇ ಸುದ್ದಿಯಲ್ಲಿರುತ್ತಿದ್ದ ಕಣಿವೆಯಲ್ಲಿ ಈಗ ಹಿಂಸಾತ್ಮಕ ಘಟನೆಗಳು ಗಣನೀಯವಾಗಿ ತಗ್ಗಿವೆ. ಆರ್ಟಿಕಲ್‌ 370 ರದ್ದತಿಯ ಒಂದೇ ವರ್ಷದಲ್ಲಿ ಕಾಶ್ಮೀರದಲ್ಲಿ ಉಗ್ರ ಚಟುವಟಿಕೆಗಳಲ್ಲಿ 46 ಪ್ರತಿಶತ ಇಳಿಕೆಯಾಗಿದೆ. ಇದು ಕಳೆದ 4 ದಶಕಗಳಲ್ಲೇ ಅತ್ಯಧಿಕ ಇಳಿಕೆ ಎಂಬುದು ಗಮನಾರ್ಹ. ಕಳೆದ ಒಂದು ವರ್ಷದಲ್ಲಿ ಹಿಜ್ಬುಲ್‌, ಲಷ್ಕರ್‌ ಉಗ್ರ ಸಂಘಟನೆಗಳ ಅನೇಕ ಸ್ಥಳೀಯ ನಾಯಕರು, ಜೆಹಾದಿಗಳು ಭದ್ರತಾಪಡೆಗಳ ಕಾರ್ಯಾಚರಣೆಗೆ ಬಲಿಯಾಗಿದ್ದಾರೆ. ಕಳೆದ ಆಗಸ್ಟ್‌ ತಿಂಗಳಿಂದ ಇಲ್ಲಿಯವರೆಗೂ 178 ಉಗ್ರರು ಹತರಾಗಿದ್ದಾರೆ. ಇದರಲ್ಲಿ 78 ಹಿಜ್ಬುಲ್‌ ಉಗ್ರರು , 20 ಲಷ್ಕರ್‌-ಎ-ತಯ್ಯಬಾ ಉಗ್ರರು, 32 ಉಗ್ರರು ಜೈಶ್‌-ಎ-ಮೊಹಮ್ಮದ್‌ ಸಂಘಟನೆಯ ಉಗ್ರರು ಬಲಿಯಾಗಿದ್ದರೆ, ಐಎಸ್‌ಜೆಕೆ ಮತ್ತು ಬೆಳೆಯುತ್ತಿದ್ದ ಅನ್ಸರ್‌ ಗಜ್ವತ್‌-ಉಲ್‌ ಹಿಂದ್‌ನ ಪ್ರಮುಖ ಜೆಹಾದಿಗಳನ್ನು ಭದ್ರತಾ ಪಡೆಗಳು ಹೊಡೆದುರುಳಿಸಿವೆ. ಕಳೆದೊಂದು ವರ್ಷದಲ್ಲಿ ಉಗ್ರ ಸಂಘಟನೆಗಳಿಗೆ ಸೇರುತ್ತಿದ್ದ ಯುವಕರ ಸಂಖ್ಯೆಯಲ್ಲಿ 40 ಪ್ರತಿಶತ ಇಳಿಕೆಯಾಗಿದೆ.

ಆರ್ಥಿಕ ಪ್ಯಾಕೇಜುಗಳು
ಇದೇ ವರ್ಷದ ಜನವರಿ ತಿಂಗಳಲ್ಲಿ ಮೋದಿ ಸರಕಾರ ಜಮ್ಮು-ಕಾಶ್ಮೀರ ಕೇಂದ್ರಾಡಳಿತ ಪ್ರದೇಶದ ಅಭಿವೃದ್ಧಿ ಕಾಮಗಾರಿಗಳಿಗಾಗಿ 80 ಸಾವಿರ ಕೋಟಿ ರೂಪಾಯಿ ಗಳ ಪ್ಯಾಕೇಜ್‌ ಘೋಷಿಸಿದೆ. ಇದರಿಂದಾಗಿ ದಶಕಗಳಿಂದ ನನೆಗುದಿಗೆ ಬಿದ್ದಿದ್ದ ಯೋಜನೆಗಳಿಗೆಲ್ಲ ಮರುಜೀವ ದೊರೆತಂತಾಗಿದೆ. ಈ ಅನುದಾನದಲ್ಲಿ ಐಐಟಿ, ಐಐಎಂ ಮತ್ತು ಏಮ್ಸ್‌ನಂಥ ಶೈಕ್ಷಣಿಕ ಸಂಸ್ಥೆಗಳನ್ನು ನಿರ್ಮಿಸಲಾಗುತ್ತಿದೆ. ಜಮ್ಮು-ಕಾಶ್ಮೀರದಲ್ಲಿ ಕಾನೂನು ಹಾಗೂ ನಿಯಮಗಳ ಬದಲಾವಣೆ ಯಿಂದಾಗಿ ಭಾರತದ ಇತರ ಭಾಗಗಳಿಗೆ ಸಿಗುತ್ತಿದ್ದ ಸ್ಕೀಮುಗಳ ಪ್ರಯೋಜನವೂ ಈ ಪ್ರದೇಶಕ್ಕೆ ವಿಸ್ತರಣೆಗೊಂಡಿದೆ. ಕೇಂದ್ರ ಸರಕಾರ ಪಿಎಂ- ಕಿಸಾನ್‌, ಪಿಎಂ-ಕಿಸಾನ್‌ ಪೆನ್ಶನ್‌, ಪ್ರಧಾನಮಂತ್ರಿ ಜನಧನ ಯೋಜನೆ, ಸ್ಟಾಂಡ್‌ ಅಪ್‌ ಇಂಡಿಯಾ ಸೇರಿದಂತೆ 85 ಜನಾಭಿವೃದ್ಧಿ ಸ್ಕೀಮುಗಳನ್ನು ಜಮ್ಮು-ಕಾಶ್ಮೀರಕ್ಕೆ ತಲುಪಿಸಿದೆ. ಇನ್ನು ಅಟಲ್‌ ಪೆನ್ಶನ್‌ ಯೋಜನೆ ಸೇರಿದಂತೆ ಹಲವಾರು ವಿಮಾ ಯೋಜನೆಗಳನ್ನೂ ಪರಿಚಯಿಸಲಾಗಿದೆ.

ಪ್ರವಾಸೋದ್ಯಮಕ್ಕೆ ಹೊಡೆತ
ಆರ್ಟಿಕಲ್‌ 370 ರದ್ದತಿಯ ಅನಂತರದ ಮೂರು ದಿನಗಳಲ್ಲಿ ಕೇಂದ್ರ ಸರಕಾರ, ಪ್ರವಾಸಿಗರಿಗೆಲ್ಲ ಕಾಶ್ಮೀರ ತೊರೆಯಲು ಹೇಳಿತ್ತು. ತದನಂತರ ಸುರಕ್ಷತ ದೃಷ್ಟಿಯಿಂದ ಕಣಿವೆ ಭಾಗದಲ್ಲಿ ಕಠಿನತಮ ನಿರ್ಬಂಧಗಳನ್ನು ಜಾರಿ ಮಾಡಿದ ಕಾರಣ, ಪ್ರವಾಸೋದ್ಯಮ ಕ್ಷೇತ್ರಕ್ಕೆ ಭಾರೀ ಪೆಟ್ಟು ಬಿದ್ದಿತು. ಕಳೆದ ಡಿಸೆಂಬರ್‌ ತಿಂಗಳಲ್ಲಿ ಕಾಶ್ಮೀರದ ಆರ್ಥಿಕತೆಗೆ 17,800 ಕೋಟಿ ರೂಪಾಯಿ ನಷ್ಟವಾದರೆ, ಆಗಸ್ಟ್‌ನಿಂದ ಅಕ್ಟೋಬರ್‌ 2019ರ ನಡುವೆ 4.9 ಲಕ್ಷ ಉದ್ಯೋಗಗಳು ಹಾನಿಯಾದವು. ನಿರ್ಬಂಧಗಳನ್ನು ಹಂತ ಹಂತವಾಗಿ ಸಡಿಲಿಸಿದ ಅನಂತರ 2020ರಲ್ಲಿ ಪರಿಸ್ಥಿತಿ ಸುಧಾರಣೆಯಾಗಬಹುದು ಎನ್ನುವ ನಿರೀಕ್ಷೆಯಿತ್ತಾದರೂ, ದುರ್ದೈವವಶಾತ್‌ ಕೋವಿಡ್‌ ಕಾರಣದಿಂದಾಗಿ ಕಾಶ್ಮೀರದ ಪ್ರವಾಸೋದ್ಯಮ ಇನ್ನೂ ಚೇತರಿಸಿಕೊಂಡಿಲ್ಲ.

ಅಭಿವೃದ್ಧಿ ಕಾಮಗಾರಿಗಳ ಪರ್ವ
ಮುಂದಿನ ವರ್ಷದೊಳಗೆ ಪ್ರಪಂಚದಲ್ಲೇ ಅತೀ ಎತ್ತರದ ರೈಲ್ವೇ ಸೇತುವೆ ಉದ್ಘಾಟನೆಯಾಗಲಿದೆ. ಈ ಸೇತುವೆ ಚೆನಾಬ್‌ ನದಿಯ ಮೇಲೆ ಹಾದು ಹೋಗಲಿದ್ದು, ಕಣಿವೆ ಪ್ರದೇಶವನ್ನು ಭಾರತದ ಇತರೆ ಭಾಗಗಳೊಂದಿಗೆ ರೈಲ್ವೇ ಮೂಲಕ ಬೆಸೆಯಲಿದೆ. ಇದಷ್ಟೇ ಅಲ್ಲದೇ ಗಡಿ ಭಾಗದ ಪ್ರಾಂತ್ಯಗಳಲ್ಲಿನ ಸುಗಮ ಸಂಚಾರಕ್ಕೆ ಈ ಒಂದು ವರ್ಷದಲ್ಲೇ ಆರು ಸೇತುವೆಗಳ ನಿರ್ಮಾಣಕ್ಕೆ ಚಾಲನೆ ನೀಡಲಾಗಿದೆ. ಕಳೆದ 50 ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ಶಾಹ್‌ಪುರ್‌ ಖಂಡಿ ವಿದ್ಯುತ್‌ ಮತ್ತು ಕೃಷಿ ಯೋಜನೆ ಮರು ಜೀವ ಪಡೆದುಕೊಂಡಿದೆ. ಇನ್ನು ಕಾಶ್ಮೀರ ಕಣಿವೆಯನ್ನು ಶೋಪಿಯಾಂ ಮೂಲಕ ಗಡಿ ಪ್ರದೇಶವಾದ ಪೂಂಛ…ಗೆ ಬೆಸೆಯುವ ಐತಿಹಾಸಿಕ ಮೊಘಲ್‌ ರಸ್ತೆಯ ಅಭಿವೃದ್ಧಿಯಂತೂ ಭರದಿಂದ ಸಾಗಿದೆ. ಶ್ರೀನಗರ ಮತ್ತು ಜಮ್ಮು ನಡುವೆ ಮೆಟ್ರೋ ರೈಲು ಯೋಜನೆಯೂ ನಿರ್ಮಾಣಗೊಳ್ಳುತ್ತಿದೆ. ಸೆಪ್ಟಂಬರ್‌ 2019ರಲ್ಲೇ ಕೇಂದ್ರವು 15 ವಿದ್ಯುತ್‌ ಯೋಜನೆಗಳಿಗೆ ಚಾಲನೆ ನೀಡಿದ್ದಷ್ಟೇ ಅಲ್ಲದೇ 10 ಸಾವಿರ ಕೋಟಿ ವೆಚ್ಚದ ಇನ್ನಿತರ 20 ಅಭಿವೃದ್ಧಿ ಯೋಜನೆಗಳ ಆರಂಭಕ್ಕೂ ಸಹಿ ಹಾಕಿದ್ದು, ವೇಗವಾಗಿ ಅನುಷ್ಠಾನಗೊಳ್ಳುತ್ತಿವೆ.

ಟಾಪ್ ನ್ಯೂಸ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.