ಆಧಾರ್‌ ಕಾರ್ಡ್‌ ತಪ್ಪುಗಳನ್ನು ನೀವೇ ಸರಿಪಡಿಸಬಹುದು- ಹೇಗೆ ಗೊತ್ತಾ ?


Team Udayavani, May 6, 2017, 4:42 PM IST

Aadhar Card-700.jpg

ಹೊಸದಿಲ್ಲಿ : ಈಗ ಎಲ್ಲದಕ್ಕೂ ಒಂದೇ ಕಾರ್ಡ್‌ – ಅದುವೇ ಆಧಾರ್‌ ಕಾರ್ಡ್‌ ಎಂಬ ಹಂತವನ್ನು ನಾವು ತಲುಪಿದ್ದೇವೆ. 

ಆದರೆ ನಮ್ಮ ಆಧಾರ್‌ ಕಾರ್ಡ್‌ನಲ್ಲಿ ನಮ್ಮ ಹೆಸರು, ವಿಳಾಸ, ಲಿಂಗ್‌, ಹುಟ್ಟಿದ ದಿನ, ಮೊಬೈಲ್‌ ಸಂಖ್ಯೆ, ಇ-ಮೇಲ್‌ ಐಡಿ ಮುಂತಾದ ಮಾಹಿತಿಗಳನ್ನು ದಾಖಲಿಸುವಾಗ ಸಹಜವಾಗಿಯೇ ತಪ್ಪುಗಳು ನುಸುಳಿರಬಹುದು. ಆ ತಪ್ಪುಗಳಿಂದಾಗಿ ನೀವು ಇನ್ನಿಲ್ಲದ ಪಾಡನ್ನು ಪಡಬೇಕಾದ ಸ್ಥಿತಿ ಇದೆ. ಇದನ್ನು ನಿವಾರಿಸುವ ಬಗೆ ಹೇಗೆ ಎಂಬುದು ಅನೇಕರಿಗೆ ಗೊತ್ತಿಲ್ಲ. ಅದಕ್ಕಾಗಿ ಇಲ್ಲೊಂದು ಮಾರ್ಗದರ್ಶಿ ಇದೆ.

ಆಧಾರ್‌ ಕಾರ್ಡ್‌ನಲ್ಲಿ ತಪ್ಪಾಗಿ  ದಾಖಲಾಗಿರುವ ನಿಮ್ಮ ಖಾಸಗಿ ದಾಖಲೆಗಳನ್ನು ಸರಿಪಡಿಸಲು ನೀವು ಪ್ರಪ್ರಥಮವಾಗಿ ಯುಐಡಿಎಆಐ ವೆಬ್‌ ಸೈಟ್‌ ಸಂದರ್ಶಿಸಬೇಕು. ಅದರ ಯುಆರ್‌ಎಲ್‌ ಹೀಗಿದೆ : 

Visit the official UIDAI ebsite: https://ssup.uidai.gov.in/web/guest/update

ಕೆಲವೊಂದು ಮುಖ್ಯ ಖಾಸಗಿ ವಿವರಗಳನ್ನು ಸರಿಪಡಿಸಲು ಅಗತ್ಯವಿರುವ ದಾಖಲೆಪತ್ರಗಳನ್ನು ಸಲ್ಲಿಸಬೇಕಾಗುವುದು; ಆದರೆ ಮೊಬೈಲ್‌ ಸಂಖ್ಯೆ, ಲಿಂಗ, ವಿಳಾಸ ಮುಂತಾದ ವಿವರಗಳಲ್ಲಿನ ತಪ್ಪುಗಳನ್ನು ಸರಿಪಡಿಸಲು ಯಾವುದೇ ದಾಖಲೆ ಪತ್ರಗಳು ಬೇಕಾಗಿಲ್ಲ. 

ಆಧಾರ್‌ ವೆಬ್‌ಸೈಟ್‌ ಸಂದರ್ಶಿಸಿದಾಗ ನಿಮಗೆ ಈ ಕೆಳಗಿನ ಆಯ್ಕೆ ಗೋಚರವಾಗುತ್ತದೆ : 

ಮೇಲಿನ ಚಿತ್ರದಲ್ಲಿ ತೋರಿಸದಂತೆ ನಿಮ್ಮ ಆಯ್ಕೆಯನ್ನು ನೀವು ಕ್ಲಿಕ್‌ ಮಾಡುವ ಮೂಲಕ ಆಯ್ದುಕೊಳ್ಳಬೇಕು. 

ನಿಮ್ಮ ಆಧಾರ್‌ ನಂಬರ್‌ ಎಂಟರ್‌ ಮಾಡಿದಾಕ್ಷಣ ನಿಮಗೆ ನಿಮ್ಮ ನೋಂದಾಯಿತ ಮೊಬೈಲ್‌ ಸಂಖ್ಯೆಯ ಪೋನಿಗೆ ಒನ್‌ ಟೈಮ್‌ ಪಾಸ್‌ವರ್ಡ್‌ (ಓಟಿಪಿ) ಬರುತ್ತದೆ. 

ಟೆಕ್ಸ್‌ಟ್‌ ವೆರಿಫಿಕೇಶನ್‌ ಬಾಕ್ಸ್‌ನಲ್ಲಿ ನೀವು ನಿಮಗೆ ದೊರಕಿರುವ ಓಟಿಪಿಯನ್ನು ಎಂಟರ್‌ ಮಾಡಬೇಕು. ಅದಕ್ಕಾಗಿ  ನಿಮ್ಮ ಕಂಪ್ಯೂಟರ್‌ ಪರದೆಯಲ್ಲಿ ಈ ಚಿತ್ರವು ಕಾಣಿಸಿಕೊಳ್ಳುತ್ತದೆ : 


ಇದನ್ನು ಕ್ಲಿಕ್‌ ಮಾಡಿದಾಕ್ಷಣ ನಿಮಗೆ ಹಲವಾರು ಆಯ್ಕೆಗಳು ಗೋಚರವಾಗುತ್ತವೆ : ಹೆಸರು ಬದಲಾವಣೆ, ಹುಟ್ಟಿದ ದಿನಾಂಕ, ಲಿಂಗ, ವಿಳಾಸ ಬದಲಾವಣೆ ಇತ್ಯಾದಿ.

ನೇಮ್‌ ಚೇಂಜ್‌ ಆಪ್ಶನ್‌ ಅನ್ನು ನೀವು ಆಯ್ಕೆ ಮಾಡಬೇಕು; ಬಳಿಕ ಅಲ್ಲಿ ಸರಿಯಾದ ರೀತಿಯಲ್ಲಿ ನಿಮ್ಮ ಹೆಸರನ್ನು ತುಂಬಬೇಕು. 

ಮುಂದಿನ ಸ್ಟೆಪ್‌ ಏನೆಂದರೆ ಅಗತ್ಯವಿರುವ ದಾಖಲೆಪತ್ರಗಳನ್ನುಸಲ್ಲಿಸುವುದು. 

ನಿಮಗೆ ಎರಡು ಬಿಪಿಓ ಸರ್ವಿಸ್‌ ಪ್ರೊವೈಡರ್‌ ಆಯ್ಕೆಗೆ ಸಿಗುತ್ತವೆ. ಅವುಗಳಲ್ಲಿ ಯಾವುದಾದರೂ ಒಂದನ್ನು ಕ್ಲಿಕ್‌ ಮಾಡಬೇಕು. 

ಬದಲಾವಣೆ/ತಿದ್ದುಪಡಿಯ ಎಲ್ಲ ಪ್ರಕ್ರಿಯೆಗಳು ಮುಗಿದ ಬಳಿಕ ನೀವು “ಸಬ್‌ಮಿಟ್‌’ ಮಾಡಬೇಕಾಗುತ್ತದೆ. ಅದು ನಿಮ್ಮ ಕಂಪ್ಯೂಟರ್‌ ಪರದೆಯಲ್ಲಿ ಈ ರೀತಿಯಾಗಿ ಗೋಚರವಾಗುತ್ತದೆ:

ಇದೆಲ್ಲವೂ ಮುಗಿದ ಬಳಿಕ ನಿಮಗೆ ಯುಆರ್‌ಎನ್‌ ನಂಬರ್‌ ಸಿಗುತ್ತದೆ. ಈ ನಂಬರನ್ನು ನೀವು ಜಾಗ್ರತೆಯಾಗಿ ಇರಿಸಿಕೊಂಡು ನೀವು ಮಾಡಿರುವ ಬದಲಾವಣೆ/ತಿದ್ದುಪಡಿಗಳು ಕಾರ್ಯಗತವಾಗುವುದನ್ನು ಆನ್‌ಲೈನ್‌ನಲ್ಲೇ ತಿಳಿದುಕೊಳ್ಳಬಹುದು. 

ಟಾಪ್ ನ್ಯೂಸ್

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.