ಬ್ಯಾಂಕಾಕ್‌ ನಿಂದ ಜಮ್‌ ನಗರ್‌ ಗೆ 3 ಆಮ್ಲಜನಕ ಟ್ಯಾಂಕರ್ ಗಳನ್ನು ತಲುಪಿಸಿದ ಐಎಎಫ್


Team Udayavani, Apr 28, 2021, 4:52 PM IST

IAF airlifts 3 oxygen tankers from Bangkok to Jamnagar

ನವ ದೆಹಲಿ : ಕೋವಿಡ್ ನಿಂದ ತತ್ತರಿಸಿ ಹೋಗಿರುವ ಭಾರತಕ್ಕೆ ವಿದೇಶಗಳು ನೆರವಿನ ಹಸ್ತ ಚಾಚುತ್ತಿವೆ. ಈಗ ಅದಕ್ಕೆ ಮತ್ತೊಂದು ಸೇರ್ಪಡೆ ಎಂಬಂತೆ, ಭಾರತೀಯ ವಾಯುಪಡೆ (ಐ ಎ ಎಫ್) ಮೂರು ಆಮ್ಲಜನಕ ಟ್ಯಾಂಕರ್‌ ಗಳನ್ನು ಥೈಲ್ಯಾಂಡ್‌ ನ ಬ್ಯಾಂಕಾಕ್‌ ನಿಂದ ಗುಜರಾತ್‌ ನ ಜಮ್‌ ನಗರ್‌ ಗೆ ಬುಧವಾರ(ಏ. 28) ತಲುಪಿಸಿದೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

ಇದಲ್ಲದೆ, ಸಿಂಗಾಪುರ್ ವಾಯುಪಡೆಯ ಎರಡು ಸಿ -130 ವಿಮಾನಗಳು ಒಟ್ಟು 256 ಆಮ್ಲಜನಕ ಸಿಲಿಂಡರ್‌ ಗಳನ್ನು ಪಶ್ಚಿಮ ಬಂಗಾಳದ ಪನಗರ್ ವಾಯುನೆಲೆಗೆ ತಲುಪಿಸಿವೆ ಎಂದು ಅವರು ಹೇಳಿದ್ದಾರೆ.

ಓದಿ : ಕೋವಿಡ್ 19 ವಿರುದ್ಧ ಹೋರಾಟ; ಭಾರತಕ್ಕೆ 10 ಮಿಲಿಯನ್ ಡಾಲರ್ ನೆರವು ಘೋಷಿಸಿದ ಕೆನಡಾ

ಮೆಡಿಕಲ್ ಆಕ್ಸಿಜನ್ ಮತ್ತು ಹಾಸಿಗೆಗಳ ಕೊರತೆಯಿಂದಾಗಿ ದೇಶದ ಹಲವಾರು ರಾಜ್ಯಗಳ ಆಸ್ಪತ್ರೆಗಳು ತತ್ತರಿಸುತ್ತಿರುವುದರಿಂದ ಭಾರತವು ಕೋವಿಡ್  ಸೋಂಕಿನ ಎರಡನೇ  ಅಲೆಯೊಂದಿಗೆ ಹೋರಾಡುತ್ತಿದೆ.

ಮಂಗಳವಾರ, ಐಎಎಫ್ ದುಬೈ ಮತ್ತು ಸಿಂಗಾಪುರದಿಂದ ಒಂಬತ್ತು ಕ್ರಯೋಜೆನಿಕ್ ಆಮ್ಲಜನಕ ಟ್ಯಾಂಕರ್‌ ಗಳನ್ನು ವಿಮಾನದಲ್ಲಿ ಪನಗರ್ ಗೆ ತಲುಪಿತ್ತು.

ಆಕ್ಸಿಜನ್ ಟ್ಯಾಂಕರ್‌ ಗಳನ್ನು ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ಸಾಗಿಸುವಲ್ಲಿ  ಐಎಎಫ್ ಕಾರ್ಯ ನಿರ್ವಹಿಸುತ್ತಿದೆ. ಆಗ್ರಾ, ಹಿಂಡನ್, ಭೋಪಾಲ್ ಮತ್ತು ಚಂಡೀಗಡದಿಂದ ತಲಾ ಒಂದು ಹಾಗೂ ರಾಂಚಿಗೆ ನಾಲ್ಕು ಆಮ್ಲಜನಕ ಟ್ಯಾಂಕರ್‌ ಗಳನ್ನು ತಲುಪಿಸಲು ಅದು ತನ್ನ ಸಿ -17 ವಿಮಾನವನ್ನು ಬಳಸಿದೆ ಎಂದು ಅಧಿಕಾರಿಗಳು ತಿಳಿಸಿರುವುದಾಗಿ ಸುದ್ದಿ ಸಂಸ್ಥೆ  ಪಿಟಿಐ ವರದಿ ಮಾಡಿದೆ.

ಇಂದೋರ್‌ನಿಂದ ರಾಯಪುರಕ್ಕೆ ಮತ್ತು ಭೋಪಾಲ್‌ನಿಂದ ಸೂರತ್‌ ಗೆ ತಲಾ ಎರಡು ಆಮ್ಲಜನಕ ಟ್ಯಾಂಕರ್‌ ಗಳನ್ನು ಸಾಗಿಸಲು ಮತ್ತೊಂದು ಸಿ -17 ವಿಮಾನವನ್ನು ಬಳಸಲಾಗಿದೆ. ಎರಡು ಆಮ್ಲಜನಕ ಟ್ಯಾಂಕರ್‌ ಗಳನ್ನು ಐ ಎ ಎಫ್ ಜೋಧಪುರದಿಂದ ಜಮ್ ನಗರಕ್ಕೆ ಸಾಗಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಓದಿ : ಪರೀಕ್ಷೆ  ನಡೆಯದೇ ಮುಂದಿನ ಪಾಠ! ರಾಣಿ ಚನ್ನಮ್ಮ ವಿವಿಯಿಂದ ಗೊಂದಲ !

ಇನ್ನು, ಮತ್ತೊಂದು ಸಿ -17 ವಿಮಾನವು ತಲಾ ನಾಲ್ಕು ಆಮ್ಲಜನಕ ಟ್ಯಾಂಕರ್‌ ಗಳನ್ನು ಇಂದೋರ್‌ ನಿಂದ ಜಮ್‌ ನಗರ್‌ ಗೆ ಮತ್ತು ಗ್ವಾಲಿಯರ್‌ ನಿಂದ ರಾಂಚಿಗೆ ತಲುಪಿಸಲಿದೆ.

ಮಂಗಳವಾರ, ಐ ಎ ಎಫ್ ಎಂಟು ಕ್ರಯೊಜೆನಿಕ್ ಆಮ್ಲಜನಕ ಸಿಲಿಂಡರ್ ಗಳನ್ನು ಹೈದರಾ ಬಾದ್‌ ನಿಂದ ಭುವನೇಶ್ವರಕ್ಕೆ, ಎರಡು ಭೋಪಾಲ್‌ ನಿಂದ ರಾಂಚಿಗೆ ಮತ್ತು ಎರಡು ಚಂಡೀಗಡದಿಂದ ರಾಂಚಿಗೆ ತಲುಪಿಸಲಾಗಿತ್ತು.

ದೇಶದಲ್ಲಿ ಆಕ್ಸಿಜನ್ ಕೊರತೆಯನ್ನು ನೀಗಿಸುವ ದೃಷ್ಟಿಯಿಂದ ಸಿ – 17 ವಿಮಾನಗಳು ಕಳೆದ ಕೆಲವು ದಿನಗಳಿಂದ ದೇಶದಲ್ಲಿನ ಆಕ್ಸಿಜನ್ ತುಂಬಿಸುವ ಕೇಂದ್ರಗಳಿಂದ ಅಗತ್ಯವಿರುವಲ್ಲಿಗೆ ಪೂರೈಸುತ್ತಿದೆ ಎಂದು ವರದಿಯಾಗಿದೆ.

ಭಾರತದಲ್ಲಿ ಕಳೆದ ಒಂದು ದಿನದಲ್ಲಿ 3,60,960 ಹೊಸ ಕೋವಿಡ್  ಪ್ರಕರಣಗಳ ದಾಖಲೆ ಕಂಡಿದ್ದು ಆ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 1,79,97,267 ಕ್ಕೆ ತಲುಪಿದೆ. ಇನ್ನು, ಕೋವಿಡ್ ಕಾರಣದಿಂದಾಗಿ ಸಾವನ್ನಪ್ಪಿದವರ ಸಂಖ್ಯೆ ಎರಡು ಲಕ್ಷ ದಾಟಿದ್ದು, 3,293 ಸಾವುಗಳು ಕಳೆದ ಇಪ್ಪತ್ತ ನಾಲ್ಕುಗಳಲ್ಲಿ ಸಂಭವಿಸಿವೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.

 ಓದಿ : ಲಾಕ್ ಡೌನ್ ನಿಯಮ ಕಟ್ಟು ನಿಟ್ಟಾಗಿ ಜಿಲ್ಲೆಯಾದ್ಯಂತ ಜಾರಿಯಾಗಬೇಕು : ಸಚಿವ ಬಿ.ಎ.ಬಸವರಾಜ

ಟಾಪ್ ನ್ಯೂಸ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

17

ಕೋರ್ಟ್‌ ಮೇಲೆ ಪಟ್ಟಭದ್ರರ ಒತ್ತಡ: ವಕೀಲರ ಪತ್ರ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.