ಪೂರ್ವ ಲಡಾಖ್‌ನ ಕಾರ್ಯಾಚರಣೆ ಐಎಎಫ್ ಕ್ಷಮತೆಗೆ ಸಾಕ್ಷಿ

89ನೇ ಸಂಸ್ಥಾಪನ ದಿನಾಚರಣೆಯಲ್ಲಿ ಐಎಎಫ್ ಮುಖ್ಯಸ್ಥ ಚೌಧರಿ ಹೇಳಿಕೆ

Team Udayavani, Oct 9, 2021, 7:00 AM IST

ಪೂರ್ವ ಲಡಾಖ್‌ನ ಕಾರ್ಯಾಚರಣೆ ಐಎಎಫ್ ಕ್ಷಮತೆಗೆ ಸಾಕ್ಷಿ

ಹಿಂಡನ್‌: ಪೂರ್ವ ಲಡಾಖ್‌ನಲ್ಲಿ ಕಳೆದ ವರ್ಷ ಸೃಷ್ಟಿಯಾಗಿದ್ದ ಪರಿಸ್ಥಿತಿಗೆ ಕ್ಷಿಪ್ರವಾಗಿ ಸ್ಪಂದಿಸಿದ ಭಾರತೀಯ ವಾಯುಪಡೆ (ಐಎಎಫ್)ಯ ಕಾರ್ಯಾಚರಣೆಗಳು, ಐಎಎಫ್ ಯುದ್ಧಕ್ಕೆ ಸದಾ ಸಿದ್ಧವಿರುವ ಚುರುಕುತನ ಹಾಗೂ ಇತ್ತೀಚಿನ ವರ್ಷಗಳಲ್ಲಿ ಹೆಚ್ಚಿರುವ ವಾಯುಪಡೆಯ ಶಕ್ತಿ – ಕ್ಷಮತೆಗೆ ಸೂಕ್ತ ಉದಾಹರಣೆಯಾಗಿದೆ ಎಂದು ವಾಯುಪಡೆಯ ಮುಖ್ಯಸ್ಥ ವಿ.ಆರ್‌. ಚೌಧರಿ ತಿಳಿಸಿದ್ದಾರೆ.

ಐಎಎಫ್ 89ನೇ ಸಂಸ್ಥಾಪನ ದಿನಾಚರಣೆ ಅಂಗವಾಗಿ, ಉತ್ತರ ಪ್ರದೇಶದ ಹಿಂಡನ್‌ ವಾಯುನೆಲೆಯಲ್ಲಿ ಆಯೋಜಿಸಲಾಗಿದ್ದ ಸಮಾರಂಭದಲ್ಲಿ ಅವರು ಮಾತನಾಡಿದರು. ಭಾರತೀಯ ವಾಯುಪಡೆಯ ಕ್ಷಮತೆ ಮತ್ತಷ್ಟು ಹೆಚ್ಚಾಗಬೇಕು. ಇದಕ್ಕಾಗಿ ಐಎಎಫ್ ಲ್ಲಿ ಸೇವೆ ಸಲ್ಲಿಸುತ್ತಿರುವ ಎಲ್ಲ ಹಿರಿಯ ಅಧಿಕಾರಿಗಳು, ತಮ್ಮ ಕಿರಿಯ ಅಧಿಕಾರಿಗಳ ಕರ್ತವ್ಯ ಪರತೆಯನ್ನು ಪೋಷಿಸುವ ಹಾಗೂ ಅವರ ಅಂತಃಶಕ್ತಿಯನ್ನು ಹೆಚ್ಚಿಸಲೂ ತಮ್ಮ ಗಮನ ಹರಿಸಬೇಕು ಎಂದರು.

ಗೌರವ: ಪೂರ್ವ ಲಡಾಖ್‌ನಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ವಾಯುಪಡೆಯ ಮೂರು ಸ್ಕ್ವಾಡ್ರಾನ್‌ಗಳಿಗೆ ವಾಯುಪಡೆಯ ಮುಖ್ಯಸ್ಥರಿಂದ ನೀಡಲಾಗುವ ಯೂನಿಟ್‌ ಸೈಟೇಶನ್‌ ಗೌರವ ನೀಡಲಾಯಿತು. ಮಿಗ್‌-29 ವಿಮಾನಗಳನ್ನು ಹೊಂದಿರುವ ಐಎಎಫ್ ನಂ. 47 ಸ್ಕ್ವಾಡ್ರಾನ್‌, 116 ಹೆಲಿಕಾಪ್ಟರ್‌ ಯೂನಿಟ್‌ ಹಾಗೂ “2255 ಸ್ಕ್ವಾಡ್ರನ್‌’ಗಳಿಗೆ ಈ ಗೌರವ ಸಿಕ್ಕಿದೆ.

ಮೋದಿ ಶುಭಾಶಯ
ವಾಯುಪಡೆಯ ಸಂಸ್ಥಾಪನ ದಿನಾಚರಣೆ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಶುಭಾಶಯ ಸಲ್ಲಿಸಿದ್ದಾರೆ. ಈ ಕುರಿತಂತೆ ಟ್ವೀಟ್‌ ಮಾಡಿರುವ ಅವರು, “”ಭಾರತೀಯ ವಾಯುಪಡೆಯು ಧೈರ್ಯ, ಶ್ರದ್ಧೆ ಹಾಗೂ ವೃತ್ತಿಪರತೆಯ ಪ್ರತೀಕವಾಗಿದೆ. ಅತ್ಯಂಕ ಕ್ಲಿಷ್ಟಕರ ಪರಿಸ್ಥಿತಿಯಲ್ಲಿ ದೇಶದ ಸುರಕ್ಷತೆಗಾಗಿ ಚಾಣಾಕ್ಷ ಸೇವೆಯನ್ನು ಮಾಡಿರುವ ಈ ಪಡೆ, ಈ ಮೂಲಕ ತನ್ನ ಹೆಗ್ಗುರುತನ್ನು ಸ್ಥಾಪಿಸಿದೆ” ಎಂದಿದ್ದಾರೆ.

ಇದನ್ನೂ ಓದಿ:ಉಪ ಚುನಾವಣೆ: ಎರಡೂ ಕ್ಷೇತ್ರಗಳಲ್ಲಿ 37 ಅಭ್ಯರ್ಥಿಗಳಿಂದ 57 ನಾಮಪತ್ರ ಸಲ್ಲಿಕೆ

ಹಿಂಡನ್‌ನಲ್ಲೂ ಪ್ರದರ್ಶನ
ಲೇಹ್‌ನಲ್ಲಿ ಗಾಂಧಿ ಜಯಂತಿ ದಿನದಂದು ಅನಾವರಣಗೊಳಿಸಿದ್ದ 1 ಸಾವಿರ ಕೆ.ಜಿ. ತೂಕದ ಖಾದಿ ಧ್ವಜವನ್ನು ಶುಕ್ರವಾರ ಐಎಎಫ್ ದಿನದಂದು ಮತ್ತೆ ಪ್ರದರ್ಶಿಸಲಾಗಿದೆ. ಅದು 225 ಅಡಿ ಉದ್ದ, 150 ಅಡಿ ಅಗಲ ಇದೆ. ಐಎಎಫ್ 75 ವಿಮಾನಗಳು ಆ ಧ್ವಜದ ಸುತ್ತ ಗೌರವಪೂರ್ವಕ ಹಾರಾಟ ನಡೆಸಿದವು. ಭದ್ರವಾದ ಲೋಹದ ಸ್ತಂಭದ ಮೂಲಕ ರಾಷ್ಟ್ರಧ್ವಜ ಹಾರಿಸಲಾಗಿತ್ತು. ಅದರ ಪಕ್ಕದಲ್ಲಿಯೇ ಪ್ರಧಾನಿ ಮೋದಿಯವರ ಭಾವಚಿತ್ರವನ್ನೂ ಹಾಕಲಾಗಿತ್ತು ಮತ್ತು ವಿಶ್ವದ ಅತ್ಯಂತ ದೊಡ್ಡ ಖಾಕಿ ರಾಷ್ಟ್ರ ಧ್ವಜ ಎಂದು ಬರೆಯಲಾಗಿತ್ತು. ಅದನ್ನು ಲೇಹ್‌ನಿಂದ ಹಿಂಡನ್‌ಗೆ ತರಲಾಗಿತ್ತು.

ಟಾಪ್ ನ್ಯೂಸ್

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.