ಐಎಎಸ್ ಅಧಿಕಾರಿ ಖೇಮ್ಕಾ ಮತ್ತೊಮ್ಮೆ ಟ್ರಾನ್ಸ್ ಫರ್; 28 ವರ್ಷಗಳಲ್ಲಿ 53 ಬಾರಿ ವರ್ಗಾವಣೆ!
ರಾಬರ್ಟ್ ವಾದ್ರಾ ಭೂ ಒಪ್ಪಂದವನ್ನು ಖೇಮ್ಕಾ ರದ್ದುಗೊಳಿಸಿ ಸುದ್ದಿಯಾಗಿದ್ದರು
Team Udayavani, Nov 27, 2019, 6:01 PM IST
ಹರ್ಯಾಣ: ಹರ್ಯಾಣದ ಐಎಎಸ್ ಅಧಿಕಾರಿ ಅಶೋಕ್ ಖೇಮ್ಕಾ ಅವರನ್ನು ಮತ್ತೊಮ್ಮೆ ವರ್ಗಾವಣೆ ಮಾಡಿದ್ದು, ಇದು ಅವರ 28 ವರ್ಷಗಳ ವೃತ್ತಿ ಜೀವನದಲ್ಲಿನ 53ನೇ ವರ್ಗಾವಣೆಯಾಗಿದೆ.
ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಕಾರ್ಯದರ್ಶಿಯಾಗಿದ್ದ ಐಎಎಸ್ ಅಧಿಕಾರಿ ಖೇಮ್ಕಾ ಅವರನ್ನು ಬುಧವಾರ ಹರ್ಯಾಣ ಸರ್ಕಾರ ಪತ್ರಾಗಾರ ಇಲಾಖೆಗೆ ವರ್ಗಾವಣೆ ಮಾಡಿದೆ.
ಕಳೆದ ವರ್ಷ ಮಾರ್ಚ್ ತಿಂಗಳಿನಲ್ಲಿ ಖೇಮ್ಕಾ ಅವರನ್ನು ಕ್ರೀಡಾ ಮತ್ತು ಯುವ ವ್ಯವಹಾರಗಳ ಇಲಾಖೆಗೆ ವರ್ಗಾಯಿಸಿದ್ದರು. ಇದೀಗ ಮತ್ತೊಮ್ಮೆ ಟ್ರಾನ್ಸ್ ಫರ್ ಮಾಡಲಾಗಿದೆ. ಅದು ಸಂವಿಧಾನ ದಿನಾಚರಣೆಯ ಮರುದಿನವೇ ವರ್ಗಾವಣೆ ಮಾಡಲಾಗಿದೆ. ಸುಪ್ರೀಂಕೋರ್ಟ್ ಆದೇಶ ಮತ್ತು ಕಾನೂನನ್ನು ಮತ್ತೊಮ್ಮೆ ಉಲ್ಲಂಘಿಸಲಾಗಿದೆ. ಕೊನೆಪಕ್ಷ ನಾವು ಕೆಲವರನ್ನು ಸಂತುಷ್ಟಿಗೊಳಿಸಬೇಕಾಗಿದೆ. ನನ್ನನ್ನು ಕೊನೆಯ ಮೂಲೆಗೆ ತಳ್ಳಿಬಿಟ್ಟಿದ್ದಾರೆ ಎಂದು ಖೇಮ್ಕಾ ಬುಧವಾರ ಟ್ವೀಟ್ ನಲ್ಲಿ ತಮ್ಮ ಒಡಲಾಳವನ್ನು ಬಿಚ್ಚಿಟ್ಟಿದ್ದಾರೆ.
1991ರ ಐಎಎಸ್ ಬ್ಯಾಚ್ ಅಧಿಕಾರಿಯಾಗಿರುವ ಅಶೋಕ್ ಖೇಮ್ಕಾ ಅವರು ಮಾಧ್ಯಮಗಳ ಗಮನ ಸೆಳೆದಿದ್ದು 2012ರಲ್ಲಿ. ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ ಅಳಿಯ ರಾಬರ್ಟ್ ವಾದ್ರಾ ಒಡೆತನದ ಸ್ಕೈಲೈಟ್ ಹಾಸ್ಪಿಟಾಲಿಟಿ ಮತ್ತು ರಿಯಲ್ ಎಸ್ಟೇಟ್ ಡೆವಲಪರ್ ಡಿಎಲ್ ಎಫ್ ನಡುವಿನ ಭೂ ಒಪ್ಪಂದವನ್ನು ಖೇಮ್ಕಾ ರದ್ದುಗೊಳಿಸುವ ಮೂಲಕ ಭಾರೀ ಸುದ್ದಿಯಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai Airport: ನ್ಯೂಡಲ್ಸ್ ಪ್ಯಾಕೇಟ್ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
Telangana Election 2024: ಕಳೆಗುಂದಿದ ಬಿಆರ್ಎಸ್: ಕಾಂಗ್ರೆಸ್-ಬಿಜೆಪಿ ಕಾದಾಟ
Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ
MUST WATCH
ಹೊಸ ಸೇರ್ಪಡೆ
ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ
Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ
Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!