ಶುದ್ಧ ಗಂಗೆಯಲ್ಲಿ ದೋಣಿ ವಿಹಾರ ಮಾಡುತ್ತಾ ನಮ್ಮನ್ನೇ ಬೈಯುತ್ತೀರಾ?


Team Udayavani, Mar 19, 2019, 8:51 AM IST

yogi-adithyanath-600.jpg

ಲಕ್ನೋ: ಉತ್ತರಪ್ರದೇಶದಲ್ಲಿ ಕೈ-ಕಮಲ ನಾಯಕರ ರಾಜಕೀಯ ಆರೋಪ ಪ್ರತ್ಯಾರೋಪಗಳು ದಿನೇದಿನೇ ಕಾವೇರುತ್ತಿದೆ. ಒಂದೆಡೆ ಕಾಂಗ್ರೆಸ್‌ ಪಕ್ಷದ ಹೊಸ ಸೆನ್ಸೇಷನ್‌ ಪ್ರಿಯಾಂಕಾ ವಾಧ್ರಾ ಗಾಂಧಿ ಅವರು ಮೂರು ದಿನಗಳ ‘ಗಂಗಾ ಯಾತ್ರೆ’ ಕೈಗೊಂಡಿದ್ದಾರೆ. ಈ ಸಂದರ್ಭದಲ್ಲಿ ಅವರು ಮೋದಿ ನೇತೃತ್ವದ ಕೇಂದ್ರ ಸರಕಾರದ ಸಾಧನೆ ಏನು ಎಂದು ಮತದಾರರಲ್ಲಿ ಪ್ರಶ್ನಿಸುತ್ತಿದ್ದಾರೆ. ಇನ್ನೊಂದೆಡೆ ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ್‌ ನೇತೃತ್ವದ ಬಿ.ಜೆ.ಪಿ. ಸರಕಾರದ ಸಾಧನೆ ಕೇವಲ ರಿಪೋರ್ಟ್‌ ಕಾರ್ಡ್‌ಗಷ್ಟೇ ಸೀಮಿತವಾಗಿದೆ ಎಂದವರು ಟೀಕಿಸಿದ್ದಾರೆ. ’70 ವರ್ಷದಲ್ಲಿ ಅವರೇನು ಮಾಡಿದ್ದಾರೆ’ ಎಂಬ ವಾಕ್ಯ ಈಗ ಹಳಸಲಾಗಿದೆ, ಇದೀಗ ಬಿ.ಜೆ.ಪಿ.ಯವರು ಕಳೆದ ಐದು ವರ್ಷಗಳಲ್ಲಿ ಏನು ಮಾಡಿದ್ದಾರೆಂಬುದನ್ನು ಜನತೆಗೆ ತಿಳಿಸುವ ಸಮಯ ಬಂದಿದೆ’ ಎಂದು ಪ್ರಿಯಾಂಕ ತಮ್ಮ ಯಾತ್ರೆಯ ಸಂದರ್ಭದಲ್ಲಿ ಹೇಳಿದರು.

ಪ್ರಿಯಾಂಕ ಅವರ ಈ ಟೀಕೆಗೆ ಮುಖ್ಯಂತ್ರಿ ಯೋಗಿ ಆದಿತ್ಯನಾಥ್‌ ಅವರು ಸೂಕ್ತ ತಿರುಗೇಟು ನೀಡಿದ್ದಾರೆ. ‘ಪ್ರಿಯಾಂಕಾ ಜೀ ಅವರು ಸ್ವಚ್ಛಗೊಂಡಿರುವ ಗಂಗಾ ನದಿಯಲ್ಲಿ ವಿಹಾರ ಕೈಗೊಂಡಿದ್ದಾರೆ. ಕಳೆದ ನಾಲ್ಕು ತಲೆಮಾರುಗಳು ಮಾಡಲು ಸಾಧ್ಯವಾಗದೇ ಇರುವುದನ್ನು ನಾವು ಸಾಧಿಸಿರುವ ಕಾರಣದಿಂದಲೇ ಅವರು ಇವತ್ತು ಪ್ರಯಾಗ್‌ ರಾಜ್‌ ನಿಂದ ವಾರಣಾಸಿಗೆ ಗಂಗಾ ಯಾತ್ರೆಯನ್ನು ನಡೆಸುತ್ತಿದ್ದಾರೆ, ಇದಕ್ಕೆ ಕಾರಣವಾಗಿರುವುದು ಪ್ರಧಾನಿ ಮೋದಿ ಅವರ ‘ನಮಾಮಿ ಗಂಗಾ’ ಯೋಜನೆ ಎಂಬುದನ್ನು ಮರೆಯಬಾರದು’ ಎಂದು ಯೋಗಿ ಅವರು ತಿರುಗೇಟು ನೀಡಿದ್ದಾರೆ. ‘ಸ್ವಾತಂತ್ರ್ಯಾನಂತರ ಉತ್ತರಪ್ರದೇಶವನ್ನು ಕಾಂಗ್ರೆಸ್‌ ಹಲವು ದಶಕಗಳ ಕಾಲ ಆಳಿದೆ, ಇದಕ್ಕೆ ಪ್ರತಿಯಾಗಿ ಆ ಪಕ್ಷ ಈ ರಾಜ್ಯಕ್ಕಿಟ್ಟ ಹೆಸರೇನು ಗೊತ್ತೆ,? ‘ಬಿಮಾರು ಸ್ಟೇಟ್‌’ (ಅಸ್ವಸ್ಥ ರಾಜ್ಯ), ಹೀಗಿರುವಾಗ ಸ್ವಚ್ಛ ಗಂಗೆಯಲ್ಲಿ ಯಾತ್ರೆ ಮಾಡುತ್ತಾ ಅದಕ್ಕೆ ಕಾರಣವಾಗಿರುವ ಕೇಂದ್ರ ಸರಕಾರವನ್ನು ಮತ್ತು ಮೋದಿಯನ್ನು ಟೀಕಿಸುವ ನೈತಿಕತೆ ಪ್ರಿಯಾಂಕಾ ಅವರಿಗಿದೆಯೇ’ ಎಂದು ಮುಖ್ಯಮಂತ್ರಿ ಯೋಗಿ ಅವರು ಪ್ರಶ್ನಿಸಿದ್ದಾರೆ.

ಯೋಗಿ ಆದಿತ್ಯನಾಥ್‌ ನೇತೃತ್ವದ ಬಿ.ಜೆ.ಪಿ. ಸರಕಾರಕ್ಕೆ ಇಂದಿಗೆ ಎರಡು ವರ್ಷ ಪೂರ್ತಿಗೊಂಡಿದೆ.

ಟಾಪ್ ನ್ಯೂಸ್

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

1-wqeweeqwqewq

MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ

1ewewwewqqewqeqe

India ಆರ್ಥಿಕ ಬೆಳವಣಿಗೆಗೆ ಅನವಶ್ಯಕ ಪ್ರಚಾರ: ರಾಜನ್‌ ಹೇಳಿಕೆಗೆ ಆಕ್ರೋಶ

Ashwin Vaishnav

Bullet train ಮೊದಲ ಬಾರಿಗೆ ಬ್ಯಾಲೆಸ್ಟ್‌ಲೆಸ್‌ ಟ್ರ್ಯಾಕ್‌: ರೈಲ್ವೇ ಸಚಿವ ವೈಷ್ಣವ್‌

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.