ಬಿಹಾರ : ಗುಂಡೆಸೆದು ಐಎಎಫ್ ಟೆಕ್ನೀಶಿಯನ್ ಹತ್ಯೆ
Team Udayavani, May 26, 2018, 11:57 AM IST
ಬಿಹಾರ್ ಷರೀಫ್, ಬಿಹಾರ : ಬಿಹಾರದ ನಲಂದಾ ಜಿಲ್ಲೆಯಲ್ಲಿ ಭಾರತೀಯ ವಾಯು ಪಡೆಯ ಟೆಕ್ನೀಶಿಯನ್ ಓರ್ವರನ್ನು ಮೂವರು ದುಷ್ಕರ್ಮಿಗಳು ಗುಂಡಿಕ್ಕಿ ಕೊಂದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಈ ಘಟನೆ ಬಸ್ವನ್ಬಿಗಾ ಗ್ರಾಮದಲ್ಲಿ ನಡೆದಿದೆ. ಐಎಎಫ್ ನೌಕರನಾಗಿರುವ 25ರ ಹರೆಯದ ಸುದಯ್ ಯಾದವ್ ಎಂಬಾತನನ್ನು ಕರ್ನಾಟಕದಲ್ಲಿ ಕರ್ತವ್ಯಕ್ಕೆ ನಿಯೋಜಿಸಲಾಗಿತ್ತು. ಆತ ರಜೆಯಲ್ಲಿ ತನ್ನ ಊರಿಗೆ ಬಂದಿದ್ದ.
ಆರವಿಂದ ಯಾದವ್ ಎಂಬಾತ ತನ್ನ ಮೂವರು ಸಹಚರರೊಂದಿಗೆ ಗುರುವಾರ ರಾತ್ರಿ ಸುದಯ್ನ ಮನೆಗೆ ತೆರಳಿ ಆತನ ಮೇಲೆ ಗುಂಡೆಸೆದು ತೀವ್ರ ಮಾರಣಾಂತಿಕ ದಾಳಿ ನಡೆಸಿದ. ಸುದಯ್ನನ್ನು ಒಡನೆಯೇ ಸದರ್ ಆಸ್ಪತ್ರೆಗೆ ಒಯ್ಯಲಾಯಿತು. ಅಲ್ಲಿಂದ ಆತನನ್ನು ಪಟ್ನಾ ಮೆಡಿಕಲ್ ಕಾಲೇಜ್ ಆಸ್ಪತ್ರೆಗೆ ಒಯ್ಯಲಾಯಿತು. ಅಲ್ಲಿಗೆ ತಲುಪುವ ಮೊದಲೇ ಆತ ಮಾರ್ಗ ಮಧ್ಯೆ ಕೊನೆಯುಸಿರೆಳೆ ಎಂದು ಪೊಲೀಸರು ತಿಳಿಸಿದ್ದಾರೆ.
ಪೊಲೀಸರು ಹಂತಕರಿಗಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ. ಈ ವರೆಗೆ ಯಾರನ್ನೂ ಬಂಧಿಸಲಾಗಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ