ಹ್ಯುಂಡೈನಿಂದ ರಸ್ತೆ ಸುರಕ್ಷತಾ ಸಪ್ತಾಹ
Team Udayavani, Apr 25, 2018, 11:39 AM IST
ನವದೆಹಲಿ: ದೇಶದ 2ನೇ ಅತಿ ದೊಡ್ಡ ಕಾರು ಉತ್ಪಾದನಾ ಸಂಸ್ಥೆ ಹ್ಯುಂಡೈ ಮೋಟಾರ್ ಇಂಡಿಯಾ ಏ.23ರಿಂದ 30ರವರೆಗೆ ದೇಶಾದ್ಯಂತ ರಸ್ತೆ ಸುರಕ್ಷಾ ಸಪ್ತಾಹ ಹಮ್ಮಿಕೊಂಡಿದೆ. ಸಪ್ತಾಹದಲ್ಲಿ ರಸ್ತೆ ಸುರಕ್ಷತೆ ಉಪಕ್ರಮಗಳು, ಟ್ರಾಫಿಕ್ ನಿಯಮಗಳು ಹಾಗೂ ಸುರಕ್ಷಿತ ಚಾಲನಾ ಪದ್ಧತಿಯನ್ನು ಉತ್ತೇಜಿಸುವ ಗುರಿ ಸಂಸ್ಥೆಯದಾಗಿದೆ.
ಈ ಸಂದರ್ಭದಲ್ಲಿ ಹ್ಯುಂಡೈ ಮೋಟಾರ್ ಇಂಡಿಯಾ ವ್ಯವಸ್ಥಾಪಕ ನಿರ್ದೇಶಕ ಮತ್ತು ಸಿಇಒ ವೈ.ಕೆ. ಕೂØ ಮಾತನಾಡಿ, ಹ್ಯುಂಡೈ ಸಾಮಾಜಿಕ ಜವಾಬ್ದಾರಿಯುಳ್ಳ ಸಂಸ್ಥೆಯಾಗಿದೆ. ಒಂದು ವಾರ ಕಾಲ ನಮ್ಮ ಎಲ್ಲ 1300 ವರ್ಕ್ಶಾಪ್ಗ್ಳಲ್ಲಿ ರಸ್ತೆ ಸುರಕ್ಷತೆ ಮತ್ತು ಸಂಚಾರಿ ನಿಯಮಗಳನ್ನು ಪಾಲಿಸುವ ಬಗ್ಗೆ ಗ್ರಾಹಕರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡುತ್ತದೆ.
ಈ ಕಾರ್ಯವನ್ನು 2015ರಿಂದಲೂ ಮಾಡುತ್ತಾ ಬಂದಿದೆ. ರಸ್ತೆ ಸುರಕ್ಷತಾ ಜ್ಞಾನವು ಜೀವನದ ಒಂದು ಪ್ರಮುಖ ಕೌಶಲ್ಯವಾಗಿದೆ. ಇದನ್ನು ಮಕ್ಕಳು, ಯುವಕರು ಸೇರಿದಂತೆ ಎಲ್ಲರಿಗೂ ತಿಳಿಯಪಡಿಸುವ ಮೂಲಕ ರಸ್ತೆ ಮತ್ತು ಚಾಲನಾ ನಡವಳಿಕೆಗಳ ಬಗ್ಗೆ ಜಾಗೃತಿ ಉಂಟುಮಾಡುವುದು ಕಾರ್ಯಕ್ರಮದ ಉದ್ದೇಶ ಎಂದರು.
ಮಕ್ಕಳಿಗೆ ಸ್ಪರ್ಧೆ: ವಾರಾಂತ್ಯದವರೆಗೆ ನಾಗರಿಕ ಕ್ಷೇಮಾಭಿವೃದ್ಧಿ ಸಂಘಗಳು, ವಸತಿ ಸಮುದಾಯಗಳ ಬಳಿ ಹ್ಯುಂಡೈ ಮಾರಾಟ ಮತ್ತು ಸರ್ವೀಸ್ ಶಿಬಿರ ಆಯೋಜಿಸುತ್ತಿದ್ದು, ಇದೇ ವೇಳೆ ಮಕ್ಕಳಿಗೆ ಸಂಚಾರ ಸುರಕ್ಷತೆ ವಿಷಯದ ಬಗ್ಗೆ ಚಿತ್ರಕಲೆ ಮತ್ತು ಸ್ಲೋಗನ್ ಸ್ಪರ್ಧೆಗಳನ್ನು ಏರ್ಪಡಿಸಲಾಗುತ್ತದೆ. ಅಲ್ಲದೆ, ಸಪ್ತಾಹದ ಅವಧಿಯಲ್ಲಿ ಗ್ರಾಹಕರು ತಮ್ಮ ಹ್ಯುಂಡೈ ಕಾರನ್ನು 20 ಪಾಯಿಂಟ್ ಸೇಫ್ಟಿ ಚೆಕ್ ಅಪ್ ಮಾಡಿಸಿಕೊಳ್ಳುವ ಅವಕಾಶಕ ಕಲ್ಪಿಸಲಾಗಿದೆ ಎಂದು ಅವರು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ