ಪೊಲೀಸ್ ವಶದಲ್ಲಿ ನಡೆದ ಕೊಲೆ: ಸುಪ್ರೀಂ ಮೆಟ್ಟಿಲೇರಿದ ಹೈದರಾಬಾದ್ ಎನ್ ಕೌಂಟರ್ ಪ್ರಕರಣ
Team Udayavani, Dec 8, 2019, 9:29 AM IST
ಹೊಸದಿಲ್ಲಿ: ಹೈದರಾಬಾದ್ ನ ಪಶುವೈದ್ಯೆ ದಿಶಾ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದ ನಾಲ್ವರು ಆರೋಪಿಗಳನ್ನು ಪೊಲೀಸರು ಎನ್ ಕೌಂಟರ್ ಮಾಡಿದ ಪ್ರಕರಣ ಇದೀಗ ಸರ್ವೋಚ್ಛ ನ್ಯಾಯಾಲಯದ ಮೆಟ್ಟಿಲೇರಿದೆ.
ಪಶುವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಆರೋಪಿಗಳನ್ನು ಶುಕ್ರವಾರ ಘಟನಾ ಸ್ಥಳಕ್ಕೆ ಕರೆದೊಯ್ದು ತನಿಖೆ ನಡೆಸುವ ವೇಳೆ ಎನ್ ಕೌಂಟರ್ ನಡೆಸಲಾಗಿತ್ತು. ಆರೋಪಿಗಳು ಪೊಲೀಸರ ಶಸ್ತ್ರಾಸ್ತ್ರ ಕಸಿದ ಕಾರಣ ಎನ್ ಕೌಂಟರ್ ಮಾಡಲಾಗಿತ್ತು ಎಂದು ಆಯುಕ್ತ ವಿಶ್ವನಾಥ್ ಸಜ್ಜನವರ್ ವಿವರಣೆ ನೀಡಿದ್ದರು.
ಅದರೆ ಎನ್ ಕೌಂಟರ್ ಬಗ್ಗೆ ಅನುಮಾನ ವ್ಯಕ್ತಪಡಿಸಿ ಎರಡು ಪ್ರತ್ಯೇಕ ಅರ್ಜಿಗಳನ್ನು ಸುಪ್ರೀಂ ಕೊರ್ಟ್ ನಲ್ಲಿ ಸಲ್ಲಿಸಲಾಗಿದೆ.
ವಕೀಲರಾದ ಜಿ ಎಸ್ ಮಣಿ ಮತ್ತು ಪ್ರದೀಪ್ ಕುಮಾರ್ ಅವರು ಅರ್ಜಿ ಸಲ್ಲಿಸಿದ್ದು, ಎನ್ ಕೌಂಟರ್ ಮಾಡುವ ವೇಳೆ ಪಾಲಿಸಬೇಕಾದ ಮಾರ್ಗಸೂಚಿಗಳನ್ನು ಇಲ್ಲಿ ಉಲ್ಲಂಘಿಸಲಾಗಿದೆ. ಹೀಗಾಗಿ ಎನ್ ಕೌಂಟರ್ ನಲ್ಲಿ ಭಾಗಿಯಾದ ಪೊಲೀಸರ ವಿರುದ್ಧ ತನಿಖೆ ನಡೆಯಬೇಕು ಎಂದು ಕೋರಿದ್ದಾರೆ.
ಜೀವಿಸುವ ಹಕ್ಕು ಮತ್ತು ನ್ಯಾಯೋಚಿತ ವಿಚಾರಣೆ ಹಕ್ಕನ್ನು ನಿಡುವ ಸಂವಿಧಾನದ 21ನೇ ಪರಿಚ್ಛೇದವನ್ನು ಉಲ್ಲಂಘಿಸಿ ಇಲ್ಲಿ ಎನ್ ಕೌಂಟರ್ ನಡೆಸಲಾಗಿದೆ ಎಂದು ಆರೋಪಿಸಿ ಮತ್ತೋರ್ವ ವಕೀಲ ಎಂ.ಎನ್. ಶರ್ಮಾ ಅವರು ಸುಪ್ರೀಂ ಮೆಟ್ಟಿಲೇರಿದ್ದಾರೆ.
ಇದರೊಂದಿಗೆ ವಿಚಾರಣೆ ನಡೆಸದೆ ಆರೋಪಿಗಳನ್ನು ದೋಷಿ ಎನ್ನಲಾಗಿದೆ. ಇದು ಪೊಲೀಸ್ ವಶದಲ್ಲಿ ನಡೆದ ಕೊಲೆ. ಇದರ ತನಿಖೆ ನಡೆಸಬೇಕೆಂದು ಆರೋಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai Airport: ನ್ಯೂಡಲ್ಸ್ ಪ್ಯಾಕೇಟ್ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
Telangana Election 2024: ಕಳೆಗುಂದಿದ ಬಿಆರ್ಎಸ್: ಕಾಂಗ್ರೆಸ್-ಬಿಜೆಪಿ ಕಾದಾಟ
Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ
MUST WATCH
ಹೊಸ ಸೇರ್ಪಡೆ
Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ
Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ