ಕಾಂಗ್ರೆಸ್‌ ಮೇಲೆ ‘ಎಮರ್ಜೆನ್ಸಿ’ ಬಾಣ

ತುರ್ತು ಪರಿಸ್ಥಿತಿ ವಿರೋಧಿಸಿ ಹೋರಾಡಿದವರನ್ನು ನೆನೆದ ಪ್ರಧಾನಿ ಮೋದಿ

Team Udayavani, Jun 26, 2020, 6:14 AM IST

ಕಾಂಗ್ರೆಸ್‌ ಮೇಲೆ ‘ಎಮರ್ಜೆನ್ಸಿ’ ಬಾಣ

ಹೊಸದಿಲ್ಲಿ: 45 ವರ್ಷಗಳ ಹಿಂದೆ, 1975ರ ತುರ್ತು ಪರಿಸ್ಥಿತಿಯ ಸಂದಿಗ್ಧತೆಯ ಕಾಲದಲ್ಲಿ ಅದರ ವಿರುದ್ಧ ಹೋರಾಡಿ ಪ್ರಜಾಪ್ರಭುತ್ವದ ಮಹತ್ವವನ್ನು ಎತ್ತಿ ಹಿಡಿದವರಿಗೆ ಪ್ರಧಾನಿ ನರೇಂದ್ರ ಮೋದಿ ಕೃತಜ್ಞತೆ ಸಮರ್ಪಿಸಿದ್ದಾರೆ.

ಟ್ವಿಟರ್‌ನಲ್ಲಿ ಅದನ್ನು ಜ್ಞಾಪಿಸಿಕೊಂಡಿರುವ ಮೋದಿ, ‘ಇಂದಿಗೆ ಸರಿಯಾಗಿ 45 ವರ್ಷಗಳ ಹಿಂದೆ ದೇಶದಲ್ಲಿ ತುರ್ತು ಪರಿಸ್ಥಿತಿ ಹೇರಲಾಗಿತ್ತು.

ಈ ವೇಳೆ ಪ್ರಜಾಪ್ರಭುತ್ವ ಸ್ಥಾಪನೆಗೆ ಹಲವರು ಹೋರಾಡಿದ್ದರು. ಅವರ ತ್ಯಾಗವನ್ನು ದೇಶ ಎಂದಿಗೂ ಮರೆಯುವುದಿಲ್ಲ’ ಎಂದಿದ್ದಾರೆ.

ಕಳೆದ ವರ್ಷ ಇದೇ ದಿನ ಅವರು, ತಮ್ಮ ಮನ್‌ ಕೀ ಬಾತ್‌ನಲ್ಲಿ ತುರ್ತು ಪರಿಸ್ಥಿತಿಯ ಕುರಿತು ಮಾಡಿದ್ದ ಮನ್‌ ಕೀ ಬಾತ್‌ ಭಾಷಣದ ತುಣುಕನ್ನೂ ಟ್ವಿಟರ್‌ನಲ್ಲಿ ಪೋಸ್ಟ್‌ ಮಾಡಿದ್ದನ್ನು ಇಲ್ಲಿ ಸ್ಮರಿಸಬಹುದು.

1975ರ ಜೂ. 25ರಂದು ಅಂದು ಕೇಂದ್ರದಲ್ಲಿ ಅಧಿಕಾರದಲ್ಲಿದ್ದ ಇಂದಿರಾ ಗಾಂಧಿಯವರ ಸರಕಾರ ದೇಶಾದ್ಯಂತ ತುರ್ತು ಪರಿಸ್ಥಿತಿ ಜಾರಿಗೊಳಿಸಿತ್ತು. 1977ರ ಮಾ. 21ರವರೆಗೆ ಅದು ಚಾಲ್ತಿಯಲ್ಲಿತ್ತು.

ಮತ್ತೊಂದೆಡೆ, ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ. ನಡ್ಡಾ ಕೂಡ ಟ್ವೀಟ್‌ ಮಾಡಿ, ಚಿತ್ರಹಿಂಸೆಗಳನ್ನು ಸಹಿಸಿಕೊಂಡೂ ತುರ್ತು ಪರಿಸ್ಥಿತಿಯನ್ನು ತೀವ್ರವಾಗಿ ವಿರೋಧಿಸಿದ ಎಲ್ಲ ನಾಯಕರಿಗೆ ಭಾರತ ಗೌರವ ಸಲ್ಲಿಸುತ್ತದೆ. ತುರ್ತು ಪರಿಸ್ಥಿತಿಯನ್ನು ದೇಶದ ಕರಾಳ ಅಧ್ಯಾಯ’ ಎಂದು ವ್ಯಾಖ್ಯಾನಿಸಿದ್ದಾರೆ.

ಅಧಿಕಾರದ ಆಸೆಯಿಂದ ಇಡೀ ದೇಶ ಜೈಲಿಗೆ: ಶಾ ವಾಗ್ಧಾಳಿ
ಮೋದಿಯವರ ಟೀಕಾಸ್ತ್ರಕ್ಕೆ ಕೈ ಜೋಡಿಸಿರುವ ಕೇಂದ್ರ ಗೃಹ ಸಚಿವ ಅಮಿತ್‌ ಶಾ, ’45 ವರ್ಷಗಳ ಹಿಂದೆ ಇದೇ ದಿನ ಒಂದು ಕುಟುಂಬ ಅಧಿಕಾರದ ದುರಾಸೆಯಿಂದ ಇಡೀ ದೇಶವನ್ನು ಜೈಲಿಗೆ ತಳ್ಳಿತು. ಕಾಂಗ್ರೆಸ್‌ ಅಂದು ದೇಶವನ್ನು ರಾತ್ರೋ ರಾತ್ರಿ ಸೆರೆಮನೆಯಾಗಿ ಪರಿವರ್ತಿಸಿತ್ತು. ಪತ್ರಿಕೆ, ನ್ಯಾಯಾಲಯ, ವಾಕ್‌ ಸ್ವಾತಂತ್ರ್ಯಗಳನ್ನು ಹತ್ತಿಕ್ಕಲಾಯಿತು. ಬಡವರು, ದೀನ ದಲಿತರ ಮೇಲೆ ದೌರ್ಜನ್ಯಗಳು ನಡೆದವು’ ಎಂದಿದ್ದಾರೆ.

‘ಲಕ್ಷಾಂತರ ಜನರ ಪ್ರಯತ್ನ, ಹೋರಾಟಗಳಿಂದಾಗಿ ತುರ್ತುಪರಿಸ್ಥಿತಿಯನ್ನು ತೆಗೆಯಲಾಯಿತು. ಕಾಂಗ್ರೆಸ್‌ನ ಅನುಪಸ್ಥಿತಿಯಲ್ಲಿ ಭಾರತದಲ್ಲಿ ಮತ್ತೆ ಪ್ರಜಾಪ್ರಭುತ್ವವನ್ನು ಸ್ಥಾಪಿಸಲಾಯಿತು. ತುರ್ತು ಪರಿಸ್ಥಿತಿ ವೇಳೆ ಒಂದು ಕುಟುಂಬದ ಹಿತಾಸಕ್ತಿಯು ಪಕ್ಷ ಮತ್ತು ರಾಷ್ಟ್ರದ ಹಿತಾಸಕ್ತಿಗಳ ಮೇಲೆ ಸವಾರಿ ನಡೆಸಿತ್ತು. 45 ವರ್ಷಗಳ ನಂತರವೂ ಕಾಂಗ್ರೆಸ್‌ ತುರ್ತು ಪರಿಸ್ಥಿತಿಯ ಮನೋಭಾವದಲ್ಲಿಯೇ ಉಳಿದುಕೊಂಡಿದೆ” ಎಂದು ಟೀಕಿಸಿದ್ದಾರೆ.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaa

Ex-IPS officer ಸಂಜೀವ್ ಭಟ್‌ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

police crime

Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.