ಸೇನೆಗೆ ಸಲಾಂ, 21 ನಿಮಿಷಗಳ ಕಾರ್ಯಾಚರಣೆ; ಪಾಕ್ 300 ಉಗ್ರರು ಫಿನಿಶ್
Team Udayavani, Feb 26, 2019, 4:49 AM IST
ನವದೆಹಲಿ:ಜಮ್ಮು-ಕಾಶ್ಮೀರದ ಪುಲ್ವಾಮಾದಲ್ಲಿ ಜೈಶ್ ಎ ಮಹಮ್ಮದ್ ಉಗ್ರ ಆತ್ಮಾಹುತಿ ದಾಳಿ ನಡೆಸಿದ್ದ ಪರಿಣಾಮ 40 ಯೋಧರು ಹುತಾತ್ಮರಾಗಿದ್ದ ಘಟನೆಗೆ ಸಂಬಂಧಿಸಿದಂತೆ ಭಾರತ ಮಂಗಳವಾರ ಪಾಕ್ ಉಗ್ರರ ವಿರುದ್ಧ ಪ್ರತೀಕಾರ ತೆಗೆದುಕೊಂಡಿದೆ. ಮಂಗಳವಾರ ಭಾರತೀಯ ವಾಯುಪಡೆ ಯುದ್ಧ ವಿಮಾನಗಳು ಪಾಕ್ ಆಕ್ರಮಿತ ಕಾಶ್ಮೀರದೊಳಗೆ ನುಗ್ಗಿ ಉಗ್ರರನ್ನು ಸದೆಬಡಿದಿದ್ದಾರೆ.
ಇಂದು ಮುಂಜಾನೆ ಪಾಕಿಸ್ತಾನದ ಎಲ್ ಒಸಿಯೊಳಗೆ ಭಾರತೀಯ ಸೇನೆ ನುಗ್ಗಿ ಬರೋಬ್ಬರಿ ಒಂದು ಸಾವಿರ ಕೆಜಿ ತೂಕದ ಬಾಂಬ್ ದಾಳಿ ನಡೆಸಿದೆ. ಪ್ರಾಥಮಿಕ ಮಾಹಿತಿ ಪ್ರಕಾರ ಎಲ್ ಒಸಿ ಬಳಿ ಅಡಗಿದ್ದ 200-300 ಉಗ್ರರು ಬಲಿಯಾಗಿದ್ದಾರೆಂದು ತಿಳಿದು ಬಂದಿದೆ.
ಪಾಕಿಸ್ತಾನದ 24 ಕಿಲೋ ಮೀಟರ್ ಒಳಗೆ ನುಗ್ಗಿ ಈ ಏರ್ ಸರ್ಜಿಕಲ್ ಸ್ಟ್ರೈಕ್ ನಡೆಸಲಾಗಿದೆ. ಪುಲ್ವಾಮಾದಲ್ಲಿ 40 ಸಿಆರ್ ಪಿಎಫ್ ಯೋಧರನ್ನು ಉಗ್ರರು ಹತ್ಯೆಗೈದ ಎರಡು ವಾರಗಳ ಬಳಿಕ ಭಾರತ ದಾಳಿ ನಡೆಸುವ ಮೂಲಕ ಪ್ರತೀಕಾರ ತೀರಿಸಿಕೊಂಡಿದೆ.
ಪ್ರಧಾನಿ ಮೋದಿ ನೇತೃತ್ವದಲ್ಲಿ ತುರ್ತು ಸಭೆ:
ಭಾರತೀಯ ವಾಯುಪಡೆ ಎಲ್ ಒಸಿ ಒಳಗೆ ನುಗ್ಗಿ ಉಗ್ರರ ಮೇಲೆ ದಾಳಿ ನಡೆಸಿದ ಘಟನೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ತುರ್ತು ಸಭೆ ನಡೆಯುತ್ತಿದೆ. ಸಭೆಯಲ್ಲಿ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್, ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್, ಗೃಹ ಸಚಿವ ರಾಜನಾಥ್ ಸಿಂಗ್ ಭಾಗಿಯಾಗಿದ್ದಾರೆ.
ಕಾರವಾರದ ನೌಕಾನೆಲೆ ಕದಂಬದಲ್ಲಿ ಹೈಅಲರ್ಟ್ ಘೋಷಣೆ:
ಕಾರವಾರದಲ್ಲಿರುವ ಐಎನ್ ಎಸ್ ಕದಂಬ ನೌಕಾನೆಲೆಯಲ್ಲಿ ಹೈಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.
ಭಾರತದ ದಾಳಿ ಬಗ್ಗೆ ಚರ್ಚೆ ನಡೆಸುತ್ತಿರುವ ಪಾಕಿಸ್ತಾನ:
ಗಡಿನಿಯಂತ್ರಣ ರೇಖೆ ನುಗ್ಗಿ ಭಾರತೀಯ ವಾಯುಸೇನೆ ಪಾಕ್ ಉಗ್ರರ ಮೇಲೆ ದಾಳಿ ನಡೆಸಿದ ಘಟನೆ ಬೆನ್ನಲ್ಲೇ ಪಾಕಿಸ್ತಾನ ವಿದೇಶಾಂಗ ಸಚಿವ, ಅಧ್ಯಕ್ಷ ಇಮ್ರಾನ್ ಖಾನ್ ಅಧ್ಯಕ್ಷತೆಯಲ್ಲಿ ತುರ್ತು ಸಭೆ ನಡೆಯುತ್ತಿದೆ ಎಂದು ಮಾಧ್ಯಮದ ವರದಿ ತಿಳಿಸಿದೆ.
ಭಾರತೀಯ ಸೇನೆಯ ದಾಳಿಯ ಹೈಲೈಟ್ಸ್:
ಶತ್ರು ದೇಶವಾದ ಪಾಕಿಸ್ತಾನದ ರೆಡಾರ್ ಕಣ್ತಪ್ಪಿಸಿ ವಾಯುಪಡೆ ದಾಳಿ
ಕೇವಲ 21 ನಿಮಿಷಗಳ ಕಾರ್ಯಾಚರಣೆ
1000 ಕೆಜಿಯ 10 ಬಾಂಬ್ ಹಾಕಿ ಉಗ್ರರ ಅಡಗು ತಾಣಗಳ ಧ್ವಂಸಗೊಳಿಸಿದ ಸೇನೆ
ಚಾಕೋಟಿ ಉಗ್ರರ ಕ್ಯಾಂಪ್ ಮೇಲೆ ಮುಂಜಾನೆ ಈ ದಾಳಿ ನಡೆದಿದೆ.
ಬಾಲಾಕೋಟ್, ಮುಜಾಫರ್ ಬಾದ್ ಕ್ಯಾಂಪ್ ಮೇಲೆ 3.48ಕ್ಕೆ ದಾಳಿ ನಡೆಸಿತ್ತು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
MUST WATCH
ಹೊಸ ಸೇರ್ಪಡೆ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ