ಸ್ಟಾರ್‌ಗಿರಿ ರಾಜಕೀಯಕ್ಕೆ ನೆರವಾಗದು: ರಜನಿಕಾಂತ್‌​​​​​​​


Team Udayavani, Oct 2, 2017, 6:20 AM IST

Rajinikanth–800.jpg

ಚೆನ್ನೈ/ಮುಂಬಯಿ: ಇನ್ನೇನು ಕೆಲವೇ ದಿನಗಳಲ್ಲಿ ಬಹುಭಾಷಾ ನಟ ಕಮಲ್‌ಹಾಸನ್‌ ತಮಿಳುನಾಡಿನಲ್ಲಿ ಹೊಸ ರಾಜಕೀಯ ಪಕ್ಷ ಸ್ಥಾಪಿಸಿ, ಅದರಲ್ಲಿ ಆರಂಗೇಟ್ರಂ ನಡೆಸಲಿದ್ದಾರೆ. ಅದಕ್ಕೆ ಪೂರಕವಾಗಿ ಸೂಪರ್‌ಸ್ಟಾರ್‌ ರಜನೀ ಕಾಂತ್‌ ಮಾತನಾಡಿ, ಸಿನಿಮಾ ಕ್ಷೇತ್ರದಲ್ಲಿ ಸಂಪಾದಿಸಿದ ಕೀರ್ತಿ ಮತ್ತು ಜನಮನ್ನಣೆ ರಾಜಕೀಯ ಕ್ಷೇತ್ರದಲ್ಲಿ ಹೆಚ್ಚಿನ ನೆರವಾಗಲಾರದು. 

ಸಾರ್ವಜನಿಕ ಜೀವನದಲ್ಲಿ ಯಶಸ್ಸು ಗಳಿಸಲು ಅದಕ್ಕಿಂತ ಹೆಚ್ಚಿನ ಪ್ರಯತ್ನ ಬೇಕಾಗಿದೆ ಎಂದು ಟಾಂಗ್‌ ನೀಡಿದ್ದಾರೆ. 
ತಮಿಳು ಚಿತ್ರರಂಗದ ಮೇರು ನಟ ಶಿವಾಜಿ ಗಣೇಶನ್‌ ಸ್ಮರಣಾರ್ಥ ಅಲ್ಲಿನ ರಾಜ್ಯ ಸರಕಾರ ನಿರ್ಮಿಸಿರುವ ಸ್ಮಾರಕದ ಉದ್ಘಾಟನೆಯಲ್ಲಿ ರವಿವಾರ ಇಬ್ಬರು ಜನಪ್ರಿಯ ನಟರು ವೇದಿಕೆ ಹಂಚಿಕೊಂಡಿದ್ದರು. ಅಲ್ಲಿ ರಜನಿ ತಮ್ಮ ಮಾತುಗಳನ್ನು ಸಮರ್ಥಿಸಲು ಶಿವಾಜಿ ಗಣೇಶನ್‌ನ ಉದಾಹರಣೆ ನೀಡಿದರು. 

“ಶಿವಾಜಿ ಗಣೇಶನ್‌ ತಮಿಳು ಚಿತ್ರರಂಗದಲ್ಲಿ ಜನಪ್ರಿಯತೆಯ ಉತ್ತುಂಗದಲ್ಲಿದ್ದಾಗಲೇ ರಾಜಕೀಯ ಪಕ್ಷ ಸ್ಥಾಪಿಸಿ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದರು. ಚುನಾವಣೆಯಲ್ಲಿ ಅವರದ್ದೇ ಕ್ಷೇತ್ರದಲ್ಲಿ ಸೋಲು ಅನುಭವಿಸಿದ್ದರು. ಈ ಬೆಳವಣಿಗೆ ನಟನಿಗೆ ಅವಮಾನ ತರಲಿಲ್ಲ. ಆದರೆ ಆ ಕ್ಷೇತ್ರದ ಜನರಿಗೆ ಹಿನ್ನಡೆಯಾಯಿತು’ ಎಂದರು. ರಾಜಕೀಯದಲ್ಲಿ ಹೇಗೆ ಯಶಸ್ವಿಯಾಗ ಬೇಕು ಎಂಬ ಸಲಹೆಗಳನ್ನು ಎರಡು ತಿಂಗಳ ಹಿಂದೆ ಕೇಳಿದ್ದರೆ, ಕಮಲ್‌ ನೀಡುತ್ತಿದ್ದರು. ಆದರೆ ಈಗ ಕೇಳಿದರೆ ನನ್ನ ಪಕ್ಷಕ್ಕೆ ಬಾ ಎಂದು ಆಹ್ವಾನ ನೀಡುತ್ತಾರೆ ಎನ್ನುತ್ತಾ ಕಮಲ್‌ರ ಕಾಲೆಳೆದರು ರಜನಿ. 

“ಹೀಗಾಗಿ, ಸಿನಿಮಾ ರಂಗದ ಜನಪ್ರಿಯತೆ, ಯಶಸ್ಸು ಇದ್ದರೂ ಪ್ರಾಯೋಗಿಕವಾಗಿರುವ ರಾಜಕೀಯಕ್ಕೆ ಅದಕ್ಕಿಂತ ಮಿಗಿಲಾದ ಪ್ರಯತ್ನಗಳು ಬೇಕಾಗಿವೆ ಎಂದಿದ್ದಾರೆ ತಮಿಳು ಸೂಪರ್‌ಸ್ಟಾರ್‌. ಈ ಅಂಶ ನಟ, ಸ್ನೇಹಿತ ಕಮಲ್‌ಹಾಸನ್‌ಗೆ ತಿಳಿದಿದೆ ಎಂದು ಭಾವಿಸುವೆ. ಒಂದು ವೇಳೆ ಅವರಿಗೆ ಗೊತ್ತಿದ್ದರೂ, ನನ್ನ ಜತೆ ಹೇಳಲಾರರು ಎಂದುಕೊಂಡಿದ್ದೇನೆ’ ಎಂದಾಗ ಗೊಳ್ಳನೆ ನಗುವ ಸರದಿ ಅಲ್ಲಿ ಸೇರಿದವರದ್ದು.

ಎಐಎಡಿಎಂಕೆಗೆ ಟೀಕೆ: ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಕಮಲ್‌ಹಾಸನ್‌ ರಜನಿ ಮಾತುಗಳಿಗೆ ಮೌನ ವಹಿಸಿದರೂ, ರಾಜ್ಯ ಸರಕಾರದ ವಿರುದ್ಧ ಹರಿಹಾಯದೆ ಬಿಡಲಿಲ್ಲ. “ನನಗೆ ಆಹ್ವಾನ ಇಲ್ಲದೇ ಇರುತ್ತಿದ್ದರೆ ವೇದಿಕೆಗೆ ಬರುತ್ತಿರಲಿಲ್ಲ. ಆದರೆ ಹೊರಗೆ ಒಬ್ಬ ಅಭಿಮಾನಿಯಾಗಿ ಬಂದು ಹೋಗುತ್ತಿದ್ದೆ. ಅದನ್ನು ತಡೆಯಲು ಯಾರಿಗೂ ಸಾಧ್ಯವಿಲ್ಲ. ಯಾವುದೇ ಸರ್ಕಾರ ಶಿವಾಜಿ ಗಣೇಶನ್‌ರನ್ನು ಗೌರವಿಸಲೇಬೇಕು ಎಂದಿದ್ದಾರೆ.
50 ವರ್ಷಗಳ ಸಂಬಂಧ: ಬೆಳ್ಳಿತೆರೆಯ ಹಿಂದೆ ಕಮಲ್‌ ಮತ್ತು ರಜನಿ ಅವರದ್ದು 50 ವರ್ಷಗಳ ಬಾಂಧವ್ಯ. ರಜನಿಕಾಂತ್‌ ರಾಜ ಕೀಯ ಪ್ರವೇಶದ ಗುಸು ಗುಸು ಮತ್ತು ಕಮಲ್‌ಹಾಸನ್‌ರ ರಾಜಕೀಯ ಪ್ರವೇಶದ ಘೋಷಣೆ ಬಳಿಕ ಇದೇ ಮೊದ ಲ  ಬಾರಿಗೆ ಕಾರ್ಯಕ್ರಮವೊಂದರಲ್ಲಿ ಇಬ್ಬರು ನಟರು ವೇದಿಕೆ ಹಂಚಿಕೊಂಡಿದ್ದಾರೆ.

ಹೊಸ ಪಕ್ಷ ಘೋಷಣೆ 
ಮಾಡಿದ ನಾರಾಯಣ ರಾಣೆ

ಮಹಾರಾಷ್ಟ್ರದ ರಾಜಕೀಯಕ್ಕೆ ಮತ್ತೂಂದು ಹೊಸ ಪಕ್ಷದ ಸೇರ್ಪಡೆಯಾಗಿದೆ. ಕಾಂಗ್ರೆಸ್‌ಗೆ ಕಳೆದ ತಿಂಗಳು ವಿದಾಯ ಹೇಳಿದ ಮಾಜಿ ಮುಖ್ಯಮಂತ್ರಿ ನಾರಾಯಣ ರಾಣೆ “ಮಹಾರಾಷ್ಟ್ರ ಸ್ವಾಭಿಮಾನಿ ಪಕ್ಷ’ ಎಂಬ ಹೊಸ ಪಕ್ಷ ರಚಿಸಿದ್ದಾರೆ. ಹೊಸ ಪಕ್ಷಕ್ಕೆ ಶೀಘ್ರವೇ ಹಲವಾರು ಮಂದಿ ನಾಯಕರು ಸೇರ್ಪಡೆಯಾಗಲಿದ್ದಾರೆ. ಬಳಿಕ ಮುಂದಿನ ನಿರ್ಧಾರ ಪ್ರಕಟಿಸುವುದಾಗಿ ರಾಣೆ ಹೇಳಿದ್ದಾರೆ. ಈ ನಡುವೆ ಅವರು ಬಿಜೆಪಿ-ಶಿವಸೇನೆ ಮೈತ್ರಿಕೂಟ ಸರ್ಕಾರಕ್ಕೆ ಹಿರಿಯ ಸಚಿವರಾಗಿ ಸೇರ್ಪಡೆಗೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಮೂಲಕ ಪದೇ ಪದೆ ಬೆಂಬಲ ಹಿಂಪಡೆಯುವ ಬೆದರಿಕೆ ಹಾಕುವ ಶಿವಸೇನೆ ಮೇಲೆ ನಿಯಂತ್ರಣ ಹೇರಲೂ ಬಿಜೆಪಿ ಮುಂದಾಗಿದೆ ಎಂದು ಹೇಳಲಾಗುತ್ತಿದೆ. ರಾಣೆ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಎಂದು ಹೇಳಲಾಗಿತ್ತು. ಅದಕ್ಕೆ ಪೂರಕವಾಗಿ ಮುಖ್ಯಮಂತ್ರಿ ದೇವೇಂದ್ರ ಫ‌ಡ್ನವೀಸ್‌ ಮತ್ತು ಬಿಜೆಪಿ ಅಧ್ಯಕ್ಷ ಅಮಿತ್‌ ಶಾ ಜತೆಗೆ ಕೂಡ ಮಾತುಕತೆ ನಡೆದಿತ್ತು.
 

ಟಾಪ್ ನ್ಯೂಸ್

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

1eqqewe

IPL; ಪಂಜಾಬ್‌ ಕಿಂಗ್ಸ್‌-ಮುಂಬೈ ಇಂಡಿಯನ್ಸ್‌ : ಒಂದೇ ದೋಣಿಯ ಪಯಣಿಗರು

Lok Sabha Polls 2024 ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

1-eqwewq

Sunil Narine ನಿವೃತ್ತಿ ತೊರೆದು ಟಿ20 ವಿಶ್ವಕಪ್‌ ಆಡಲಿ: ಪೊವೆಲ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

5-fusion

UV Fusion: ನಾಟಕದ ಜೀವನಕ್ಕೆ ಯಾತಕ್ಕಾಗಿ ದೇವರ ಹೊಣೆ

4-uv-fusion

Women: ಜಗದೆಲ್ಲ ನೋವನುಂಡರೂ ಹಿತ ಬಯಸುವವಳು ಮಾತೇ

3-uv-fusion

Holi: ಬಣ್ಣಗಳ ಹಬ್ಬ ಹೋಳಿ ಹಬ್ಬ, ಉಲ್ಲಾಸ ತರುವ ಬಣ್ಣಗಳ ಹಬ್ಬ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.