ಯಾರ ಕೈಯಲ್ಲಿ ರಕ್ತದ ಕಲೆಗಳಿವೆ ಎಂಬುದು ನಿಮಗೆ ತಿಳಿಯಲಿದೆ
Team Udayavani, Dec 6, 2022, 7:15 AM IST
ಕಾಶ್ಮೀರ: “ದಿ ಕಾಶ್ಮೀರ್ ಫೈಲ್ಸ್’ ಸಿನೆಮಾ ಬಗ್ಗೆ ಇಸ್ರೇಲ್ ನಿರ್ದೇಶಕ ನದಾವ್ ಲ್ಯಾಪಿಡ್ ಅವರ ಹೇಳಿಕೆ ಹಾಗೂ ಕಾಶ್ಮೀರಿ ಹಿಂದೂಗಳಿಗೆ ಉಗ್ರ ಸಂಘಟನೆ ದಿ ರೆಸಿಸ್ಟೆಂಟ್ ಫ್ರಂಟ್(ಟಿಆರ್ಎಫ್) ಹಾಕಿರುವ ಬೆದರಿಕೆ ಬಗ್ಗೆ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಪ್ರತಿಕ್ರಿಯಿಸಿದ್ದಾರೆ.
“ಗೋವಾದಲ್ಲಿ ನಡೆದ 2022ರ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಇಸ್ಲಾಮಿಕ್ ಭಯೋತ್ಪಾದಕರಿಗೆ ಬಹಿರಂಗವಾಗಿ ಸೈದ್ಧಾಂತಿಕ ಬೆಂಬಲ ನೀಡಿದ ಒಂದು ವಾರದಲ್ಲೇ ಲಷ್ಕರ್-ಎ-ತಯ್ಯ ಬಾದ ಸಹ ಸಂಘಟನೆ ದಿ ರೆಸಿಸ್ಟೆಂಟ್ ಫ್ರಂಟ್, ಕಾಶ್ಮೀರಿ ಹಿಂದೂಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುವ ಬೆದರಿಕೆ ಹಾಕಿದೆ,’ ಎಂದು ವಿವೇಕ್ ಅಗ್ನಿಹೋತ್ರಿ ಟ್ವೀಟ್ ಮಾಡಿದ್ದಾರೆ.
“ಇದಾದ ಅನಂತರ ಕಾಶ್ಮೀರದಲ್ಲಿ ಯಾವುದೇ ಹಿಂದೂವನ್ನು ಗುರಿಯಾಗಿಸಿ ದಾಳಿ ನಡೆದರೆ ಯಾರ ಕೈಯಲ್ಲಿ ರಕ್ತದ ಕಲೆಗಳಿವೆ ಎಂಬುದು ನಿಮಗೆ ತಿಳಿಯಲಿದೆ,’ ಎಂದು ಅವರು ಮತ್ತೊಂದು ಟ್ವೀಟ್ ಮಾಡಿದ್ದಾರೆ. ಇದರ ಜತೆಗೆ ಅವರು ನದಾವ್ ಲ್ಯಾಪಿಡ್, ಮೆಹಬೂಬಾ ಮುಫ್ತಿ ಮತ್ತು ಟಿಆರ್ಎಫ್ ಬಿಡುಗಡೆಗೊಳಿಸಿರುವ 58 ಕಾಶ್ಮೀರಿ ಪಂಡಿತ್ ಅಧಿಕಾರಿಗಳ ಪಟ್ಟಿಯ ಫೋಟೋ ಗಳನ್ನು ಟ್ವೀಟ್ನೊಂದಿಗೆ ಲಗತ್ತಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಆಪ್ ಕೌನ್ಸಿಲರ್ಗಳನ್ನು ಬುಟ್ಟಿಗೆ ಹಾಕಿಕೊಳ್ಳಲು ಬಿಜೆಪಿಗೆ ಸಾಧ್ಯವಿಲ್ಲ ಎಂದ ಕೇಜ್ರಿವಾಲ್
ಕೇರಳದ ಪೆಟ್ ಶಾಪ್ ನಲ್ಲಿ ನಾಯಿಮರಿ ಕಳ್ಳತನ; ಉಡುಪಿ ಮೂಲದ ಇಬ್ಬರು ವಿದ್ಯಾರ್ಥಿಗಳ ಬಂಧನ
ಏರ್ ಇಂಡಿಯಾ ವಿಮಾನದ ಇಂಜಿನ್ ನಲ್ಲಿ ಬೆಂಕಿ; ತುರ್ತು ಲ್ಯಾಂಡಿಂಗ್
ಮುಂಬಯಿಯಲ್ಲಿ ತಾಲಿಬಾನ್ ದಾಳಿ: ಎನ್ ಐಎಗೆ ಬೆದರಿಕೆ ಮೇಲ್
ಬಿಬಿಸಿ ಸಾಕ್ಷ್ಯಚಿತ್ರ ನಿಷೇಧ: ಕೇಂದ್ರ ಸರ್ಕಾರಕ್ಕೆ ನೋಟಿಸ್ ನೀಡಿದ ಸುಪ್ರೀಂ
MUST WATCH
ಮಿಸ್ಟರ್ ಬೀನ್ ಈಗ ಎಲ್ಲಿದ್ದಾರೆ? ಹೇಗಿದ್ದಾರೆ |ಯಾರು ಈ ಮಿಸ್ಟರ್ ಬೀನ್ ?
ಮಲ್ಪೆ ಮೀನಿನ ಮಾರುಕಟ್ಟೆ ಹೇಗೆದೆ ನೋಡಿ | ಯಾವ ಮೀನಿಗೆ ಎಷ್ಟು ಬೆಲೆ ?
ವಿದ್ಯಾರ್ಥಿ ಭವನ್ ವೈಟರ್ ಸಾಹಸಕ್ಕೆ ಆನಂದ್ ಮಹೀಂದ್ರ ಫುಲ್ ಖುಷ್; ಇಲ್ಲಿದೆ ವಿಡಿಯೋ
ಕಾಫಿನಾಡಲ್ಲಿ ಮುಂದುವರಿದ ಮತದಾನ ಬಹಿಷ್ಕಾರದ ಕೂಗು
ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ
ಹೊಸ ಸೇರ್ಪಡೆ
ಆರ್ಹಾಳ: ಭೂಮಿ ಪೋಡಿ ಮುಕ್ತ ಮಾಡದಿದ್ದರೆ ಮತದಾನ ಬಹಿಷ್ಕಾರ
ಸಕಲೇಶಪುರ: ಅಟ್ಟಾಡಿಸಿಕೊಂಡು ಬಂದ ಕಾಡಾನೆಗಳು; ಕೂದಲೆಳೆ ಅಂತರದಲ್ಲಿ ಇಟಿಎಫ್ ಸಿಬಂದಿ ಪಾರು
ಸಾಮಾಜಿಕ ಉದ್ಯಮಕ್ಕೆ ಹುಬ್ಬಳ್ಳಿ ಮಾಡೆಲ್; ದೇಶಪಾಂಡೆ ಫೌಂಡೇಶನ್ ಅಭಿವೃದ್ಧಿ ಸಂವಾದ’ ಸಮಾವೇಶ
ಆರೋಗ್ಯವೇ ಭಾಗ್ಯ…ರುಚಿಕರವಾದ ವೆಜ್ ಗೋಲ್ಡ್ ಕಾಯಿನ್ ರೆಸಿಪಿ
ಆಪ್ ಕೌನ್ಸಿಲರ್ಗಳನ್ನು ಬುಟ್ಟಿಗೆ ಹಾಕಿಕೊಳ್ಳಲು ಬಿಜೆಪಿಗೆ ಸಾಧ್ಯವಿಲ್ಲ ಎಂದ ಕೇಜ್ರಿವಾಲ್