Loksabha: ಒಂದು ವೇಳೆ ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ….: ಮಮತಾ ಬ್ಯಾನರ್ಜಿ ಎಚ್ಚರಿಕೆ
Team Udayavani, Aug 29, 2023, 8:20 AM IST
ಕೋಲ್ಕತ್ತಾ: ಒಂದು ವೇಳೆ ಸತತ ಮೂರನೇ ಬಾರಿ ಕೇಂದ್ರದಲ್ಲಿ ಭಾರತೀಯ ಜನತಾ ಪಕ್ಷವು ಅಧಿಕಾರಕ್ಕೆ ಬಂದರೆ ದೇಶವು ನಿರಂಕುಶ ಅಧಿಕಾರವನ್ನು ಎದುರಿಸಬೇಕಾಗುತ್ತದೆ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.
ಟಿಎಂಸಿ ಯುವ ಘಟಕದ ರ್ಯಾಲಿಯಲ್ಲಿ ಮಾತನಾಡಿದ ಅವರು, ಒಂದು ವೇಳೆ ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ದೇಶದಲ್ಲಿ ನಿರಂಕುಶಾಧಿಕಾರ ಬರಲಿದೆ. ಅಲ್ಲದೆ ಮುಂದಿನ ಲೋಕಸಭೆ ಚುನಾವಣೆಯನ್ನು ಬಿಜೆಪಿಯು ಡಿಸೆಂಬರ್ ಅಥವಾ ಮುಂದಿನ ಜನವರಿ ತಿಂಗಳಲ್ಲಿ ನಡೆಸಬಹುದು ಎಂಬ ಆತಂಕವಿದೆ ಎಂದರು.
“ಕೇಸರಿ ಪಕ್ಷವು ಅದಾಗಲೇ ಸಮುದಾಯಗಳ ನಡುವೆ ವೈಷಮ್ಯ ಉಂಟು ಮಾಡುವ ಕೆಲಸ ಮಾಡುತ್ತಿದೆ. ಅವರು ಮತ್ತೆ ಅಧಿಕಾರಕ್ಕೆ ಬಂದರೆ ದೇಶವನ್ನು ದ್ವೇಷದಿಂದ ತುಂಬಿಸುತ್ತಾರೆ” ಎಂದು ಪ.ಬಂಗಾಳ ಸಿಎಂ ಹೇಳಿದರು.
ಲೋಕಸಭೆ ಚುನಾವಣೆಯನ್ನು ಅವಧಿಗೆ ಮುನ್ನವೇ ಮಾಡಲು ಬಿಜೆಪಿ ಮುಂದಾಗಿದೆ ಎಂದ ಅವರು, ಚುನಾವಣಾ ಪ್ರಚಾರಕ್ಕಾಗಿ ಬಿಜೆಪಿಯು ಎಲ್ಲಾ ಹೆಲಿಕಾಪ್ಟರ್ ಗಳನ್ನು ಮುಂಗಡ ಕಾಯ್ದಿರಿಸಿಕೊಂಡಿದೆ ಎಂದರು.
“ಬಿಜೆಪಿಯು ಅದಾಗಲೇ ಎಲ್ಲಾ ಹೆಲಿಕಾಪ್ಟರ್ ಗಳನ್ನು ಬುಕ್ ಮಾಡಿಕೊಂಡಿದೆ. ಇತರ ಪಕ್ಷಗಳು ಕ್ಯಾನ್ವಾಸ್ ನಡೆಸಲು ಅವುಗಳನ್ನು ಬಳಸಬಾರದು ಎಂದು ಬಿಜೆಪಿ ಈ ರೀತಿ ಮಾಡಿದೆ” ಎಂದು ಆರೋಪಿಸಿದರು.
ಇದನ್ನೂ ಓದಿ:Birds ರಾಜ್ಯದ ಪಕ್ಷಿ ಪ್ರಭೇದಕ್ಕೆ ಕುತ್ತು: ಹಕ್ಕಿಗಳ ಸ್ಥಿತಿಗತಿ ವರದಿಯಲ್ಲಿ ಆತಂಕ
ಪ.ಬಂಗಾಳದ ಉತ್ತರ ಪರಗಣ 24ರಲ್ಲಿ ರವಿವಾರ ಬೆಳಗ್ಗೆ ನಡೆದ ಪಠಾಕಿ ಕಾರ್ಖಾನೆ ದುರಂತ ಘಟನೆಯ ಬಗ್ಗೆ ಮಾತನಾಡಿದ ಅವರು, “ಕೆಲವರು ಅಕ್ರಮ ಚಟುವಟಿಕೆಗಳಲ್ಲಿ ತೊಡಗಿದ್ದಾರೆ. ಅಲ್ಲದೆ ಕೆಲವು ಪೊಲೀಸರು ಅವರಿಗೆ ಸಹಾಯ ಮಾಡುತ್ತಿದ್ದಾರೆ” ಎಂದರು.
“ಹೆಚ್ಚಿನ ಪೊಲೀಸರು ಅವರ ಕರ್ತವ್ಯವನ್ನು ಶ್ರದ್ಧೆಯಿಂದ ನಡೆಸುತ್ತಿದ್ದಾರೆ. ಆದರೆ ಕೆಲವು ಮಂದಿ ಇಂತಹ ಜನರಿಗೆ ಸಹಾಯ ಮಾಡುತ್ತಿದ್ದಾರೆ. ಆ್ಯಂಟಿ ರ್ಯಾಗಿಂಗ್ ಸೆಲ್ ನಂತೆಯೇ ನಮ್ಮಲ್ಲೂ ಬಂಗಾಳದಲ್ಲಿ ಭ್ರಷ್ಟಾಚಾರ ನಿಗ್ರಹ ಸೆಲ್ ಇದೆ ಎಂಬುದನ್ನು ಅವರು ನೆನಪಿಟ್ಟುಕೊಳ್ಳಬೇಕು” ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ