ಆ್ಯಸಿಡ್‌ ಹಾಕಿ ಪ್ರಿಯಕರನನ್ನೇ ಪತಿ ಮಾಡಿದಳಾ ಚಾಲಾಕಿ ಪತ್ನಿ !


Team Udayavani, Dec 12, 2017, 6:00 AM IST

acid.jpg

ಹೈದರಾಬಾದ್‌: ಇಲ್ಲಿ ನಡೆದ ಅಪರಾಧ ಕೃತ್ಯವೊಂದಕ್ಕೆ ರೋಚಕ ಟ್ವಿಸ್ಟ್‌ಗಳಿರುವ ಟಾಲಿವುಡ್‌ ಸಿನೆಮಾವಾಗಲಿ, ಹೈವೋಲ್ಟೆàಜ್‌ ಟಿವಿ ಸೀರಿಯಲ್‌ ಆಗಲಿ ಸರಿಸಾಟಿ ಆಗಲಿಕ್ಕಿಲ್ಲ. ಪತಿಯನ್ನು ಪತ್ನಿಯೇ ಕೊಲೆಗೈದು, ಪ್ರಿಯಕರನ ಮುಖಕ್ಕೆ ಆ್ಯಸಿಡ್‌ ಎರಚಿ, ಅವನನ್ನೇ ತನ್ನ ಪತಿಯೆಂದು ಹೇಳಿ ಅತ್ತೆ-ಮಾವನಿಗೆ ವಂಚಿಸಿ, ಈಗ ಕಂಬಿ ಎಣಿಸುತ್ತಿರುವ ಚಾಲಾಕಿಯ ಕಥೆಯಿದು.

ಸಿನೆಮಾಗಳನ್ನೂ ಮೀರಿಸುವಂಥ ಈ ಅಪರಾಧ ಕೃತ್ಯ ನಡೆದಿರುವುದು ಹೈದರಾಬಾದ್‌ನಲ್ಲಿ. ಪತಿಯನ್ನು ಕೊಂದ ತೆಲಂಗಾಣದ ಮಹಿಳೆ ಈಗ ಪೊಲೀಸರ ಅತಿಥಿಯಾಗಿದ್ದಾಳೆ. 

ಪ್ರಿಯಕರನ ಜತೆ ಸೇರಿ ಪತಿಯ ಕೊಂದಳು: ಕೆಲವು ವರ್ಷಗಳ ಹಿಂದೆ ಸುಧಾಕರ ರೆಡ್ಡಿ ಜತೆ ಸ್ವಾತಿ ಮದುವೆ ನಡೆದಿತ್ತು. ಬಳಿಕ ರಾಜೇಶ್‌ ಎಂಬಾತನ ಜತೆ ಆಕೆಗೆ ಪ್ರೇಮ ಅಂಕುರಿಸಿತ್ತು. ಹೀಗಾಗಿ, ರಾಜೇಶ್‌ ಜತೆ ಸೇರಿ ಪತಿಯ ಕೊಲೆ ಮಾಡಲು ಸ್ವಾತಿ ಸಂಚು ರೂಪಿಸಿದಳು. ನ. 26ರಂದು ನಾಗರಕರ್ನೂಲ್‌ ಜಿಲ್ಲೆಯಲ್ಲಿರುವ ತನ್ನ ಮನೆಯಲ್ಲಿ ಪತಿ ಸುಧಾಕರ್‌ ಮಲಗಿದ್ದಾಗ, ಆತನ ತಲೆಗೆ ಹೊಡೆದು ಕೊಂದು ಹಾಕಿದ್ದಳು. ಬಳಿಕ ಸ್ವಾತಿ ಮತ್ತು ರಾಜೇಶ್‌ ಇಬ್ಬರೂ ಸೇರಿ ಮೃತದೇಹವನ್ನು ಸಮೀಪದ ಮೈಸಮ್ಮಾ ಅರಣ್ಯಪ್ರದೇಶದಲ್ಲಿ ಎಸೆದು ಬಂದಿದ್ದರು.

ಪ್ರಿಯಕರನಿಗೆ ಆ್ಯಸಿಡ್‌: 2 ದಿನಗಳ ಅನಂತರ ಪ್ರಿಯಕರ ರಾಜೇಶ್‌ನ ಮುಖಕ್ಕೆ ಸ್ವಾತಿ ಆ್ಯಸಿಡ್‌ ಎರಚಿದಳು. ರಾಜೇಶ್‌ ಮುಖ ಸುಟ್ಟುಹೋಯಿತು. ಸುಧಾಕರನ ಸ್ಥಾನವನ್ನು ತುಂಬಲೆಂದೇ ಇಬ್ಬರೂ ಸೇರಿಯೇ ಈ ಖತರ್ನಾಕ್‌ ಪ್ಲಾ ನ್‌ ರೂಪಿಸಿದ್ದರು. ಅದರಂತೆ, ಸುಟ್ಟ ಗಾಯಗಳಾದ ರಾಜೇಶ್‌ನನ್ನು ಮನೆಗೆ ಕರೆದೊಯ್ದ ಸ್ವಾತಿ, “ಪತಿಯ ಮುಖಕ್ಕೆ ಯಾರೋ ದುಷ್ಕರ್ಮಿಗಳು ಆ್ಯಸಿಡ್‌ ಎರಚಿದ್ದಾರೆ’ ಎಂದು ಅತ್ತೆ-ಮಾವನಿಗೆ ಹೇಳಿದ್ದಳು. ಸೊಸೆಯ ಮಾತನ್ನು ಅವರೂ ನಂಬಿದರು.

ಪ್ಲಾಸ್ಟಿಕ್‌ ಸರ್ಜರಿಗೆ 5 ಲಕ್ಷ: ಅಪ್ಪ-ಅಮ್ಮ, ರಾಜೇಶ್‌ನನ್ನು ಸುಧಾಕರನೆಂದೇ ನಂಬಿ ಹೈದರಾಬಾದ್‌ನ ಖಾಸಗಿ ಆಸ್ಪತ್ರೆಗೆ ದಾಖಲಿಸಿದರು. ಅಷ್ಟೇ ಅಲ್ಲ, ಅವನ ಪ್ಲಾಸ್ಟಿಕ್‌ ಸರ್ಜರಿಗಾಗಿ ಬರೋಬ್ಬರಿ 5 ಲಕ್ಷ ರೂ.ಗಳನ್ನೂ ವ್ಯಯಿಸಿದ್ದರು. ಪ್ಲಾಸ್ಟಿಕ್‌ ಸರ್ಜರಿ ಮುಗಿದರೆ, ಮತ್ತೆ ನಮ್ಮ ಮೇಲೆ ಯಾರೂ ಅನುಮಾನ ಪಡುವುದಿಲ್ಲ ಎಂದೇ ಭಾವಿಸಿದ್ದರು ಸ್ವಾತಿ ಮತ್ತು ರಾಜೇಶ್‌. ಆದರೆ, ಆಗಿದ್ದೇ ಬೇರೆ.

ಅಮ್ಮನಿಗೆ ಬಂತು ಡೌಟು: ಪ್ಲಾಸ್ಟಿಕ್‌ ಸರ್ಜರಿ ಯಾದ್ರೂ ಮಗ ಯಾರೆಂದು ಹೆತ್ತಮ್ಮನಿಗೆ ಗೊತ್ತಾ ಗದೇ? ಆಸ್ಪತ್ರೆಯಲ್ಲಿದ್ದ “ಮಗ’ನ ಮಾತು, ವರ್ತನೆ ಬಗ್ಗೆ ಅಮ್ಮನಿಗೆ ಅನುಮಾನ ಮೂಡ ತೊಡಗಿತು. ಕುಟುಂಬದ ತೀರಾ ಹತ್ತಿರದ ವಿಚಾರಗಳ ಬಗ್ಗೆ ಹೇಳಿದರೂ ಅವನಿಗೆ ಉತ್ತರಿಸಲು ಆಗುತ್ತಿರಲಿಲ್ಲ, ಪ್ರಶ್ನೆ ಕೇಳಿದರೆ ಮೆಲ್ಲಗೆ ಹಾರಿಕೆಯ ಉತ್ತರ ನೀಡುತ್ತಿದ್ದ. ಇದನ್ನೆಲ್ಲ ನೋಡಿದ ಹೆತ್ತಮ್ಮನಿಗೆ, “ಇಲ್ಲೇನೋ ನಡೆಯುತ್ತಿದೆ’ ಎಂಬ ಅನುಮಾನ ಬಲವಾಗತೊಡಗಿತು. ಕೊನೆಗೆ ಸುಧಾಕರನ ಅಪ್ಪ- ಅಮ್ಮ ಪೊಲೀಸ್‌ ಠಾಣೆಯ ಮೆಟ್ಟಿಲು ಏರಿಯೇ ಬಿಟ್ಟರು. ಸ್ವಾತಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ, ಸಂಪೂರ್ಣ ಸಂಚಿನ ಮಾಹಿತಿ ಹೊರಬಿತ್ತು. ಇನ್ನೊಂದೆಡೆ, ಅರಣ್ಯದಲ್ಲಿ ಸುಧಾಕರ ರೆಡ್ಡಿಯ ಮೃತದೇಹವೂ ಪತ್ತೆಯಾಯಿತು. ರಾಜೇಶ್‌ ಸುಟ್ಟ ಗಾಯಕ್ಕೆ ಚಿಕಿತ್ಸೆ ಪಡೆಯುತ್ತಿದ್ದು, ಆತನ ಬಂಧನಕ್ಕಾಗಿ ಪೊಲೀಸರು ಕಾಯುತ್ತಿದ್ದಾರೆ.

ಆಧಾರ್‌ನಿಂದ ಸತ್ಯ ಬಯಲು
ಹತ್ಯೆಯಾದ ಪತಿಯ ತಂದೆ- ತಾಯಿ ಅನುಮಾನದ ಮೇಲೆ ತನಿಖೆ ಆರಂಭಿಸಿದ್ದ  ಪೊಲೀಸರಿಗೆ “ಇವನು ಅವನಲ್ಲ’ವೆಂದು ಹೇಗೆ ಸಾಬೀತು ಮಾಡುವುದು ಎಂಬ ಬಗ್ಗೆ ತಲೆಬಿಸಿಯಾಗಿತ್ತು. ಆದರೆ ಆಧಾರ್‌ನ ಬಯೋಮೆಟ್ರಿಕ್‌ ದಾಖಲೆ ತೆಗೆದು ಪರಿಶೀಲನೆ ನಡೆಸಿದಾಗ ಬೆರಳಚ್ಚು ಹೋಲಿಕೆಯಾಗಿಲ್ಲ. ಆಗ ಸಿಕ್ಕಿಬಿದ್ದಿದ್ದಾನೆ.

ಟಾಪ್ ನ್ಯೂಸ್

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.