10 BJP ಶಾಸಕರನ್ನು ಕಾಂಗ್ರೆಸ್ಗೆ ತರುತ್ತೇನೆ! :ರಮೇಶ್ ಜಾರಕಿಹೊಳಿ
Team Udayavani, Aug 7, 2018, 4:46 PM IST
ಹೊಸದಿಲ್ಲಿ: ‘ನಾನು ಹುಟ್ಟು ಕಾಂಗ್ರೆಸಿಗ, ಬಿಜೆಪಿಗೆ ಹೋಗುವ ಪ್ರಶ್ನೆ ಉದ್ಭವಿಸುವುದಿಲ್ಲ’ ಎಂದು ಪೌರಾಡಳಿತ ಸಚಿವ ರಮೇಶ್ ಜಾರಕಿಹೊಳಿ ಹೇಳಿಕೆ ನೀಡಿದ್ದಾರೆ.
ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ನಾನು ಯಡಿಯೂರಪ್ಪ ಅವರ ಜೊತೆ ದೆಹಲಿಗೆ ಬಂದಿಲ್ಲ. ನಮ್ಮ ಪಕ್ಷದ ವರಿಷ್ಠರ ಭೇಟಿಗಾಗಿ ಬಂದಿದ್ದೆ ಎಂದರು.
ನನಗೆ ಬಿಜೆಪಿಯ 10 ಜನ ಶಾಸಕರನ್ನು ಕಾಂಗ್ರೆಸ್ಗೆ ಕರೆ ತರುವ ಶಕ್ತಿ ದೇವರು ಕೊಟ್ಟಿದ್ದಾನೆ. ಆ ಕೆಲಸ ಮಾಡುತ್ತೇನೆ ಎಂದು ಬಾಂಬ್ ಸಿಡಿಸಿದರು.
ನಾನು ವರಿಷ್ಠರನ್ನು ಭೇಟಿಯಾಗಲು ಬಂದಿದ್ದು, ನಮ್ಮ ಸಮುದಾಯದ ಇಬ್ಬರಿಗೆ ಸಚಿವ ಸ್ಥಾನ ನೀಡಲು ಮನವಿ ಮಾಡಿದ್ದೇನೆ. ಲೋಕ ಸಭಾ ಚುನಾವಣೆಯ ಕುರಿತೂ ಚರ್ಚೆ ನಡೆಸಿದ್ದೇವೆ ಎಂದರು.
ಪೌರಾಡಳಿತ ಸಚಿವ ರಮೇಶ್ ಜಾರಕಿಹೊಳಿ ನೇತೃತ್ವದಲ್ಲಿ ಎಂಟು ಶಾಸಕರು ಸೋಮವಾರ ದೆಹಲಿಯಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.
ಹೈದರಾಬಾದ್ ಕರ್ನಾಟಕ ಭಾಗದಲ್ಲಿ ಎಸ್ಟಿ ಸಮುದಾಯಕ್ಕೆ ಮಂತ್ರಿ ಸ್ಥಾನ ಹಾಗೂ ಹಿರಿಯ ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡುವಂತೆ ಈ ಶಾಸಕರು ಆಗ್ರಹಿಸಿದ್ದಾರೆ.
ಮಸ್ಕಿ ಶಾಸಕ ಪ್ರತಾಪ್ಗೌಡ ಪಾಟೀಲ್, ಬಳ್ಳಾರಿ ಗ್ರಾಮಾಂತರದ ನಾಗೇಂದ್ರ, ಬಸವಕಲ್ಯಾಣದ ಬಿ. ನಾರಾಯಣರಾವ್, ಬೀದರ್ನ ರಹೀಂ ಖಾನ್, ಅಥಣಿಯ ಮಹೇಶ್, ಲಿಂಗಸಗೂರು ಶಾಸಕ ದುರ್ಗಪ್ಪ ಹೂಲಗೇರೆ ಹಾಗೂ ವಿಧಾನ ಪರಿಷತ್ ಸದಸ್ಯ ವಿವೇಕ್ ರಾವ್ ಪಾಟೀಲ್ ಸಂಪುಟ ವಿಸ್ತರಣೆಯಲ್ಲಿ ತಮಗೆ ಸ್ಥಾನ ಕಲ್ಪಿಸುವಂತೆ ಹೈ ಕಮಾಂಡ್ ಮೇಲೆ ಒತ್ತಡ ಹೇರಿದ್ದಾರೆ ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
MUST WATCH
ಹೊಸ ಸೇರ್ಪಡೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ
ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ
Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ