ಪತಿ ಮರ್ಮಾಂಗ ಕತ್ತರಿಸಿದಳು!
Team Udayavani, Jul 22, 2017, 7:05 AM IST
ವೆಲ್ಲೋರ್: ಅಕ್ರಮ ಸಂಬಂಧ ಹೊಂದಿದ್ದಲ್ಲದೆ, ತನ್ನ ಶೀಲ ಶಂಕಿಸಿದ ಪತಿಯ ಮರ್ಮಾಂಗ ಕತ್ತರಿಸಿ, ಅದನ್ನು ತವರು ಮನೆಗೆ ಕೊಂಡೊಯ್ಯುತ್ತಿದ್ದ ಮಹಿಳೆಯನ್ನು ತಮಿಳುನಾಡು ಪೊಲೀಸರು ಬಂಧಿಸಿದ್ದಾರೆ. “ಪತಿಯ ಮರ್ಮಾಂಗವನ್ನು ಕತ್ತರಿಸಿ, ಅದನ್ನು ಪರ್ಸ್ನಲ್ಲಿರಿಸಿಕೊಂಡು ಹೊರಟಿದ್ದ ಮಹಿಳೆಯನ್ನು ಥೂತಿಪಟ್ಟು ಬಳಿ ಬಂಧಿಸಿ, ಕತ್ತರಿಸಿದ ಮರ್ಮಾಂಗವನ್ನು ವಶಕ್ಕೆ ಪಡೆದಿದ್ದೇವೆ,’ ಎಂದು ಗುಡಿಯಟ್ಟಮ್ ಠಾಣೆ ಪೊಲೀಸರು ತಿಳಿಸಿದ್ದಾರೆ.
ಬಂಧಿತ ಮಹಿಳೆ ಸರಸು ಮತ್ತು ಜಗದೀಶನ್ ಒಂದೇ ಗಾರ್ಮೆಂಟ್ಸ್ನಲ್ಲಿ ದುಡಿಯುತ್ತಿದ್ದರು. ಈ ವೇಳೆ ಇಬ್ಬರ ನಡುವೆ ಪ್ರೀತಿ ಶುರುವಾಗಿ 14 ವರ್ಷಗಳ ಹಿಂದೆ ವಿವಾಹವಾಗಿದ್ದರು. ದಂಪತಿಗೆ ಒಬ್ಬ ಮಗ, ಮೂವರು ಹೆಣ್ಣುಮಕ್ಕಳಿದ್ದಾರೆ. ಆದರೆ ಕೌಟುಂಬಿಕ ಕಲಹದಿಂದಾಗಿ ವರ್ಷದ ಹಿಂದೆ ಪತಿಯಿಂದ ದೂರಾದ ಸರಸು, ತವರು ಮನೆ ಸೇರಿದ್ದರು. ಕಡೆಗೆ ಪುತ್ರನ ಕೋರಿಕೆ ಮೇರೆಗೆ ಮತ್ತೆ ಬಂದು ಪತಿ ಜತೆ ವಾಸವಿದ್ದರು. ಗುರುವಾರ ರಾತ್ರಿ ಕೋಪದಲ್ಲೇ ಮನೆಗೆ ಬಂದ ಜಗದೀಶನ್, ತವರು ಮನೆಯಲ್ಲಿದ್ದಾಗ ಸರಸು ಬೇರೊಬ್ಬ ವ್ಯಕ್ತಿ ಜತೆ ಸಂಬಂಧ ಹೊಂದಿದ್ದ ಬಗ್ಗೆ ಶಂಕಿಸಿದ್ದಾನೆ. ಅಲ್ಲದೆ, “ನಿನಗೆ ವಯಸ್ಸಾಗಿರುವ ಕಾರಣ ನಾನು ಮತ್ತೂಂದು ಮದುವೆಯಾಗುತ್ತೇನೆ,’ ಎಂದಿದ್ದಾನೆ.
ಈ ಮೂಲಕ ಇಬ್ಬರ ನಡುವೆ ಶುರುವಾದ ಜಗಳ, ನಸುಕಿನ 2 ಗಂಟೆವರೆಗೂ ಮುಂದು ವರಿದಿದೆ. ನಂತರ ಜಗದೀಶನ್ ಮಲಗಿದ್ದಾನೆ. ಈ ವೇಳೆ ಅಡುಗೆ ಮನೆಯಿಂದ ಚಾಕು ತೆಗೆ ದು ಕೊಂಡು ಬಂದ ಸರಸು, ಪತಿಯ ಮರ್ಮಾಂಗವನ್ನು ಕತ್ತರಿಸಿದ್ದಾಳೆ. ಆಕ್ರಂದನ ಕೇಳಿಸಿಕೊಂಡ ನೆರೆಮನೆಯವ ರಿಂದ ಮಾಹಿತಿ ಪಡೆದ ಪೊಲೀಸರು, ತವರಿಗೆ ಹೊರಟಿದ್ದ ಸರಸುಳನ್ನು ಮಾರ್ಗಮಧ್ಯೆ ಬಂಧಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
Telangana Election 2024: ಕಳೆಗುಂದಿದ ಬಿಆರ್ಎಸ್: ಕಾಂಗ್ರೆಸ್-ಬಿಜೆಪಿ ಕಾದಾಟ
Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ
Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ
Netizens; 10ನೇ ತರಗತಿ ಪರೀಕ್ಷೆ ಟಾಪರ್ ಟ್ರೋಲ್: ನೆಟ್ಟಿಗರಿಂದ ತರಾಟೆ
MUST WATCH
ಹೊಸ ಸೇರ್ಪಡೆ
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Editorial: ಗುಕೇಶ್ ಗೆಲುವು- ಭಾರತದ ಯುವಶಕ್ತಿಯ ಸಂಕೇತ
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
Bengaluru: ಕದಂಬ ಹೋಟೆಲ್ ಸ್ಫೋಟ ಮಾಡುವುದಾಗಿ ಬೆದರಿಕೆ