ಬೆದರಿಕೆಗೆ ಹೆದರಲ್ಲ – ನಾನು ಇಂದಿರಾಗಾಂಧಿ ಮೊಮ್ಮಗಳು; ಯುಪಿ ಸರ್ಕಾರಕ್ಕೆ ಪ್ರಿಯಾಂಕಾ
ಪ್ರಿಯಾಂಕಾ ಗಾಂಧಿಗೆ ಉತ್ತರ ಪ್ರದೇಶ ಸರ್ಕಾರ ನೋಟಿಸ್ ಜಾರಿಗೊಳಿಸಿದ್ದಕ್ಕೆ ತೀವ್ರ ವಾಗ್ದಾಳಿ
Team Udayavani, Jun 26, 2020, 4:56 PM IST
ಲಕ್ನೋ:ಕಾನ್ಪುರದ ಮಕ್ಕಳ ನಿಲಯದಲ್ಲಿ ಇಬ್ಬರು ಅಪ್ರಾಪ್ತ ಹೆಣ್ಣು ಮಕ್ಕಳು ಗರ್ಭಿಣಿಯಾಗಿರುವ ವಿಷಯಕ್ಕೆ ಸಂಬಂಧಿಸಿದಂತೆ ಹೇಳಿಕೆ ನೀಡಿರುವ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿಗೆ ಉತ್ತರ ಪ್ರದೇಶ ಸರ್ಕಾರ ನೋಟಿಸ್ ಜಾರಿಗೊಳಿಸಿದ್ದಕ್ಕೆ ತೀವ್ರ ವಾಗ್ದಾಳಿ ನಡೆಸಿರುವುದಾಗಿ ವರದಿ ತಿಳಿಸಿದೆ.
“ನಿಮಗೆ ಹೇಗೆ ಬೇಕೋ ಆ ರೀತಿ ಕ್ರಮ ತೆಗೆದುಕೊಳ್ಳಬಹುದು. ಆದರೆ ನಾನು ಸತ್ಯವನ್ನು ಹೇಳಿಯೇ ಸಿದ್ಧ. ನಾನು ಇಂದಿರಾಗಾಂಧಿ ಮೊಮ್ಮಗಳು, ನಾನೇನು ಬಿಜೆಪಿಯ ಅಘೋಷಿತ ವಕ್ತಾರರಂತೆ ವರ್ತಿಸುತ್ತಿರುವ ಕೆಲವು ವಿರೋಧ ಪಕ್ಷದ ನಾಯಕರಂತಲ್ಲ” ಎಂದು ಪ್ರಿಯಾಂಕಾ ಹಿಂದಿಯಲ್ಲಿ ಟ್ವೀಟ್ ಮಾಡುವ ಮೂಲಕ ತಿರುಗೇಟು ನೀಡಿದ್ದಾರೆ.
ಪ್ರಿಯಾಂಕಾ ಗಾಂಧಿ ಭಾನುವಾರ ತಮ್ಮ ಫೇಸ್ ಬುಕ್ ನಲ್ಲಿ, ಮಾಧ್ಯಮಗಳ ವರದಿ ಪ್ರಕಾರ ಕಾನ್ಪುರ್ ಸರ್ಕಾರಿ ಬಾಲಕಿಯರ ನಿಲಯದಲ್ಲಿನ ಇಬ್ಬರು ಹೆಣ್ಣು ಮಕ್ಕಳು ಗರ್ಭಿಣಿಯರು ಎಂಬುದು ಪತ್ತೆಯಾಗಿದೆ ಎಂದು ಪೋಸ್ಟ್ ಹಾಕಿದ್ದರು.
ನಾನು ಜನರ ಸೇವಕರಾದ ಮೇಲೆ, ಉತ್ತರ ಪ್ರದೇಶದ ಜನತೆ ಬಗ್ಗೆ ಕರ್ತವ್ಯ ನಿರ್ವಹಿಸುವುದು ನನ್ನ ಕಾಳಜಿಯಾಗಿದೆ. ಹೀಗಾಗಿ ನಾನು ಸತ್ಯವನ್ನು ಹೊರಗಿಡಲೇಬೇಕು. ಸರ್ಕಾರದ ಹೇಳಿಕೆ ನೀಡುವುದು ನನ್ನ ಕೆಲಸವಲ್ಲ. ಆದರೆ ಉತ್ತರಪ್ರದೇಶ ಸರ್ಕಾರ ವಿವಿಧ ಇಲಾಖೆಗಳ ಮೂಲಕ ನನ್ನನ್ನು ಬೆದರಿಸುವ ಮೂಲಕ ಸಮಯ ವ್ಯರ್ಥಮಾಡುತ್ತಿದೆ ಎಂದು ಪ್ರಿಯಾಂಕಾ ಶುಕ್ರವಾರ ಟ್ವೀಟ್ ನಲ್ಲಿ ಆರೋಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್ ಇನ್ ಫ್ಲುಯೆನ್ಸರ್ ನಿಧನ
Lok Sabha Election 2024: ಝಾರ್ಖಂಡ್, ಛತ್ತೀಸ್ಗಢದಲ್ಲಿ ಗೆಲುವು ಯಾರಿಗೆ?
ಗ್ಯಾಂಗ್ ಸ್ಟರ್ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್ ಮನೆಯಿಂದ ಕ್ಯಾಬ್ ಬುಕ್: ಯುವಕ ಅರೆಸ್ಟ್
Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
MUST WATCH
ಹೊಸ ಸೇರ್ಪಡೆ
Black Saree: ಕಪ್ಪು ಬಣ್ಣಕ್ಕೂ ನನಗೂ ಬಿಡಿಸಲಾರದ ನಂಟು
Gadag; ನಾಲ್ವರ ಬರ್ಬರ ಹತ್ಯೆ ಐವರು ದುಷ್ಕರ್ಮಿಗಳು ಮಾಡಿರುವ ಶಂಕೆ
Karataka Damanaka: ಭಟ್ರಾ ಗರಡಿಲಿ ತಯಾರಾದ ಕರಟಕ ದಮನಕ
ʼಭಜರಂಗಿ ಭಾಯಿಜಾನ್ʼ, ʼರೌಡಿ ರಾಥೋರ್ʼ ಸೀಕ್ವೆಲ್ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ನಿರ್ಮಾಪಕ
Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ