ಹುಬ್ಬಳ್ಳಿ ರ್ಯಾಲಿ; ಹಾರ ಹಾಕಲು ಪ್ರಧಾನಿ ಮೋದಿಯವರತ್ತ ನುಗ್ಗಿ ಬಂದ ಬಾಲಕ
Team Udayavani, Jan 12, 2023, 4:52 PM IST
ಹುಬ್ಬಳ್ಳಿ : ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ನಗರದಲ್ಲಿ ನಡೆಸುತ್ತಿದ್ದ ರೋಡ್ ಶೋ ವೇಳೆ ಭದ್ರತಾ ಲೋಪ ಎನ್ನುವಂತೆ ಬಾಲಕನೊಬ್ಬ ಏಕಾಏಕಿ ಕಾರಿನತ್ತ ನುಗ್ಗಿ ಬಂದ ಘಟನೆ ನಡೆದಿದೆ.
ಪೊಲೀಸರ ಸರ್ಪಗಾವಲಿನ ನಡುವೆ ಬಾಲಕ ಹೂವಿನ ಹಾರ ಹಿಡಿದುಕೊಂಡು ಪ್ರಧಾನಿ ಮೋದಿ ಅವರಿಗೆ ಹಾಕಲು ಮುಂದಾಗಿದ್ದಾನೆ. ಈ ವೇಳೆ ಭದ್ರತಾ ಸಿಬಂದಿಗಳು ತಡೆಯಲು ಯತ್ನಿಸಿ ಹೂವಿನ ಹಾರ ಪಡೆದರು. ಆದರೆ ಪ್ರಧಾನಿ ಆ ಹಾರವನ್ನು ಕೈಯಲ್ಲಿ ಸ್ವೀಕರಿಸಿದರು.
ರೋಡ್ ಶೋ ವೇಳೆ ಭಾರಿ ಸಂಖ್ಯೆಯ ಪೊಲೀಸರನ್ನು ರಸ್ತೆಯ ಉದ್ದಗಲಕ್ಕೂ ಭದ್ರತೆಗಾಗಿ ನಿಯೋಜಿಸಲಾಗಿತ್ತು. ಭದ್ರತೆಯ ನಡುವೆಯೂ ಬಾಲಕ ಹಾರ ಹಿಡಿದುಕೊಂಡು ರಸ್ತೆಗೆ ನುಗ್ಗಿ ಬಂದಿದ್ದಾನೆ. ರಸ್ತೆಯ ಉದ್ದಕ್ಕೂ ಸಾವಿರಾರು ಮಾಡಿ ಅಭಿಮಾನಿಗಳು ನೆರೆದಿದ್ದು ಪ್ರಧಾನಿ ಮೋದಿ ಅವರು ಎಲ್ಲರತ್ತ ಕೈ ಬೀಸಿದರು. ಜನರು ಅಭಿಮಾನದಿಂದ ಹೂವಿನ ಮಳೆ ಗೆರೆದರು.
ಪ್ರಧಾನಿ ಮೋದಿ ಅವರು ಹುಬ್ಬಳ್ಳಿಯಲ್ಲಿ ಸಂಜೆ ರೈಲ್ವೇ ಮೈದಾನದಲ್ಲಿ 26ನೇ ರಾಷ್ಟ್ರೀಯ ಯುವಜನೋತ್ಸವಕ್ಕೆ ಚಾಲನೆ ನೀಡುತ್ತಿದ್ದು,ಧಾರವಾಡದಲ್ಲಿ ಜ.12-16ರ ವರೆಗೆ ಉತ್ಸವ ನಡೆಯಲಿದ್ದು, ಅದರ ಉದ್ಘಾಟನ ಕಾರ್ಯಕ್ರಮ ಹುಬ್ಬಳ್ಳಿಯಲ್ಲಿ ನಡೆಯಲಿದೆ. ಪ್ರಧಾನಿ ಮೋದಿಯವರ ಪಾಲ್ಗೊಳ್ಳುವಿಕೆ ಹಿನ್ನೆಲೆಯಲ್ಲಿ ಎಲ್ಲ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ
ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ
ತಂಗಿ ಮದುವೆಗೆ ಟಿವಿ ಗಿಫ್ಟ್ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ
MUST WATCH
ಹೊಸ ಸೇರ್ಪಡೆ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್
Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್ ಮುರಿದು ಕಳ್ಳತನ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ