ಶಶಿಕಲಾ ಮನೆಯಲ್ಲಿ ಭರಪೂರ ಸಂಪತ್ತು!


Team Udayavani, Nov 12, 2017, 6:00 AM IST

V.-K.-Sasikala-800.jpg

ಚೆನ್ನೈ: ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿರುವ ವಿ. ಶಶಿಕಲಾಗೆ ಬೇನಾಮಿ ಕಾಯ್ದೆಯ ಅಂಕುಶ ಬೀಳುವುದು ಖಾತ್ರಿಯಾಗಿದೆ.

ಕಳೆದ ಮೂರು ದಿನಗಳಿಂದ ಬೆಂಗಳೂರು ಸೇರಿದಂತೆ ಶಶಿಕಲಾ ಮತ್ತು ಅವರ ಸಂಬಂಧಿಗಳ 40 ಸ್ಥಳಗಳಲ್ಲಿನ 187 ನಿವಾಸ, ಕಚೇರಿ, ತೋಟದ ಮನೆಗಳ ಮೇಲೆ ಆದಾಯ ತೆರಿಗೆ ಇಲಾಖೆಯ 1800 ಅಧಿಕಾರಿಗಳು ದಾಳಿ ನಡೆಸಿದ್ದು, ಈ ವೇಳೆ ಭಾರಿ ಮೊತ್ತದ ಆಸ್ತಿ ಪಾಸ್ತಿ ಪತ್ತೆಯಾಗಿದೆ.ಐಟಿ ಅಧಿಕಾರಿಗಳ ಈ ಬೃಹತ್‌ ದಾಳಿಯಲ್ಲಿ ಭಾರಿ ಪ್ರಮಾಣದ ಆಸ್ತಿ ಪಾಸ್ತಿ ಪತ್ತೆಯಾಗಿದೆ ಎಂದು ಐಟಿ ಮೂಲಗಳು ಹೇಳಿವೆ. 

ಅಂದರೆ, ಎಂಟು ಕೆಜಿ ಬಂಗಾರ, ಕೋಟ್ಯಂತರ ರೂ. ಬೆಲೆ ಬಾಳುವ ವಜ್ರ, ಬೇನಾಮಿ ಆಸ್ತಿ ದಾಖಲೆಗಳು, 20 ನಕಲಿ ಕಂಪನಿಗಳು, ಐದು ಕೋಟಿ ನಗದು ಸೇರಿ ಒಟ್ಟು 140 ಕೋಟಿ ಮೌಲ್ಯದ ಆಸ್ತಿ ಪತ್ತೆಯಾಗಿದೆ. 20 ನಕಲಿ ಕಂಪನಿಗಳನ್ನು ಶಶಿಕಲಾ ಅವರು ಆಸ್ತಿ ಖರೀದಿ ಮಾಡುವ ಸಲುವಾಗಿಯೇ ಸೃಷ್ಟಿಸಿದ್ದರು ಎಂದು ಐಟಿ ಮೂಲಗಳು ಹೇಳಿವೆ.

ಮೂರು ದಿನಗಳ ನಂತರ ಶನಿವಾರ ಸಂಜೆ ಕೆಲವು ಕಡೆಗಳಲ್ಲಿ ಐಟಿ ದಾಳಿಯನ್ನು ಸ್ಥಗಿತಗೊಳಿಸಲಾಗಿದೆ. ಆದರೆ ಇನ್ನೂ ಕೆಲವು ಕಡೆಗಳಲ್ಲಿ ಮುಂದುವರಿಸಲಾಗಿದೆ. ನಕಲಿ ಕಂಪನಿಗಳ ಮೂಲಕ 100 ಕೋಟಿ ಮೌಲ್ಯದ ಆಸ್ತಿ ಖರೀದಿಸಲಾಗಿದ್ದು, ಈ ಬಗ್ಗೆ ಶಶಿಕಲಾ ಅವರ ಸಂಬಂಧಿಗಳನ್ನು ತೀವ್ರವಾಗಿ ವಿಚಾರಣೆಗೊಳಪಡಿಸಲಾಗಿದೆ. ಈ ಎಲ್ಲಾ ದಾಳಿಯನ್ನು ನೋಟು ಅಮಾನ್ಯ ಮಾಡಿದ ನಂತರ, ಈ ಕಂಪನಿಗಳ ಮೂಲಕ ನಡೆಸಲಾಗಿರುವ ಭಾರಿ ವಹಿವಾಟನ್ನು ಗಮನದಲ್ಲಿರಿಸಿಕೊಂಡು ನಡೆಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಈ ದಾಳಿಯಲ್ಲಿ ಒಟ್ಟು 1800 ಅಧಿಕಾರಿಗಳು ಭಾಗಿಯಾಗಿದ್ದಾರೆ. 40 ಸ್ಥಳಗಳಲ್ಲಿನ 187 ನಿವಾಸ, ಕಚೇರಿ, ತೋಟದ ಮನೆಗಳ ಮೇಲೆ ದಾಳಿ ನಡೆಸಲಾಗಿದೆ. ಈ ವೇಳೆ ಶಶಿಕಲಾ ಪತಿ ನಟರಾಜನ್‌, ದಿ.ಜಯಲಲಿತಾ ಅವರಿಗೆ ಸೇರಿದ ಕೊಡನಾಡ್‌ ಟೀ ಎಸ್ಟೇಟ್‌, ಜಾಜ್‌ ಸಿನಿಮಾಸ್‌, ಮಿದಾಸ್‌ ಡಿಸ್ಟಿಲರೀಸ್‌,  ಶಾರದಾ ಪೇಪರ್‌ ಮತ್ತು ಬೋರ್ಡ್‌, ಸೆಂಥಿಲ್‌ ಗ್ರೂಪ್‌ ಆಫ್ ಕಂಪನಿಗಳು, ನೀಲಗಿರಿ ಫ‌ನೀìಚರ್ಸ್‌, ಜಯಾ ಟಿವಿ, ನಮಾಡು ಎಂಜಿಆರ್‌ ಸೇರಿ ಕೆಲವೆಡೆ ದಾಳಿ ನಡೆಸಲಾಗಿದೆ.

ಐಟಿ ದಾಳಿ ಬಗ್ಗೆ ಮಾತನಾಡಿರುವ ಎಐಎಡಿಎಂಕೆ ಶಶಿಕಲಾ ಬಣದ ದಿನಕರನ್‌ ಅವರು, ಇದೊಂದು ರಾಜಕೀಯ ದುರುದ್ದೇಶ ಹೊಂದಿರುವ ದಾಳಿ ಎಂದು ಆರೋಪಿಸಿದ್ದಾರೆ.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.