ದೆಹಲಿಯಲ್ಲೂ ಗೋರಕ್ಷಕರ ದಾಳಿ; ಮೂವರಿಗೆ ಮಾರಣಾಂತಿಕ ಹಲ್ಲೆ
Team Udayavani, Apr 23, 2017, 3:44 PM IST
ಹೊಸದಿಲ್ಲಿ : ರಾಜಸ್ಥಾನದ ಅಳ್ವಾರ್ನಲ್ಲಿ ಗೋರಕ್ಷಕರ ದಾಳಿ, ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಜಿಲ್ಲೆಯಲ್ಲಿ 9 ವರ್ಷದ ಬಾಲಕಿ ಸೇರಿದಂತೆ ಒಂದೇ ಕುಟುಂಬದ ಐವರ ಮೇಲೆ ಸ್ವಘೋಷಿತ ಗೋರಕ್ಷಕರು ಹಲ್ಲೆ ನಡೆಸಿದ ಘಟನೆ ಘಟನೆ ನೆನಪಲ್ಲಿರುವಾಗಲೇ ರಾಷ್ಟ್ರ ರಾಜಧಾನಿಯಲ್ಲೂ ಗೋವಿನ ವಿಚಾರದಲ್ಲಿ ಮೂವರ ಮೇಲೆ ಶನಿವಾರ ರಾತ್ರಿ ದಾಳಿ ನಡೆದಿದೆ.
ದಕ್ಷಿಣ ದೆಹಲಿಯ ಕಾಲ್ಕಂಜ್ ಮೆಟ್ರೋ ರೈಲ್ವೇ ನಿಲ್ದಾಣದ ಬಳಿ 14 ಎಮ್ಮೆಗಳನ್ನು ಹಿಂಸಾತ್ಮಕವಾಗಿ ಸಾಗಿಸುತ್ತಿದ್ದ ಟ್ರಕ್ ತಡೆದು ಮೂವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಲಾಗಿದೆ. ಎನ್ಜಿಓ ನ ಸದಸ್ಯರು ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.
ಹಲ್ಲೆಗೊಳಗಾದ ರಿಜ್ವಾನ್, ಅಶು ಮತ್ತು ಕಾಮಿಲ್ ಎನ್ನುವವರನ್ನು ಏಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ದೆಹಲಿ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್