ತೆಲಂಗಾಣ ಎನ್ ಕೌಂಟರ್ ತನಿಖೆ; ತ್ರಿಸದಸ್ಯ ಆಯೋಗ ನೇಮಿಸಿದ ಸುಪ್ರೀಂ-ಇಕ್ಕಟ್ಟಿನಲ್ಲಿ ಸರ್ಕಾರ

ತೆಲಂಗಾಣ ಎನ್ ಕೌಂಟರ್ ಪ್ರಕರಣದ ತನಿಖೆಯನ್ನು ಆರು ತಿಂಗಳೊಳಗೆ ಪೂರ್ಣಗೊಳಿಸುವಂತೆ ಸುಪ್ರೀಂಕೋರ್ಟ್ ತಿಳಿಸಿದೆ

Team Udayavani, Dec 12, 2019, 1:17 PM IST

Supremecourt

ನವದೆಹಲಿ: ತೆಲಂಗಾಣದ ಪಶುವೈದ್ಯೆಯ ಮೇಲಿನ ಸಾಮೂಹಿಕ ಅತ್ಯಾಚಾರ, ಕೊಲೆ ಪ್ರಕರಣದ ನಾಲ್ವರು ಆರೋಪಿಗಳನ್ನು ಪೊಲೀಸರು ಎನ್ ಕೌಂಟರ್ ನಲ್ಲಿ ಹತ್ಯೆಗೈದಿರುವ ಘಟನೆಯ ತನಿಖೆ ನಡೆಸಲು ಸುಪ್ರೀಂಕೋರ್ಟ್ ತ್ರಿಸದಸ್ಯರನ್ನೊಳಗೊಂಡ ಆಯೋಗವನ್ನು ನೇಮಕ ಮಾಡಿದೆ.

ಸುಪ್ರೀಂಕೋರ್ಟ್ ನ ನಿವೃತ್ತ ನ್ಯಾಯಾಧೀಶ ವಿಎಸ್ ಸರ್ಪುಕಾರ್ ಆಯೋಗದ ಮುಖ್ಯಸ್ಥರಾಗಿದ್ದು, ಬಾಂಬೆ ಹೈಕೋರ್ಟ್ ನಿವೃತ್ತ ಜಡ್ಜ್ ರೇಖಾ ಬಲ್ಡೋಟಾ, ಸಿಬಿಐ ಮಾಜಿ ಮುಖ್ಯಸ್ಥ ಬಿ.ಕಾರ್ತಿಕೇಯನ್ ಆಯೋಗದ ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ.

ತೆಲಂಗಾಣ ಎನ್ ಕೌಂಟರ್ ಪ್ರಕರಣದ ತನಿಖೆಯನ್ನು ಆರು ತಿಂಗಳೊಳಗೆ ಪೂರ್ಣಗೊಳಿಸುವಂತೆ ಸುಪ್ರೀಂಕೋರ್ಟ್ ತಿಳಿಸಿದೆ. ಮುಂದಿನ ಆದೇಶ ನೀಡುವವರೆಗೆ ಬೇರೆ ಯಾವುದೇ ನ್ಯಾಯಾಲಯವಾಗಲಿ ಅಥವಾ ಅಧಿಕಾರಿಗಳಾಗಲಿ ಪ್ರಕರಣದ ತನಿಖೆ ನಡೆಸುವಂತಿಲ್ಲ ಎಂದು ಸುಪ್ರೀಂ ನಿರ್ದೇಶನ ನೀಡಿದೆ.

ತನಿಖೆಯ ವೇಳೆ ತೆಲಂಗಾಣ ಸರ್ಕಾರದ ಪರವಾಗಿ ಅಭಿಪ್ರಾಯವ್ಯಕ್ತಪಡಿಸಲು ಮಾಜಿ ಅಟಾರ್ನಿ ಜನರಲ್ ಮುಕುಲ್ ರೋಹ್ಟಗಿ ಅವರಿಗೆ ಸಿಜೆಐ ಎಸ್ ಎ ಬೋಬ್ಡೆ ಸೂಚನೆ ನೀಡಿರುವುದಾಗಿ ವರದಿ ವಿವರಿಸಿದೆ.

ಪಶುವೈದ್ಯೆಯ ಮೇಲಿನ ಸಾಮೂಹಿಕ ಅತ್ಯಾಚಾರ, ಕೊಲೆ ಪ್ರಕರಣದ ನಾಲ್ವರು ಆರೋಪಿಗಳನ್ನು ಸ್ಥಳ ಮಹಜರಿಗೆ ಕರೆದೊಯ್ದಿದ್ದ ವೇಳೆ ಪೊಲೀಸರ ಶಸ್ತ್ರಾಸ್ತ್ರ ಕಸಿದುಕೊಂಡು ಹಲ್ಲೆ ನಡೆಸಲು ಮುಂದಾಗಿದ್ದರು. ಈ ಸಂದರ್ಭದಲ್ಲಿ ಪ್ರಾಣರಕ್ಷಣೆಗಾಗಿ ಎನ್ ಕೌಂಟರ್ ನಡೆಸಿರುವುದಾಗಿ ತೆಲಂಗಾಣ ಪೊಲೀಸರು ತಿಳಿಸಿದ್ದರು. ಆದರೆ ಪೊಲೀಸರ ಕ್ರಮಕ್ಕೆ ಒಂದೆಡೆ ಭಾರೀ ಬೆಂಬಲ ವ್ಯಕ್ತವಾಗಿದ್ದರೆ, ಮತ್ತೊಂದೆಡೆ ವಿರೋಧವೂ ವ್ಯಕ್ತವಾಗಿತ್ತು.

ತೆಲಂಗಾಣ ಎನ್ ಕೌಂಟರ್ ತನಿಖೆ ನಡೆಸಲು ರಾಜ್ಯ ಸರ್ಕಾರ ಎಸ್ ಐಟಿಯನ್ನು ರಚಿಸಿತ್ತು. ಎಸ್ ಐಟಿಯೂ ಕೂಡಾ ತನಿಖೆ ನಡೆಸಲಿ ಎಂದು ಸಿಜೆಐ ಬೋಬ್ಡೆ ತಿಳಿಸಿದ್ದಾರೆ. ಆದರೆ ಎಸ್ ಐಟಿ ತನಿಖೆ ನಡೆಸುತ್ತಿರುವ ನಡುವೆಯೇ ಸುಪ್ರೀಂಕೋರ್ಟ್ ನಿವೃತ್ತಿ ನ್ಯಾಯಾಧೀಶರ ಆಯೋಗವನ್ನು ನೇಮಕ ಮಾಡಿದ ಬಗ್ಗೆ ತೆಲಂಗಾಣ ಸರ್ಕಾರ ಆಕ್ಷೇಪ ವ್ಯಕ್ತಪಡಿಸಿದೆ.

ಇದು ವಿಶ್ವಾಸಾರ್ಹತೆಯ ವಿಷಯವಾಗಿದೆ. ಆರೋಪಿಗಳನ್ನು ಕೊಂದ ಘಟನೆ ಬಗ್ಗೆ ನೀವು ಯಾವ ಹಾದಿಯಲ್ಲಿ ತನಿಖೆ ನಡೆಸುತ್ತಿದ್ದೀರಿ ಎಂಬ ಬಗ್ಗೆ ನಾವು ಚಿಂತಿಸುವುದಿಲ್ಲ. ಎಸ್ ಐಟಿ ತನಿಖಾ ವರದಿಯನ್ನು ಆಯೋಗಕ್ಕೆ ನೀಡಲಿ ಎಂದು ಸಿಜೆಐ ಬೋಬ್ಡೆ ಸೂಚನೆ ನೀಡಿದ್ದಾರೆ.

ಟಾಪ್ ನ್ಯೂಸ್

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

banPuttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Puttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

banPuttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Puttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.