ದೇಶದ ರಕ್ಷಣೆಗಾಗಿ ಹೋರಾಟ, ಶತ್ರು ಸಂಹಾರ; ಓದಿ ಸೇನೆಯ ಸ್ಫೂರ್ತಿ ಸಂದೇಶ
Team Udayavani, Aug 13, 2018, 3:40 PM IST
ಹೊಸದಿಲ್ಲಿ : “ನಿಮ್ಮ ಜತೆ ನಾನು ಹುಟ್ಟಿದವನಲ್ಲ, ನಿಮ್ಮ ಜತೆ ಬೆಳೆದವನೂ ಅಲ್ಲ; ಆದರೂ ನಾನು ನಿಮಗಾಗಿ, ನಿಮ್ಮ ರಕ್ಷಣೆಗಾಗಿ ಹೋರಾಡುತ್ತೇನೆ, ಶತ್ರುವನ್ನು ಸಂಹರಿಸುತ್ತೇನೆ; ನಿಮ್ಮ ಎದುರೇ ಪ್ರಾಣ ಕಳೆದುಕೊಳ್ಳುತ್ತೇನೆ’.
ದೇಶದ 72ನೇ ಸ್ವಾತಂತ್ರ್ಯ ದಿನಾಚರಣೆಗೆ ಮುನ್ನ ಭಾರತೀಯ ಸೇನಾ ಪಡೆ ಸಾಮಾಜಿಕ ಮಾಧ್ಯಮಗಳಲ್ಲಿ ಈ ಪ್ರೇರಣಾತ್ಮಕ ಸಂದೇಶವನ್ನು ಹಂಚಿಕೊಂಡಿರುವುದು ಎಲ್ಲ ದೇಶಪ್ರೇಮಿಗಳ ಮನಸ್ಸನ್ನು ಕರಗಿಸಿದೆ. ಸೇನೆ ನಮಗಾಗಿ, ನಮ್ಮ ಭದ್ರತೆಗಾಗಿ, ನಮ್ಮ ರಕ್ಷಣೆಗಾಗಿ ಹೋರಾಡುತ್ತಿದೆ, ನಮಗಾಗಿ ಪ್ರಾಣಾರ್ಪಣೆ ಮಾಡುತ್ತಿದೆ ಎಂಬ ಈ ಸಂದೇಶ ಜನರಲ್ಲಿ ಸೇನೆಯ ಬಗ್ಗೆ ಅಪಾರವಾದ ಗೌರವವನ್ನು ಬಡಿದೆಬ್ಬಿಸಿದೆ.
ಸೇನೆಯ ಸಾರ್ವಜನಿಕ ಮಾಹಿತಿಯ ಹೆಚ್ಚುವರಿ ಮಹಾ ನಿರ್ದೇಶಕರು ಸೇನೆಯ ಈ ಪ್ರೇರಣಾತ್ಮಕ ಸಂದೇಶವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಜನರೊಂದಿಗೆ ಹಂಚಿಕೊಂಡಿದ್ದಾರೆ.
ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ಉಗ್ರರು ದಿಲ್ಲಿ ಸಹಿತ ಹಲವೆಡೆಗಳಲ್ಲಿ ಭಯೋತ್ಪಾದಕ ದಾಳಿ ನಡೆಸುವ ಯೋಜನೆ ಹೊಂದಿರುವುದಾಗಿ ಗುಪ್ತಚರ ದಳ ಸೇನೆಗೆ ಮಾಹಿತಿ ನೀಡಿರುವ ಹಿನ್ನೆಲೆಯಲ್ಲಿ ಈ ಪ್ರೇರಣಾತ್ಮಕ ಸಂದೇಶವನ್ನು ಸೇನೆ ಹಂಚಿಕೊಂಡಿದೆ.
ದಿಲ್ಲಿಯ ಐತಿಹಾಸಿಕ ಕೆಂಪು ಕೋಟೆಯಲ್ಲಿ ನಡೆಯುವ 72ನೇ ಸ್ವಾತಂತ್ರ್ಯ ದಿನಾಚರಣೆ ಸಂಬಂಧವಾಗಿ ಇಂದು ಸೋಮವಾರದಿಂದಲೇ ರಾಷ್ಟ್ರ ರಾಜಧಾನಿಯಲ್ಲಿ ಭಾರೀ ಭದ್ರತೆ, ಬಂದೋಬಸ್ತ್ ಏರ್ಪಡಿಸಲಾಗಿದ್ದು ವಿಶೇಷ ವಾಹನ ಸಂಚಾರ ಮತ್ತು ನಿರ್ಬಂಧಗಳನ್ನು ಅಣಿಗೊಳಿಸಲಾಗಿದೆ.
ದಿಲ್ಲಿ ಪೊಲೀಸರು, ಅನೇಕ ಕಡೆಗಳಲ್ಲಿ, ಮುಖ್ಯವಾಗಿ ಬಸ್ ನಿಲ್ದಾಣ, ಮಾರುಕಟ್ಟೆ ಮತ್ತಿತರ ಪ್ರಮುಖ ತಾಣಗಳಲ್ಲಿ, ಹೆಚ್ಚುವರಿ ಸಿಸಿಟಿವಿ ಗಳನ್ನು ಹಾಕಿಸಿದ್ದಾರೆ;
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
MUST WATCH
ಹೊಸ ಸೇರ್ಪಡೆ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ