ವೋಟ್ ಬ್ಯಾಂಕ್ ರಾಜಕೀಯಕ್ಕಾಗಿ ಹಲವರು ‘ಹೈದರಾಬಾದ್ ವಿಮೋಚನಾ ದಿನ’ ಆಚರಿಸುತ್ತಿಲ್ಲ: ಶಾ ಕಿಡಿ
75 ವರ್ಷಗಳು ಕಳೆದಿರುವುದು ದುರದೃಷ್ಟಕರ....
Team Udayavani, Sep 17, 2022, 1:58 PM IST
ಹೈದರಾಬಾದ್ : ಹಲವರು ವೋಟ್ ಬ್ಯಾಂಕ್ ರಾಜಕೀಯಕ್ಕಾಗಿ ಹೈದರಾಬಾದ್ ವಿಮೋಚನಾ ದಿನ ಆಚರಿಸುತ್ತಿಲ್ಲ ಎಂದು ಕೇಂದ್ರ ಸಚಿವ ಅಮಿತ್ ಶಾ ಶನಿವಾರ ಟಿಆರ್ ಎಸ್ ಮತ್ತು ಓವೈಸಿ ವಿರುದ್ಧ ಪರೋಕ್ಷವಾಗಿ ಕಿಡಿ ಕಾರಿದ್ದಾರೆ.
ಸೆಪ್ಟೆಂಬರ್ 17, 1948 ರಂದು ನಿಜಾಮ್ ಆಳ್ವಿಕೆಯಲ್ಲಿ ಹಿಂದಿನ ಹೈದರಾಬಾದ್ ರಾಜ್ಯವು ಭಾರತೀಯ ಒಕ್ಕೂಟದೊಂದಿಗೆ ವಿಲೀನಗೊಂಡ ಸಂದರ್ಭವನ್ನು ಗುರುತಿಸಲು ಕೇಂದ್ರ ಸರ್ಕಾರದ ‘ಹೈದರಾಬಾದ್ ವಿಮೋಚನಾ ದಿನ’ದ ಅಧಿಕೃತ ಆಚರಣೆಯಲ್ಲಿ ಶಾ ಅವರು ಮಾತನಾಡಿ, ”ತೆಲಂಗಾಣದಲ್ಲಿ ಇಷ್ಟು ವರ್ಷಗಳ ಕಾಲ ‘ಹೈದರಾಬಾದ್ ವಿಮೋಚನಾ ದಿನ’ವನ್ನು ಅಧಿಕೃತವಾಗಿ ಆಚರಿಸದಿರುವುದು ದುರದೃಷ್ಟಕರ ಸಂಗತಿ. ಈ ದಿನವನ್ನು ಸ್ಮರಿಸಲು ನಿರ್ಧರಿಸಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಭಿನಂದಿಸುತ್ತೇನೆ” ಎಂದು ಹೇಳಿದರು.
ಇದನ್ನೂ ಓದಿ : ನಿಜಾಮ ಆಡಳಿತದಲ್ಲಿ ಧ್ವಜ ಹಾರಿಸಿದ್ದ ಸಾಹಸಿಗರು
”ಸರ್ಕಾರದ ಒಪ್ಪಿಗೆಯೊಂದಿಗೆ ಹೈದರಾಬಾದ್ ವಿಮೋಚನಾ ದಿನವನ್ನು ಆಚರಿಸಬೇಕು ಎಂಬ ಬೇಡಿಕೆ ಪ್ರದೇಶದಲ್ಲಿದ್ದಾಗ, 75 ವರ್ಷಗಳು ಕಳೆದಿರುವುದು ದುರದೃಷ್ಟಕರ, ಆದರೆ ಇಲ್ಲಿ ಸರ್ಕಾರದಲ್ಲಿದ್ದವರು ವೋಟ್ ಬ್ಯಾಂಕ್ ರಾಜಕಾರಣದಿಂದ ಹೈದರಾಬಾದ್ ವಿಮೋಚನಾ ದಿನವನ್ನು ಆಚರಿಸಲು ಧೈರ್ಯ ಮಾಡಲಿಲ್ಲ” ಎಂದು ಆರೋಪಿಸಿದರು.
ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರನ್ನು ಉಲ್ಲೇಖಿಸಿ, ”ಈ ದಿನವನ್ನು ಸ್ಮರಿಸಲು ಅನೇಕ ಜನರು ಚುನಾವಣೆ ಮತ್ತು ಆಂದೋಲನದ ಸಮಯದಲ್ಲಿ ಭರವಸೆ ನೀಡಿದ್ದರು ಆದರೆ ಅಧಿಕಾರಕ್ಕೆ ಬಂದ ನಂತರ ಅವುಗಳನ್ನು ಮರೆತಿದ್ದಾರೆ” ಎಂದರು.
ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಪುತ್ಥಳಿ ಗೆ ಗೌರವ ನಮನ ಸಲ್ಲಿಸಿದರು. ಸಮಾರಂಭದಲ್ಲಿ ಕೇಂದ್ರ ಪ್ರವಾಸೋದ್ಯಮ ಮತ್ತು ಸಂಸ್ಕೃತಿ ಸಚಿವ ಜಿ. ಕಿಶನ್ ರೆಡ್ಡಿ, ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಮತ್ತು ಕರ್ನಾಟಕ ಸಾರಿಗೆ ಸಚಿವ ಬಿ ಶ್ರೀರಾಮುಲು ಭಾಗಿಯಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
MUST WATCH
ಹೊಸ ಸೇರ್ಪಡೆ
ಬಿಗ್ಬಾಸ್ ವಿನ್ನರ್ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ