ಬಾಕಿ ಕೊಡದಿದ್ದರೆ ಜಿಎಸ್ಟಿ ಪಾವತಿ ಸ್ಥಗಿತ!: ಮಮತಾ ಬ್ಯಾನರ್ಜಿ
Team Udayavani, Nov 15, 2022, 8:30 PM IST
ಕೋಲ್ಕತ್ತಾ:”ಕೇಂದ್ರ ಸರ್ಕಾರವು ರಾಜ್ಯಕ್ಕೆ ಕೊಡಲು ಬಾಕಿಯಿರುವ ಮೊತ್ತವನ್ನು ಪಾವತಿಸದೇ ಇದ್ದರೆ, ನಾವು ಸರಕು ಮತ್ತು ಸೇವಾ ತೆರಿಗೆ(ಜಿಎಸ್ಟಿ) ಪಾವತಿಸುವುದನ್ನೇ ನಿಲ್ಲಿಸಬೇಕಾಗುತ್ತದೆ.’
ಇಂದು ಕೇಂದ್ರ ಸರ್ಕಾರಕ್ಕೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಾಕಿರುವ ಸವಾಲು. ಮಂಗಳವಾರ ಬುಡಕಟ್ಟು ಬಾಹುಳ್ಯದ ಜಾರ್ಗ್ರಾಮ್ ಜಿಲ್ಲೆಯಲ್ಲಿ ನಡೆದ ರ್ಯಾಲಿ ವೇಳೆ ಮಾತನಾಡಿದ ಸಿಎಂ ಮಮತಾ, “ಕೇಂದ್ರ ಸರ್ಕಾರ ಒಂದೋ ಬಾಕಿ ಪಾವತಿಸಲಿ ಅಥವಾ ಅಧಿಕಾರದಿಂದ ಕೆಳಗಿಳಿಯಲಿ’ ಎಂದೂ ಗುಡುಗಿದ್ದಾರೆ.
ನಮ್ಮ ಬಾಕಿಯನ್ನು ಕೇಳಲು ನಾವೇನು ಕೇಂದ್ರದ ಮುಂದೆ ಭಿಕ್ಷೆ ಬೇಡುತ್ತಾ ಕೂರಬೇಕೇ? ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಅನುದಾನವನ್ನೂ ಕೇಂದ್ರ ಬಿಡುಗಡೆ ಮಾಡುತ್ತಿಲ್ಲ. ಇದರ ವಿರುದ್ಧ ನೀವೆಲ್ಲರೂ ಬೀದಿಗಿಳಿದು ಹೋರಾಡಬೇಕು ಎಂದೂ ಬುಡಕಟ್ಟು ಜನಾಂಗಗಳಿಗೆ ದೀದಿ ಕರೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬಂಗಾಲ ಶಿಕ್ಷಕರ ನೇಮಕ ಸಿಬಿಐ ತನಿಖೆಗೆ ಮಾತ್ರ ತಡೆ: ಸುಪ್ರೀಂ ಕೋರ್ಟ್
NEET; ಕೋಟಾದಲ್ಲಿ ಮತ್ತೊಬ್ಬ ಆಕಾಂಕ್ಷಿ ಆತ್ಮಹತ್ಯೆ: ಇದು 8ನೇ ಪ್ರಕರಣ
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ