ಐಎಎಫ್ ಗೆ ದೇಶಿಯ ನಿರ್ಮಿತ ಎಲ್‌ಸಿಎಚ್‌ ಬಲ; ಇಂದು ಅಧಿಕೃತವಾಗಿ ಸೇನೆಗೆ ಸೇರ್ಪಡೆ

ಅತಿ ಎತ್ತರದ ಪ್ರದೇಶದಲ್ಲಿ ಶತ್ರು ಬಂಕರ್‌ಗಳನ್ನು ಧ್ವಂಸಗೊಳಿಸುವ ಸಾಮರ್ಥ್ಯ

Team Udayavani, Oct 3, 2022, 7:15 AM IST

ಐಎಎಫ್ ಗೆ ದೇಶಿಯ ನಿರ್ಮಿತ ಎಲ್‌ಸಿಎಚ್‌ ಬಲ; ಇಂದು ಅಧಿಕೃತವಾಗಿ ಸೇನೆಗೆ ಸೇರ್ಪಡೆ

ನವದೆಹಲಿ: ಭಾರತೀಯ ವಾಯುಪಡೆಯ ಯುದ್ಧ ಸಾಮರ್ಥ್ಯವನ್ನು ಹೆಚ್ಚಿಸುವ ನಿಟ್ಟಿನಲ್ಲಿ ದೇಶಿಯವಾಗಿ ಅಭಿವೃದ್ಧಿಪಡಿಸಿರುವ ಲಘು ಯುದ್ಧ ಹೆಲಿಕಾಪ್ಟರ್‌ಗಳು ಸೇರ್ಪಡೆಯಾಗುತ್ತಿವೆ.

ಸರ್ಕಾರಿ ಸ್ವಾಮ್ಯದ ಹಿಂದುಸ್ಥಾನ್‌ ಏರೋನಾಟಿಕ್ಸ್‌ ಲಿಮಿಟೆಡ್‌(ಎಚ್‌ಎಎಲ್‌) ತಯಾರಿಸಿರುವ ಲೈಟ್‌ ಕಾಂಬ್ಯಾಟ್‌ ಹೆಲಿಕಾಫ್ಟರ್‌ಗಳು(ಎಲ್‌ಸಿಎಚ್‌) ಸೋಮವಾರದಂದು ಭಾರತೀಯ ವಾಯುಪಡೆ(ಐಎಎಫ್)ಗೆ ಸೇರ್ಪಡೆಯಾಗಲಿವೆ.

ಅತಿ ಎತ್ತರದ ಪ್ರದೇಶದಲ್ಲಿ ಕಾರ್ಯಾಚರಣೆ:
ಎಲ್‌ಸಿಎಚ್‌ಗಳು ಅತಿ ಎತ್ತರದ ಪ್ರದೇಶದಲ್ಲಿ ನಿರಾಯಾಸವಾಗಿ ಕಾರ್ಯಾಚರಣೆ ನಡೆಸಬಲ್ಲವು. ಅವಳಿ ಎಂಜಿನ್‌ ಹೊಂದಿರುವ ಎಲ್‌ಸಿಎಚ್‌, 5.8 ಟನ್‌ ತೂಕವಿದೆ. 16,400 ಅಡಿ ಎತ್ತರದಲ್ಲಿ ಟೇಕ್‌ ಆಫ್ ಮತ್ತು ಲ್ಯಾಂಡಿಂಗ್‌ ಸಾಮರ್ಥ್ಯ ಹೊಂದಿರುವ ವಿಶ್ವದ ಏಕೈಕ ಯುದ್ಧ ಹೆಲಿಕಾಪ್ಟರ್‌ ಆಗಿದೆ.

ರಾತ್ರಿ ಸಮಯದಲ್ಲೂ ಯಶಸ್ವಿ ಕಾರ್ಯನಿರ್ವಹಣೆ:
ಒಣ ಮರುಭೂಮಿಯ ವಾತಾವರಣ ಸೇರಿದಂತೆ ಮೈನಸ್‌ 50 ಡಿಗ್ರಿ ಸೆಲ್ಸಿಯಸ್‌ನಿಂದ ಪ್ಲಸ್‌ 50 ಡಿಗ್ರಿ ಸೆಲ್ಸಿಯಸ್‌ ವರೆಗಿನ ಎಲ್ಲಾ ತಾಪಮಾನಗಳಲ್ಲಿ ಎಲ್‌ಸಿಎಚ್‌ ಕಾರ್ಯನಿರ್ವಹಿಸಬಲ್ಲದು. ಅಲ್ಲದೇ ರಾತ್ರಿ ಸಮಯದಲ್ಲೂ ಯಶಸ್ವಿಯಾಗಿ ಕಾರ್ಯನಿರ್ವಹಿಸಬಲ್ಲದು.

ಯುದ್ಧ ವಿಮಾನಗಳನ್ನು ಹೊಡೆದುರುಳಿಸುವ ಸಾಮರ್ಥಯ:
ಎಲ್‌ಸಿಎಚ್‌ಗಳಲ್ಲಿ ಗಾಳಿಯಿಂದ ಗಾಳಿಗೆ ಮತ್ತು ಗಾಳಿಯಿಂದ ನೆಲಕ್ಕೆ ದಾಳಿ ಮಾಡುವ ಕ್ಷಿಪಣಿಗಳನ್ನು ಅಳವಡಿಸಲಾಗಿದೆ. ಜತೆಗೆ 20 ಎಂಎಂ ಗನ್‌ ಮತ್ತು 70 ಎಂಎಂ ರಾಕೆಟ್‌ಗಳನ್ನು ಹೊಂದಿರಲಿದೆ. ಇದು ಶತ್ರುಗಳ ಯುದ್ಧ ವಿಮಾನಗಳನ್ನು ಹೊಡೆದುರುಳಿಸಬಲ್ಲದು. ಅಲ್ಲದೇ ಅತಿ ಎತ್ತರದ ಪ್ರದೇಶದಲ್ಲಿ ಶತ್ರು ಬಂಕರ್‌ಗಳನ್ನು ಧ್ವಂಸಗೊಳಿಸಬಲ್ಲದು. ಇದನ್ನು ಶತ್ರುಗಳ ವಿರುದ್ಧದ ಕಾರ್ಯಾಚರಣೆಯಲ್ಲಿ ಪೂರ್ಣಪ್ರಮಾಣದಲ್ಲಿ ಬಳಸಬಹುದಾಗಿದೆ.

3,887 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ:
ಜೋಧಪುರದಲ್ಲಿ ಸೋಮವಾರ ನಡೆಯುವ ಕಾರ್ಯಕ್ರಮದಲ್ಲಿ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಮತ್ತು ಐಎಎಫ್ ಮುಖ್ಯಸ್ಥ ವಿ.ಆರ್‌.ಚೌಧರಿ ಅವರ ಸಮ್ಮುಖದಲ್ಲಿ ಮೊದಲ ಬ್ಯಾಚ್‌ನ ಎಲ್‌ಸಿಎಚ್‌ಗಳನ್ನುಐಎಎಫ್ ಗೆ ಎಚ್‌ಎಎಲ್‌ ಹಸ್ತಾಂತರಿಸಲಿದೆ.

ಮಾರ್ಚ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಭದ್ರತೆಗೆ ಸಂಬಂಧಿಸಿದ ಸಂಪುಟ ಸಮಿತಿಯು(ಸಿಸಿಎಸ್‌), 3,887 ಕೋಟಿ ರೂ. ವೆಚ್ಚದಲ್ಲಿ ದೇಶಿಯವಾಗಿ ನಿರ್ಮಿಸಿರುವ ಲಿಮಿಟೆಡ್‌ ಎಡಿಶನ್‌ನ 15 ಎಲ್‌ಸಿಎಚ್‌ಗಳನ್ನು ತಯಾರಿಸಲು ಅನುಮೋದನೆ ನೀಡಿತು. ಈ ಪೈಕಿ 10 ಎಲ್‌ಸಿಎಚ್‌ಗಳು ಐಎಎಫ್ ಗೆ ಮತ್ತು 5 ಎಲ್‌ಸಿಎಚ್‌ಗಳು ಭಾರತೀಯ ಸೇನೆಗೆ ಪೂರೈಕೆಯಾಗಲಿವೆ.

ಟಾಪ್ ನ್ಯೂಸ್

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-NG

JEE; ಮಹಾರಾಷ್ಟ್ರ ರೈತನ ಮಗ ಮೇನ್‌ ಟಾಪರ್‌

Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!

Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

Supreme Court

Supreme Court; ಖಾಸಗಿ ಆಸ್ತಿಯನ್ನು ಸ್ವಾಧೀನ ಮಾಡಬಹುದೇ? 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.