ಚಂದ್ರಯಾನ 3: ಮತ್ತೊಂದು ಯಶಸ್ವಿ ಹೆಜ್ಜೆ… ಭೂಮಿಯ ಕಕ್ಷೆ ತೊರೆದು ಚಂದಿರನ ಅಂಗಳಕ್ಕೆ ಪಯಣ
Team Udayavani, Aug 1, 2023, 10:38 AM IST
ಬೆಂಗಳೂರು: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಇಸ್ರೋ ಮಂಗಳವಾರ ಚಂದ್ರಯಾನ – 3 ಬಾಹ್ಯಾಕಾಶ ನೌಕೆಯನ್ನು ಟ್ರಾನ್ಸ್ಲೂನಾರ್ ಕಕ್ಷೆಗೆ ಸೇರಿಸಿದೆ. “ಚಂದ್ರಯಾನ-3 ಭೂಮಿಯ ಸುತ್ತಲಿನ ತನ್ನ ಕಕ್ಷೆಯನ್ನು ಪೂರ್ಣಗೊಳಿಸಿ ಚಂದ್ರನ ಕಡೆಗೆ ಪಯಣ ಬೆಳೆಸಿದೆ ಎಂದು ಇಸ್ರೋ ತಿಳಿಸಿದೆ.
ಇದರೊಂದಿಗೆ ಚಂದ್ರಯಾನ-3 ತನ್ನ 3.8 ಲಕ್ಷ ಕಿಮೀ ಉದ್ದದ ಚಂದ್ರನಲ್ಲಿನ ಪ್ರಯಾಣವನ್ನು ಆರಂಭಿಸಿದ್ದು. ಆಗಸ್ಟ್ 5 ಮುಖ್ಯ ಟ್ರ್ಯಾಕಿಂಗ್ ಮತ್ತು ಕಮಾಂಡ್ ನೆಟ್ವರ್ಕ್ ಪೆರಿಜಿ ಫೈರಿಂಗ್ ಅನ್ನು ಯಶಸ್ವಿಯಾಗಿ ಮಾಡಲಾಯಿತು. ಅದರ ನಂತರ ಬಾಹ್ಯಾಕಾಶ ನೌಕೆಯು ಚಂದ್ರನತ್ತ ತನ್ನ ಪ್ರಯಾಣವನ್ನು ಪ್ರಾರಂಭಿಸಿತು. ಬಾಹ್ಯಾಕಾಶ ನೌಕೆಯ ಮುಂದಿನ ನಿಲುಗಡೆ ಕೇಂದ್ರ ಚಂದ್ರನ ಕಕ್ಷೆಯಾಗಿದ್ದು. ಇದು ಚಂದ್ರನತ್ತ ಆಗಮಿಸುತ್ತಿದ್ದಂತೆ ಆಗಸ್ಟ್ 5 ರಂದು ಚಂದ್ರನ ಕಕ್ಷೆಗೆ ಜೋಡಿಸುವ ಕಾರ್ಯಾಚರಣೆ ನಡೆಸಲಾಗುತ್ತದೆ” ಎಂದು ಇಸ್ರೋ ಟ್ವೀಟ್ ಮಾಡಿದೆ.
ಸೋಮವಾರ ನಸುಕಿನ ಜಾವಾ ಸುಮಾರು 12 ಗಂಟೆಯಿಂದ 12.30ರ ನಡುವೆ ಚಂದ್ರನ ಕಕ್ಷೆಗೆ ಸೇರಿಸುವ ಕಾರ್ಯಾಚರಣೆ ನಡೆದಿದೆ ಎಂದು ಅಧಿಕಾರಿಗಳು ದೃಢಪಡಿಸಿದ್ದಾರೆ.
ಆಗಸ್ಟ್ 16 ರವರೆಗೆ, ಬಾಹ್ಯಾಕಾಶ ನೌಕೆಯು ಚಂದ್ರನ ಕಕ್ಷೆಯ ಸುತ್ತ ಸುತ್ತುತ್ತದೆ. ಚಂದ್ರನ ಮೇಲ್ಮೈಯಿಂದ 100 ಕಿಮೀ ಎತ್ತರದಲ್ಲಿ ಆಗಸ್ಟ್ 17 ರಂದು ಲ್ಯಾಂಡರ್ ಪ್ರೊಪಲ್ಷನ್ ಮಾಡ್ಯೂಲ್ನಿಂದ ಬೇರ್ಪಡುತ್ತದೆ. ಚಂದ್ರಯಾನ-3 ಆಗಸ್ಟ್ 23 ರಂದು ಸಂಜೆ 5.47 ಕ್ಕೆ ಚಂದ್ರನ ಮೇಲ್ಮೈಯಲ್ಲಿ ಇಳಿಯಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಚಂದ್ರಯಾನ 3ರ ಬಾಹ್ಯಾಕಾಶ ನೌಕೆ ಚಂದ್ರನ ಮೇಲೆ ಸಾಫ್ಟ್ ಲ್ಯಾಂಡಿಂಗ್ ಆಗುವುದನ್ನೇ ಬಾಹ್ಯಾಕಾಶ ಪ್ರೇಮಿಗಳು ಎದುರು ನೋಡುತ್ತಿದ್ದಾರೆ. ಏಕೆಂದರೆ, ಇದುವರೆಗೆ ಅಮೆರಿಕ, ಚೀನಾ, ರಷ್ಯಾ ರಾಷ್ಟ್ರಗಳು ಮಾತ್ರ ಯಶಸ್ವಿಯಾಗಿ ಚಂದ್ರನ ಮೇಲೆ ಯಶಸ್ವಿಯಾಗಿ ಗಗನ ನೌಕೆಯನ್ನು ಇಳಿಸಿವೆ. ಚಂದ್ರಯಾನ 3 ಸುರಕ್ಷಿತ ಮತ್ತು ಯಶಸ್ವಿಯಾಗಿ ಸಾಫ್ಟ್ ಲ್ಯಾಂಡಿಂಗ್ ಆದರೆ, ಈ ಸಾಧನೆ ಮಾಡಿದ ನಾಲ್ಕನೇ ರಾಷ್ಟ್ರ ಭಾರತವಾಗಲಿದೆ.
ಇದನ್ನೂ ಓದಿ: ಹರ್ಯಾಣ ಕೋಮು ಘರ್ಷಣೆ: 3 ಮಂದಿ ಮೃತ್ಯು, ಇಂಟರ್ನೆಟ್ ಸ್ಥಗಿತ, ಶಾಲೆಗಳಿಗೆ ರಜೆ
Chandrayaan-3 Mission:
Chandrayaan-3 completes its orbits around the Earth and heads towards the Moon.A successful perigee-firing performed at ISTRAC, ISRO has injected the spacecraft into the translunar orbit.
Next stop: the Moon 🌖
As it arrives at the moon, the… pic.twitter.com/myofWitqdi
— ISRO (@isro) July 31, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?
ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ
MUST WATCH
ಹೊಸ ಸೇರ್ಪಡೆ
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ