ಪುಣೆಯಲ್ಲಿ ಲಸಿಕೆ ಉತ್ಪಾದಿಸಲಿದೆ ಭಾರತ್ ಬಯೋಟೆಕ್ ಇಂಟರ್ ನ್ಯಾಷನಲ್ ಲಿಮಿಟೆಡ್..!
Team Udayavani, May 14, 2021, 8:33 PM IST
ಪ್ರಾತಿನಿಧಿಕ ಚಿತ್ರ
ಮಹಾರಾಷ್ಟ್ರ : ಹೈದರಾಬಾದ್ ಮೂಲದ ಭಾರತ್ ಬಯೋಟೆಕ್ ಇಂಟರ್ ನ್ಯಾಷನಲ್ ಲಿಮಿಟೆಡ್, ಅಂಗಸಂಸ್ಥೆ ಬಯೋವೆಟ್ ಪ್ರೈವೇಟ್ ಲಿಮಿಟೆಡ್ ಮೂಲಕ ಶೀಘ್ರದಲ್ಲೇ ಪುಣೆಯಲ್ಲಿ ಕೋವಿಡ್ -19 ಲಸಿಕೆಗಳನ್ನು ಉತ್ಪಾದಿಸಲು ಪ್ರಾರಂಭಿಸಲಿದೆ ಎಂದು ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಶುಕ್ರವಾರ (ಮೇ 14) ಹೇಳಿದ್ದಾರೆ.
ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಪವಾರ್, ಪುಣೆಯಲ್ಲಿ ಲಸಿಕೆಗಳ ಉತ್ಪಾದನೆಯನ್ನು ಪ್ರಾರಂಭಿಸಲು ಸುಮಾರು ಮೂರು ತಿಂಗಳುಗಳು ಬೇಕಾಗಬಹುದು ಎಂದು ತಿಳಿಸಿದ್ದಾರೆ.
ಕೇಂದ್ರದೊಂದಿಗಿನ ಒಪ್ಪಂದ ಪೂರೈಸಿದ ನಂತರ ಮಹಾರಾಷ್ಟ್ರಕ್ಕೆ ಲಸಿಕೆಗಳನ್ನು ಪೂರೈಸಲು ಆದ್ಯತೆ ನೀಡುವಂತೆ ರಾಜ್ಯವು ಬಿಬಿಐಎಲ್ ಗೆ ಕೇಳಿಕೊಂಡಿದೆ ಎಂದು ಕೂಡ ಅವರು ಹೇಳಿದ್ದಾರೆ.
ಇದನ್ನೂ ಓದಿ : ಯುವತಿಯ ಅನುಮಾನಾಸ್ಪದ ಸಾವು, ಕೊಲೆ ಶಂಕೆ : ಪೊಲೀಸರಿಂದ ತೀವ್ರ ವಿಚಾರಣೆ
ಇನ್ನು, ಪುಣೆ ವಿಭಾಗೀಯ ಆಯುಕ್ತ ಸೌರಭ್ ರಾವ್ತ್ ಮತ್ತು ಕಲೆಕ್ಟರ್ ರಾಜೇಶ್ ದೇಶ್ಮುಖ್ ಅವರು ಮಂಜರಿ ಖುರ್ದ್ ನ 11 ಎಕರೆ ಹೆಚ್ಚಿರುವ ಪ್ರದೇಶವನ್ನು ಪರಿಶೀಲಿಸಿದ ಒಂದೆರಡು ದಿನಗಳ ನಂತರ ಈ ಬೆಳವಣಿಗೆ ಕಂಡಿದೆ. ಮಹಾರಾಷ್ಟ್ರ ಸರ್ಕಾರವು ಪುಣೆಯಲ್ಲಿ ಬೇಕಾದ ಸೌಲಭ್ಯವನ್ನು ಹಸ್ತಾಂತರಿಸಬೇಕೆಂದು ಕೋರಿ ಕರ್ನಾಟಕ ಮೂಲದ ಬಯೋವೆಟ್ ಪ್ರೈವೇಟ್ ಲಿಮಿಟೆಡ್ ಸಲ್ಲಿಸಿದ್ದ ಮನವಿಯನ್ನು ನ್ಯಾಯಮೂರ್ತಿ ಕೆ. ಕೆ. ಟೇಟ್ ಮತ್ತು ನ್ಯಾಯಮೂರ್ತಿ ನಿತಿನ್ ಬೋರ್ಕರ್ ಅವರನ್ನೊಳಗೊಂಡ ಬಾಂಬೆ ಹೈಕೋರ್ಟ್ ಪೀಠ ಎತ್ತಿ ಹಿಡಿದಿದೆ.
ಫುಡ್ ಮತ್ತು ಮೌತ್ ಡಿಸೀಸ್ ಗೆ ಲಸಿಕೆಗಳನ್ನು ತಯಾರಿಸಲು 1973 ರಲ್ಲಿ ಖಾಸಗಿ ಕಂಪನಿಗೆ ಮಹಾರಾಷ್ಟ್ರ ಸರ್ಕಾರವು ನೀಡಿದ ಭೂಮಿಯಲ್ಲಿ ಮಂಜರಿ ಖುರ್ದ್ ಸೌಲಭ್ಯವನ್ನು ನೀಡಿತ್ತು.
ಆದಾಗ್ಯೂ, ಆ ಕಂಪನಿಯು ಇಲ್ಲಿ ತನ್ನ ಕಾರ್ಯಾಚರಣೆಯನ್ನು ತ್ಯಜಿಸಿ, ಬಯೋವೆಟ್ ಪ್ರೈವೇಟ್ ಲಿಮಿಟೆಡ್ ನೊಂದಿಗೆ ಭೂಮಿ ಮತ್ತು ಸ್ಥಾವರವನ್ನು ವರ್ಗಾವಣೆ ಮಾಡಲು ಒಪ್ಪಂದ ಮಾಡಿಕೊಂಡಿತ್ತು, ಇದನ್ನು ಮಹಾರಾಷ್ಟ್ರ ಅರಣ್ಯ ಇಲಾಖೆ ಆಕ್ಷೇಪಿಸಿತ್ತು.
ಈ ಬೆಳವಣಿಗೆಯ ಬಗ್ಗೆ ಪ್ರತಿಕ್ರಿಯಿಸಿರುವ ಆರೋಗ್ಯ ಇಲಾಖೆಯ ಅಧಿಕಾರಿಯೊಬ್ಬರು, ಮುಂದಿನ 3-4 ತಿಂಗಳಲ್ಲಿ ಲಸಿಕೆಗಳನ್ನು ಉತ್ಪಾದಿಸಲು ಪ್ರಾರಂಭಿಸಬಹುದು, ಆದರೇ, ಯಾವ ಪ್ರಮಾಣದಲ್ಲಿ ಉತ್ಪಾದನೆ ಮಾಡಲಿದೆ ಎನ್ನುವುದರ ಬಗ್ಗೆ ತಿಳಿದುಬಂದಿಲ್ಲ ಎಂದಿದ್ದಾರೆ.
ಇನ್ನು, ಬಯೋವೆಟ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆ, ಪ್ರಸ್ತುತ ಅಲ್ಲಿ ಉತ್ಪಾದನಾ ಮಾರ್ಗ ಮತ್ತು ಪ್ರಕ್ರಿಯೆಗಳನ್ನು ಪರಿಶೀಲಿಸುತ್ತಿದೆ ಎಂದು ವರದಿ ತಿಳಿಸಿದೆ.
ಇದನ್ನೂ ಓದಿ : ಕೋಲಾರದ ಮಾಲೂರಿನಲ್ಲಿ ಕೊವ್ಯಾಕ್ಸಿನ್ ಲಸಿಕೆ ತಯಾರಿಕಾ ಘಟಕ: ಅಶ್ವತ್ಥನಾರಾಯಣ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
MUST WATCH
ಹೊಸ ಸೇರ್ಪಡೆ
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
IPL; ಮೆಕ್ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ