
ಹೈದರಾಬಾದ್: ಟಿ 20 ಕ್ರಿಕೆಟ್ ಪಂದ್ಯದ ಟಿಕೆಟ್ ಗಾಗಿ ನೂಕು ನುಗ್ಗಲು ; ಲಾಠಿ ಪ್ರಹಾರ
ಭಾರತ ಮತ್ತು ಆಸ್ಟ್ರೇಲಿಯ ನಡುವಿನ ಪಂದ್ಯದ ಟಿಕೆಟ್ ಗಾಗಿ ಮುಗಿ ಬಿದ್ದ ಅಭಿಮಾನಿಗಳು
Team Udayavani, Sep 22, 2022, 2:26 PM IST

ಹೈದರಾಬಾದ್: ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಸೆಪ್ಟೆಂಬರ್ 25 ರಂದು ನಡೆಯಲಿರುವ ಭಾರತ ಮತ್ತು ಆಸ್ಟ್ರೇಲಿಯ ನಡುವಿನ ಟಿ 20 ಪಂದ್ಯದ ಟಿಕೆಟ್ ಪಡೆಯಲು ಅಪಾರ ಸಂಖ್ಯೆಯ ಕ್ರಿಕೆಟ್ ಅಭಿಮಾನಿಗಳು ಜಮಾಯಿಸಿದ ನಂತರ ಜಿಮ್ಖಾನಾ ಮೈದಾನದಲ್ಲಿ ಗುರುವಾರ ಕಾಲ್ತುಳಿತ ಸಂಭವಿಸಿದೆ.
ಭಾರಿ ಸಂಖ್ಯೆಯಲ್ಲಿ ಜಮಾಯಿಸಿದ ಗುಂಪನ್ನು ಚದುರಿಸಲು ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ.ಕನಿಷ್ಠ 4 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪ್ರಾಥಮಿಕ ವರದಿ ಲಭ್ಯವಾಗಿದೆ.
ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಮಹಿಳೆಯರೂ ಸೇರಿ ಸ್ಥಳದಲ್ಲಿ ಭಾರಿ ಸಂಖ್ಯೆಯ ಜನರು ಜಮಾಯಿಸುತ್ತಿದ್ದಂತೆ ಹೆಚ್ಚುವರಿ ಪೊಲೀಸರನ್ನು ಕರೆಸಿಕೊಳ್ಳಲಾಗಿದೆ.ಬುಧವಾರವೂ ಸಹ ಸಾವಿರಾರು ಅಭಿಮಾನಿಗಳು ಟಿಕೆಟ್ಗಾಗಿ ಜಿಮ್ಖಾನಾದಲ್ಲಿ ಜಮಾಯಿಸಿದಾಗ ಗದ್ದಲ ಉಂಟಾಗಿತ್ತು.
ಇದನ್ನೂ ಓದಿ: ಮಹಾರಾಷ್ಟ್ರದ ವನ್ಯಜೀವಿ ಸೌಹಾರ್ದ ರಾಯಭಾರಿಯಾಗಿ ರವೀನಾ ಟಂಡನ್
ಕಳೆದ ಮೂರು ವರ್ಷಗಳಿಂದ ಉನ್ನತ ದರ್ಜೆಯ ಕ್ರಿಕೆಟ್ ಪಂದ್ಯಗಳನ್ನು ವೀಕ್ಷಿಸಲು ಸಾಧ್ಯವಾಗದ ಹೈದರಾಬಾದ್ ಮತ್ತು ಸಿಕಂದರಾಬಾದ್ನ ಅಭಿಮಾನಿಗಳು ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಪಂದ್ಯವನ್ನು ವೀಕ್ಷಿಸಲು ಉತ್ಸುಕರಾಗಿದ್ದು, ಜಿಮ್ಖಾನಾದಲ್ಲಿ, ಬೆಳಗ್ಗೆ 6 ಗಂಟೆಯಿಂದಲೇ ಸರತಿ ಸಾಲಿನಲ್ಲಿ ನಿಂತಿದ್ದರು. ಇಂದು ಸ್ಥಳದಲ್ಲಾದ ಅವ್ಯವಸ್ಥೆ ನಿಯಂತ್ರಿಸಲು ಪೊಲೀಸರು ಲಾಠಿ ಚಾರ್ಜ್ ಮಾಡಬೇಕಾದ ಅನಿವಾರ್ಯತೆ ಎದುರಾಯಿತು.
#WATCH | Telangana: A stampede broke out at Gymkhana Ground after a huge crowd of cricket fans gathered there to get tickets for #INDvsAUS match, scheduled for 25th Sept at Rajiv Gandhi International Stadium, Hyderabad. Police baton charged to disperse the crowd
4 people injured pic.twitter.com/J2OiP1DMlH
— ANI (@ANI) September 22, 2022
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಾಷ್ಟ್ರದ ಪ್ರಗತಿಗಾಗಿ ಜಾತಿ ಮತ್ತು ಪ್ರಾದೇಶಿಕ ತಾರತಮ್ಯವನ್ನು ತೊಡೆದುಹಾಕಿ: ಯೋಗಿ ಆದಿತ್ಯನಾಥ್

ಒಡಿಶಾ ಸಚಿವನ ಹತ್ಯೆ: ಸಿಬಿಐ ತನಿಖೆಗೆ ಆಗ್ರಹ

ಬಿಜೆಪಿ ಜೊತೆಗೆ ಮೈತ್ರಿಗಿಂತ ಸಾಯುವುದು ಲೇಸು: ನಿತೀಶ್ ಕುಮಾರ್

ಮೋದಿ ಸರ್ಕಾರದ ಡಿಡಿಎಲ್ಜೆಯಲ್ಲಿ ಸಚಿವ ಜೈಶಂಕರ್ ನಟನೆ: ಜೈರಾಮ್ ರಮೇಶ್

ಗೋರಖ್ನಾಥ್ ದೇಗುಲ ದಾಳಿ: ಆರೋಪಿ ಅಹ್ಮದ್ ಮುರ್ತಾಜಾಗೆ ಮರಣದಂಡನೆ ಶಿಕ್ಷೆ
MUST WATCH

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?

ಕೃಷ್ಣ ನಗರಿಯ ಕುರಿತು ಅಭಿಮಾನದ ಮಾತುಗಳನ್ನಾಡಿದ Melody King Rajesh Krishnan
