ನಾನೇನೂ ರಾಜಕಾರಣಿಯಲ್ಲ, ಅಸ್ಸಾಂ ಬಿಜೆಪಿ ಅಭ್ಯರ್ಥಿಯೂ ಅಲ್ಲ: ರಂಜನ್ ಗೊಗೊಯ್ ತಿರುಗೇಟು
Team Udayavani, Aug 23, 2020, 4:15 PM IST
ಹೊಸದಿಲ್ಲಿ: ನಾನೇನೂ ರಾಜಕಾರಣಿಯಲ್ಲ. ಅದಲ್ಲದೆ ಅಸ್ಸಾಂ ಮುಖ್ಯಮಂತ್ರಿ ಹುದ್ದೆಯ ಆಕಾಂಕ್ಷಿಯೂ ಅಲ್ಲ ಎಂದು ಮಾಜಿ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ, ನಾಮನಿರ್ದೇಶಿತ ರಾಜ್ಯಸಭಾ ಸದಸ್ಯ ರಂಜನ್ ಗೊಗೊಯ್ ಹೇಳಿದ್ದಾರೆ.
ಮುಂದಿನ ವರ್ಷದ ಅಸ್ಸಾಂ ವಿಧಾನಸಭೆ ಚುನಾವಣೆಯಲ್ಲಿ ರಂಜನ್ ಗೊಗೊಯ್ ಅವರು ಬಿಜೆಪಿಯಿಂದ ಮುಖ್ಯಮಂತ್ರಿ ಅಭ್ಯರ್ಥಿಯಾಗಿರಲಿದ್ದಾರೆ ಎಂಬ ತರುಣ್ ಗೊಗೊಯ್ ಆರೋಪಕ್ಕೆ ಉತ್ತರಿಸುತ್ತಾ ರಂಜನ್ ಗೊಗೊಯ್ ಈ ಮಾತುಗಳನ್ನಾಡಿದ್ದಾರೆ.
ಇಂಡಿಯಾ ಟುಡೆ ಜೊತೆ ಮಾತನಾಡಿರುವ ಅವರು, ಜನರು ನಾಮನಿರ್ದೇಶಿತ ರಾಜ್ಯಸಭಾ ಸದಸ್ಯ ಮತ್ತು ರಾಜಕೀಯ ಪಕ್ಷದಿಂದ ಆಯ್ಕೆಯಾದ ಸದಸ್ಯರ ನಡುವಿನ ಅಂತರವನ್ನು ಗಮನಿಸಬೇಕು. ನಾನು ಸ್ವತಂತ್ರನಾಗಿ ನನ್ನ ಅಭಿಪ್ರಾಯವನ್ನು ಹೇಳಿಕೊಳ್ಳಬಹುದು. ನಾನು ರಾಜಕಾರಣಿಯಲ್ಲ ಎಂದು ಹೇಳಿದ್ದಾರೆ.
ಬಿಜೆಪಿ ಪಟ್ಟಿಯಲ್ಲಿ ರಂಜನ್ ಹೆಸರು ಇದೆ. ಈ ಬಗ್ಗೆ ಕೆಲ ಮೂಲಗಳಿಂದ ನನಗೆ ಮಾಹಿತಿ ಬಂದಿದೆ. ಈಗಾಗಲೇ ಅವರು ರಾಜ್ಯಸಭೆಗೆ ಆಯ್ಕೆಯಾಗಿದ್ದಾರೆ. ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣದ ಬಗ್ಗೆ ತೀರ್ಪು ನೀಡಿದ ಬಳಿಕ ರಂಜನ್ ಬಿಜೆಪಿ ನಾಯಕರ ಫೇವರಿಟ್. ಹೀಗಾಗಿ ಅವರನ್ನು ರಾಜ್ಯಸಭೆಗೆ ಆಯ್ಕೆ ಮಾಡಲಾಯಿತು. ಎಲ್ಲವೂ ಬಿಜೆಪಿ ರಾಜಕೀಯ. ಹೀಗಾಗಿ ಮುಂಬರುವ ಅಸ್ಸಾಂ ಚುನಾವಣೆಯಲ್ಲಿ ರಂಜನ್ ಗೊಗೊಯ್ ಅಸ್ಸಾಂ ಸಿಎಂ ಆಗಿ ಆಯ್ಕೆಯಾದರೂ ಅಚ್ಚರಿಯಿಲ್ಲ ಎಂದು ತರುಣ್ ಗೊಗೊಯ್ ಹೇಳಿಕೆ ನೀಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Brahmos; ಫಿಲಿಪ್ಪೀನ್ಸ್ಗೆ ಬ್ರಹ್ಮೋಸ್: ಭಾರತದ ಮೊದಲ ರಫ್ತು
EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು