ದಿಲ್ಲಿ ಮಾಳವೀಯ ನಗರ ಅಗ್ನಿ ದುರಂತ: ವಾಯುಪಡೆ ಹೆಲಿಕಾಪ್ಟರ್ ಬಳಕೆ
Team Udayavani, May 30, 2018, 10:57 AM IST
ಹೊಸದಿಲ್ಲಿ : ಇಲ್ಲಿನ ಮಾಳವೀಯ ನಗರದ ರಬ್ಬರ್ ಫ್ಯಾಕ್ಟರಿ ಗೋದಾಮಿನಲ್ಲಿ ನಿನ್ನೆ ಸಂಜೆ ಉಂಟಾಗಿದ್ದ ಭಾರೀ ಬೆಂಕಿಯನ್ನು ನಂದಿಸುವ ಕಾರ್ಯಾಚರಣೆಯಲ್ಲಿ ವಾಯು ಪಡೆಯ ಹೆಲಿಕಾಪ್ಟರ್ ಗಳನ್ನು ಬಳಸಿಕೊಳ್ಳಲಾಗುತ್ತಿದೆ. 12 ತಾಸುಗಳು ಕಳೆದರೂ ಬೆಂಕಿಯನ್ನು ನಂದಿಸಲು ಸಾಧ್ಯವಾಗಿಲ್ಲ ಎಂದು ವರದಿಗಳು ತಿಳಿಸಿವೆ. ಹಾಗಿದ್ದರೂ ಈ ತನಕ ಯಾವುದೇ ಸಾವು ನೋವು ಉಂಟಾದ ವರದಿಗಳು ಬಂದಿಲ್ಲ.
ಮಾಳವೀಯ ನಗರದ ರಬ್ಬರ್ ಫ್ಯಾಕ್ಟರಿಯಲ್ಲಿ ನಿನ್ನೆ ಮಂಗಳವಾರ ಸಂಜೆ 5 ಗಂಟೆಗೆ ಬೆಂಕಿ ಅವಘಡ ಸಂಭವಿಸಿತ್ತು. ಕೂಡಲೇ ಐದು ಅಗ್ನಿ ಶಾಮಕಗಳು ಸ್ಥಳಕ್ಕೆ ಧಾವಿಸಿ ಬಂದು ಕಾರ್ಯಾಚರಣೆಗೆ ಇಳಿದವು; ಆದರೆ ಬೆಂಕಿ ನಿಯಂತ್ರಣಕ್ಕೆ ಬಾರದ ಪ್ರಯುಕ್ತ ಇನ್ನೂ ಹತ್ತು ಅಗ್ನಿ ಶಾಮಕಗಳನ್ನು ಕಾರ್ಯಾಚರಣೆಗೆ ಬಳಸಿಕೊಳ್ಳಲಾಯಿತು. ಈಗ ಒಟ್ಟು 15 ಅಗ್ನಿ ಶಾಮಕಗಳು ಸ್ಥಳದಲ್ಲಿವೆ. ಇವುಗಳಿಗೆ ನೆರವಾಗಲು ವಾಯು ಪಡೆಯ ಎಂಐ 17 ಹೆಲಿಕಾಪ್ಟರ್ ಬಳಸಿಕೊಳ್ಳಲಾಗುತ್ತಿದೆ.
ಬೆಂಕಿಯನ್ನು ಪೂರ್ತಿಯಾಗಿ ನಂದಿಸಲು ಇನ್ನೂ ನಾಲ್ಕು ಐದು ತಾಸುಗಳು ಬೇಕಾಗಬಹುದೆಂದು ಅಗ್ನಿ ಶಾಮಕ ದಳದ ಅಧಿಕಾರಿಗಳು ತಿಳಿಸಿದ್ದಾರೆ.
ನಿನ್ನೆ ಸಂಜೆ ಬೆಂಕಿ ಅನಾಹುತ ಸಂಭವಿಸಿದಾಕ್ಷಣ ಈ ಪ್ರದೇಶದಲ್ಲಿನ ಪೊಲೀಸರ ಆಟೋ ಪಾಂಡ್ನಲ್ಲಿದ್ದ ಅನೇಕ ವಾಹನಗಳು ಬೆಂಕಿಗೆ ಆಹುತಿಯಾಗಿದ್ದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ