![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
Note Ban ಠೇವಣಿ: ಉತ್ತರ ನೀಡದ 11 ಲಕ್ಷ ಜನರಿಗೆ ಐಟಿ ನೊಟೀಸ್
Team Udayavani, Feb 17, 2017, 3:01 PM IST
![Blackmoney-700.jpg](https://www.udayavani.com/wp-content/uploads/2017/02/17/Blackmoney-700-620x354.jpg)
ಹೊಸದಿಲ್ಲಿ : ನೋಟು ನಿಷೇಧದ ಬಳಿಕ ಸುಮಾರು 18 ಲಕ್ಷ ಜನರು ಮಾಡಿರುವ 4.5 ಲಕ್ಷ ಕೋಟಿ ರೂ.ಗಳಿಗೂ ಅಧಿಕದ ಅನುಮಾನಾಸ್ಪದ ಬ್ಯಾಂಕ್ ಖಾತೆ ಜಮಾ ಮೊತ್ತವನ್ನು ಆದಾಯ ತೆರಿಗೆ ಇಲಾಖಾಧಿಕಾರಿಗಳು ಪರಿಶೀಲಿಸುತ್ತಿದ್ದು, ತಾವು ಈ ವ್ಯಕ್ತಿಗಳಿಗೆ ಕಳುಹಿಸಿರುವ ಎಸ್ಎಂಎಸ್ ಅಥವಾ ಇ-ಮೇಲ್ಗಳಿಗೆ ಫೆ.15ರ ಗಡುವಿನೊಳಗೆ ಉತ್ತರಿಸದ ಸುಮಾರು 11 ಲಕ್ಷ ಜನರಿಗೆ ಈಗ ಶಾಸನೇತರ ನೊಟೀಸ್ ಜಾರಿ ಮಾಡುತ್ತಿದ್ದಾರೆ.
ಶಂಕಾಸ್ಪದ ಬ್ಯಾಂಕ್ ಠೇವಣಿ ಮಾಡಿರುವ 18 ಲಕ್ಷ ಮಂದಿಯ ಪೈಕಿ ಸುಮಾರು 7 ಲಕ್ಷ ಮಂದಿ ತಾವು ಮಾಡಿರುವ ಬ್ಯಾಂಕ್ ಖಾತೆ ಜಮೆಯು ಸರಿಯಾಗಿಯೇ ಇದೆ ಎಂದು ಉತ್ತರಿಸಿದ್ದಾರೆ. ಯಾವುದೇ ರೀತಿಯ ವಿವರಣಾತ್ಮಕ ಉತ್ತರ ನೀಡದ ಉಳಿದ 11 ಲಕ್ಷ ಜನರಿಗೆ ಈಗ ಆದಾಯ ತೆರಿಗೆ ಇಲಾಖಾಧಿಕಾರಿಗಳು ‘non-statutory’ letters ಜಾರಿ ಮಾಡುತ್ತಿದ್ದಾರೆ.
ಕ್ಲೀನ್ ಮನಿ ಆಪರೇಶನ್ ಅಡಿ, ಇ-ಫೈಲಿಂಗ್ ಪೋರ್ಟಲ್ನಲ್ಲಿ ಈ ವ್ಯಕ್ತಿಗಳು ಈಗಿನ್ನು ತಮ್ಮ ಬ್ಯಾಂಕ್ ಖಾತೆ ಜಮೆ ಮೊತ್ತದ ಮೂಲವನ್ನು ವಿವರಿಸಬೇಕಾಗುತ್ತದೆ.
ನೋಟು ನಿಷೇಧದ ಬಳಿಕದಲ್ಲಿ ಶಂಕಾಸ್ಪದ ಮೊತ್ತವನ್ನು ತಮ್ಮ ಬ್ಯಾಂಕ್ ಖಾತೆಗೆ ಜಮೆ ಮಾಡಿರುವ 18 ಲಕ್ಷ ಮಂದಿಯ ಪೈಕಿ ಸುಮಾರು ಐದು ಲಕ್ಷ ಮಂದಿ ಐಟಿ ಇಲಾಖೆಗೆ ಎಸ್ಎಂಎಸ್ ಅಥವಾ ಇ-ಮೇಲ್ ಮೂಲಕ ಉತ್ತರಿಸಿದ್ದಾರೆ; ಆದರೆ ಇವರು ಇ-ಫೈಲಿಂಗ್ ಪೋರ್ಟಲ್ನಲ್ಲಿ ನೋಂದಾವಣೆ ಮಾಡಿಕೊಂಡವರಾಗಿರುವುದಿಲ್ಲ ಎಂದು ಇಲಾಖೆ ತಿಳಿಸಿದೆ.
ಟಾಪ್ ನ್ಯೂಸ್
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![modi (4)](https://www.udayavani.com/wp-content/uploads/2024/07/modi-4-4-150x92.jpg)
NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!
![Exam](https://www.udayavani.com/wp-content/uploads/2024/07/Exam-8-150x84.jpg)
NEET ಟಾಪರ್ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!
![1-assam](https://www.udayavani.com/wp-content/uploads/2024/07/1-assam-150x84.jpg)
UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್?
![1-kanwar-msid](https://www.udayavani.com/wp-content/uploads/2024/07/1-kanwar-msid-150x84.jpg)
Uttara Khand; ಕನ್ವರ್ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!
![court](https://www.udayavani.com/wp-content/uploads/2024/07/court-7-150x83.jpg)
Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!
MUST WATCH
ಹೊಸ ಸೇರ್ಪಡೆ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
![1-aaasdeqweqw](https://www.udayavani.com/wp-content/uploads/2024/07/1-aaasdeqweqw-150x100.jpg)
India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್ ಯುಗಾರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.