ನಾನೊಬ್ಬ ಯೋಧ, ಪಂಜಾಬ್ ಗತ ವೈಭವ ಮರು ಸ್ಥಾಪಿಸುತ್ತೇನೆ; ಭಗವಂತ ಮಾನ್
ಆಪ್ ಸಿಎಂ ಅಭ್ಯರ್ಥಿ ಮನ್ನ ಘೋಷಣೆ
Team Udayavani, Jan 18, 2022, 6:16 PM IST
ಪಂಜಾಬ್:ನಾನೊಬ್ಬ ಯೋಧ, ಪಂಜಾಬಿನ ಗತವೈಭವವನ್ನು ಮರಳಿ ಸ್ಥಾಪಿಸುವುದುದೇ ನನ್ನ ಗುರಿ ಎಂದು ಪಂಜಾಬ್ ಚುನಾವಣೆಗೆ ಆಮ್ ಆದ್ಮಿ ಪಕ್ಷ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಬಿಂಬಿಸಿರುವ ಭಗವಂತ ಮಾನ್ ಹೇಳಿದ್ದಾರೆ.
ಪಂಜಾಬ್ ಮುಖ್ಯಮಂತ್ರಿ ಅಭ್ಯರ್ಥಿ ಯಾರಾಗಬೇಕೆಂದು ಆಮ್ ಆದ್ಮಿ ಪಕ್ಷ ಜನತಾ ಸರ್ವೆ ನಡೆಸಿತ್ತು. ಈ ಆಯ್ಕೆ ಪ್ರಕ್ರಿಯೆಯಲ್ಲಿ ಭಗವಂತ ಮಾನ್ ಆಯ್ಕೆಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಸುದ್ದಿಗಾರರ ಜತೆ ಮಾತನಾಡಿರುವ ಅವರು, ಪಂಜಾಬ್ ಪುನರುತ್ಥಾನದ ಕನಸು ಬಿಚ್ಚಿಟ್ಟಿದ್ದಾರೆ.
ರಾಜಕೀಯ ಪ್ರವೇಶದ ಬಳಿಕ ನನ್ನ ಬದುಕೇ ಬದಲಾಗಿದೆ. ಈ ಹಿಂದೆ ನಾನು ಕಾಮಿಡಿ ಮಾಡುತ್ತಿದ್ದಾಗ ಜನ ನನ್ನತ್ತ ನಗೆ ಬೀರುತ್ತಿದ್ದರು. ಈಗ ನನ್ನತ್ತ ಭರವಸೆಯ ಕಣ್ಣುಗಳಿಂದ ನೋಡುತ್ತಿದ್ದಾರೆ. ನಮ್ಮ ರಕ್ಷಣೆ ಹೊಣೆ ನಿನ್ನದು ಎಂಬ ಭಾವ ಅವರ ನೋಟದಲ್ಲಿದೆ. ಭಗವಂತ ಸರ್ವ ರಕ್ಷಕ. ನಾನು ಕೇವಲ ಮಾಧ್ಯಮ ಮಾತ್ರ ಎಂದು ಅಭಿಪ್ರಾಯಪಟ್ಟಿದ್ದಾರೆ.
ಪಂಜಾಬ್ನ ಗತ ವೈಭವವನ್ನು ಮರಳಿ ಸ್ಥಾಪಿಸುವುದು ನನ್ನ ಗುರಿ. ನಾನೊಬ್ಬ ಯೋಧ. ಗುರಿ ಸಾಧನೆಯಲ್ಲಿ ಎಂದಿಗೂ ಹಿಂದೆ ಬೀಳುವುದಿಲ್ಲ ಎಂದು ಹೇಳಿದ್ದಾರೆ.ಸ್ಟ್ಯಾಂಡ್ ಅಪ್ ಕಾಮಿಡಿಯನ್ ಆಗಿ ಹೆಸರು ಮಾಡಿದ್ದ ಮಾನ್ ಆಮ್ ಆದ್ಮಿ ಪಕ್ಷದ ಮೂಲಕ ರಾಜಕೀಯ ಪಾದಾರ್ಪಣೆ ಮಾಡಿದ್ದರು. ಜನರಿಂದಲೇ ಸಿಎಂ ಅಭ್ಯರ್ಥಿಯಾಗಿ ಆಯ್ಕೆಗೊಂಡಿರುವ ಅವರಿಗೆ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಈಗಾಗಲೇ ಅಭಿನಂದನೆ ಸಲ್ಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ
Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ
Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್’: ಟ್ರೇಲರ್, ಆಡಿಯೋದಲ್ಲಿ ಹೊಸಬರ ಚಿತ್ರ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು