ತರಬೇತಿ ಅವಧಿಯಲ್ಲಿ ಸ್ನೇಹ; ವೈವಾಹಿಕ ಜೀವನದಲ್ಲಿ ಎಡವಿದ 2015ನೇ ಸಾಲಿನ IAS ಟಾಪರ್ಸ್


Team Udayavani, Nov 20, 2020, 10:09 PM IST

IAS Topper

ಮಣಿಪಾಲ: ಪರೀಕ್ಷೆಗಳ ಅಂಕಗಳು, ಶ್ರೇಣಿಗಳು ನೈಜ ಜೀವನದಲ್ಲಿ ಪ್ರಯೋಜನಕ್ಕೆ ಬರುವುದಿಲ್ಲ ಎಂಬ ಮಾತೊಂದು ಇದೆ. ಇದು ಹೌದು ಎಂಬುದಕ್ಕೆ ಹಲವು ನಿದರ್ಶನಗಳು ನಮ್ಮ ಮುಂದೆ ನಡೆಯುತ್ತಿರುತ್ತವೆ. ಇದೀಗ ಮತ್ತೊಂದು ಉದಾಹರಣೆ ಲಭಿಸಿದೆ. ಇದು ದೇಶ ಪ್ರತಿಷ್ಠಿತ ಹುದ್ದೆಯಾದ ಐಎಎಸ್‌ ಟಾಪ್‌ 2ರಲ್ಲಿ ಕಾಣಿಸಿಕೊಂಡು ಬಳಿಕ ದಂಪತಿಗಳಾಗಿದ್ದವರ ಕತೆ.

ಹೌದು. 2015ರಲ್ಲಿ ಯುಪಿಎಸ್‌ಸಿ ಪರೀಕ್ಷೆಯಲ್ಲಿ ಅಗ್ರಸ್ಥಾನದಲ್ಲಿದ್ದ ಐಎಎಸ್ ಅಧಿಕಾರಿ ಟೀನಾ ದಾಬಿ ಮತ್ತು ಅವರ ಐಎಎಸ್ ಪತಿ ಅಥರ್ ಅಮೀರ್‌ ಖಾನ್ ವಿಚ್ಛೇದನಕ್ಕಾಗಿ ಜೈಪುರದ ಕುಟುಂಬ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಪರಸ್ಪರ ಒಪ್ಪಿಗೆಯಿಂದ ಈ ವಿಚ್ಛೇದನ ಪಡೆಯಲು ಇಬ್ಬರೂ ನಿರ್ಧರಿಸಿದ್ದಾರೆ. ಇವರು 2018 ರಲ್ಲಿ ವಿವಾಹವಾಗಿದ್ದರು. ಅಥರ್ ಕಾಶ್ಮೀರಿ ಕುಟುಂಬಕ್ಕೆ ಸೇರಿದರಾಗಿದ್ದಾರೆ.

ಟೀನಾ ಯುಪಿಎಸ್ಸಿಯ ಅಗ್ರಸ್ಥಾನ ಪಡೆದಾಗ ಅದೇ ವರ್ಷ ಅಥರ್ ಎರಡನೇ ಸ್ಥಾನದಲ್ಲಿದ್ದರು. ತರಬೇತಿಯ ಸಮಯದಲ್ಲಿ ಟೀನಾ ಮತ್ತು ಅಮೀರ್‌ ಅವರಲ್ಲಿ ಸ್ನೇಹ ಬೆಳೆದು ಮದುವೆಯಾಗಲು ನಿರ್ಧರಿಸಿದ್ದರು. ಇಬ್ಬರೂ ರಾಜಸ್ಥಾನ ಕೇಡರ್ ಅಧಿಕಾರಿಗಳಾಗಿದ್ದು ಜೈಪುರದಲ್ಲಿ ಹುದ್ದೆ ಪಡೆದಿದ್ದಾರೆ.

ಕೆಲವು ಸಮಯದ ಹಿಂದೆ ಟೀನಾ ತನ್ನ ಸಾಮಾಜಿಕ ಮಾಧ್ಯಮ ಖಾತೆಗಳಿಂದ ಖಾನ್ ಉಪನಾಮವನ್ನು ತನ್ನ ಹೆಸರಿನಿಂದ ತೆಗೆದುಹಾಕಿದ್ದಳು. ಇದರ ಬಳಿಕ ಅಥರ್ ಕೂಡ ಇನ್‌ಸ್ಟಾಗ್ರಾಂನಲ್ಲಿ ತನ್ನ ಪತ್ನಿ ಟೀನಾಳನ್ನು ಫಾಲೋ ಮಾಡುವುದನ್ನು ನಿಲ್ಲಿಸಿದ್ದರು. ಅಂದಿನಿಂದ ಅವರ ವಿವಾಹದ ಬಗ್ಗೆ ಊಹಾಪೋಹಗಳು ಕಾಣಿಸಿಕೊಳ್ಳಲು ಪ್ರಾರಂಭವಾಯಿತು. 2018ರಲ್ಲಿ ಮದುವೆಯಾದ ಇವರು ಭಾರೀ ಸುದ್ದಿಯಲ್ಲಿದ್ದರು. ಐಎಎಸ್‌ ಅಧಿಕಾರಿಗಳು ಅದರಲ್ಲೂ ಟಾಪ್‌ 2ರಲ್ಲಿ ಕಾಣಿಸಿಕೊಂಡ ಇಬ್ಬರು ಮದುವೆಯಾಗುವ ಮೂಲಕ ದೇಶಾದ್ಯಂತ ಉತ್ತಮ ಅಭಿಪ್ರಾಯ ವ್ಯಕ್ತವಾಗಿತ್ತು. ಈ ಐಎಎಸ್ ದಂಪತಿಯನ್ನು ಅನೇಕ ರಾಜಕಾರಣಿಗಳು ಅಭಿನಂದಿಸಿದ್ದರು.ಆದರೆ ಹಿಂದೂ ಮಹಾಸಭಾ ಈ ಮದುವೆಯನ್ನು ಲವ್ ಜಿಹಾದ್ ಎಂದು ಕರೆದಿತ್ತು.

ಟೀನಾ ದಾಬಿ ಅವರು ಮೂಲತಃ ಜೈಪುರದವರು. ಆದರೆ ಅವರು ಜನಿಸಿದ್ದು ಭೋಪಾಲ್‌ನಲ್ಲಿ.  ಕಾನ್ವೆಂಟ್‌ ಶಾಲೆಯಲ್ಲಿ ಓದುತ್ತಿರುವಾಗಿನಿಂದಲೂ ಟೀನಾ ಅಗ್ರಸ್ಥಾನದಲ್ಲಿ ಗುರುತಿಸಿಕೊಂಡವಳು. ಆದರೆ ಅವಳು 7ನೇ ತರಗತಿಯಲ್ಲಿದ್ದಾಗ ಅವಳ ಇಡೀ ಕುಟುಂಬ ದಿಲ್ಲಿಗೆ ಸ್ಥಳಾಂತರಗೊಂಡಿತು. ಟೀನಾ ತಂದೆ ಜಸ್ವಂತ್ ದಾಬಿ ಮತ್ತು ತಾಯಿ ಹಿಮಾನಿ ಇಬ್ಬರೂ ಎಂಜಿನಿಯರ್‌ಗಳಾಗಿದ್ದಾರೆ. ಇಬ್ಬರೂ ಯುಪಿಎಸ್‌ಸಿ ಮತ್ತು ಐಎಎಸ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ.

ಯುಪಿಎಸ್‌ಸಿಯಲ್ಲಿ ಆಯ್ಕೆಯಾದ ಅನಂತರ, ಟೀನಾ ಮತ್ತು ಅಥರ್ ಮುಸ್ಸೂರಿಯಲ್ಲಿ ಉದ್ಯೋಗದ ತರಬೇತಿ ಪಡೆಯುತ್ತಿದ್ದರು. ಇಲ್ಲಿ ಇವರಿಬ್ಬರ ಮಧ್ಯೆ ಆತ್ಮೀಯತೆ ಬೆಳೆದು ವಿವಾಹದಲ್ಲಿ ಅಂತ್ಯವಾಗಿತ್ತು. ವಿಶೇಷ ಎಂದರೆ ಮದುವೆಗೆ ಮೊದಲೇ ಟೀನಾ ತನ್ನ ಸಾಮಾಜಿಕ ಮಾಧ್ಯಮದಲ್ಲಿ ಖಾನ್‌ ಜತೆ ಸಂಬಂಧದಲ್ಲಿ ಇರುವುದಾಗಿ ಬರೆದಿದ್ದಳು. ಆದರೆ ಈಗ ಇಬ್ಬರೂ ಜೀವನ ಪರೀಕ್ಷೆಯಲ್ಲಿ ವಿಫಲವಾಗಿದ್ದು ವಿಚ್ಛೇದನದ ಮೊರೆ ಹೋಗಿದ್ದಾರೆ.

View this post on Instagram

A post shared by Tina Dabi (@dabi_tina)

ಟಾಪ್ ನ್ಯೂಸ್

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.