ಪಾಕ್ ಭೀತಿವಾದ ನಿಲ್ಲಿಸಿದರೆ ನಾವೂ ನೀರಜ್ ಚೋಪ್ರಾ ಆಗುವೆವು: ರಾವತ್
Team Udayavani, Sep 6, 2018, 11:34 AM IST
ಹೊಸದಿಲ್ಲಿ : ಪಾಕಿಸ್ಥಾನ ಭಯೋತ್ಪಾದನೆಯನ್ನು ನಿಲ್ಲಿಸಿದರೆ ನಾವು ಕೂಡ ನೀರಜ್ ಚೋಪ್ರಾ ಆಗುವೆವು ಎಂದು ಭಾರತೀಯ ಸೇನಾ ಪಡೆ ಮುಖ್ಯಸ್ಥ ಬಿಪಿನ್ರಾವತ್ ಹೇಳಿದ್ದಾರೆ.
ವಿಶ್ವ ಸಮುದಾಯದಿಂದ ಪ್ರತ್ಯೇಕಗೊಂಡು ಏಕಾಕಿಯಾಗಿ, ಆರ್ಥಿಕವಾಗಿ ದಿವಾಳಿ ಎದ್ದಿರುವ ಪಾಕಿಸ್ಥಾನಕ್ಕೆ ತನ್ನ ಈ ದಯನೀಯ ಸ್ಥಿತಿಯಿಂದ ಮೇಲೆ ಬರಲು ಭಾರತದ ಸಹಾಯ ಹಸ್ತ ಬೇಕಾಗಿದೆ ಎಂದು ಅಂತಾರಾಷ್ಟ್ರೀಯ ವಿಶ್ಲೇಷಕರು ಅಭಿಪ್ರಾಯ ಪಡುತ್ತಿರುವ ಇಂದಿನ ಸಂದರ್ಭದಲ್ಲಿ ರಾವತ್ ಹೇಳಿಕೆ ಮಹತ್ವ ಪಡೆದುಕೊಂಡಿದೆ.
ಭಾರತ – ಪಾಕ್ ಗಡಿಯಲ್ಲಿ ನೀವು ಕ್ರೀಡಾ ಮನೋಭಾವವನ್ನು ತೋರುವಿರಾ ಎಂಬ ಮಾಧ್ಯಮ ಪ್ರಶ್ನೆಗೆ ಉತ್ತರಿಸುತ್ತಿದ್ದ ಜನರಲ್ ರಾವತ್ ಅವರು, ‘ಪಾಕಿಸ್ಥಾನ ಒಂದೊಮ್ಮೆ ಭಯೋತ್ಪಾದನೆಯನ್ನು ನಿಲ್ಲಿಸಿದರೆ ನಾವು ಕೂಡ ನೀರಜ್ ಚೋಪ್ರಾ ಆಗುವೆವು’ ಎಂದು ಮಾರ್ಮಿಕವಾಗಿ ಹೇಳಿದರು.
ಏಶ್ಯನ್ ಗೇಮ್ಸ್ ಜವೆಲನ್ ಚಿನ್ನದ ಪದಕ ಗೆದ್ದ ನೀರಜ್ ಚೋಪ್ರಾ ಅವರು ತನ್ನ ಪಾಕ್ ಪ್ರತಿಸ್ಪರ್ಧಿ ವಿರುದ್ಧ ಸದ್ಭಾವನೆ ತೋರುವ ಮೂಲಕ ಉಭಯ ದೇಶಗಳ ಅಭಿಮಾನಿಗಳನ್ನು ಗೆದ್ದಿದ್ದರು.
‘ಭಯೋತ್ಪಾದನೆಯನ್ನು ನಿಲ್ಲಿಸುವ ಮೂಲಕ ಪಾಕಿಸ್ಥಾನ ಮೊದಲ ಹೆಜ್ಜೆಯನ್ನು ಇಡಬೇಕು; ಆಗ ನಾವು ಕೂಡ ನೀರಜ್ ಚೋಪ್ರಾ ಅವರಂತೆ ಮುಂದಡಿ ಇಡುವೆವು’ ಎಂದು ರಾವತ್ ಹೇಳಿದರು.
ಏಶ್ಯನ್ ಗೇಮ್ಸ್ ಪದಕ ವಿಜೇತರನ್ನು ಸೇನೆಯ ವತಿಯಿಂದ ಸಮ್ಮಾನಿಸುವ ಕಾರ್ಯಕ್ರಮದಲ್ಲಿ ಜನರಲ್ ರಾವತ್ ಮಾತನಾಡುತ್ತಿದ್ದರು. ಜವೆಲಿನ್ ಕಂಚು ಗೆದ್ದಿದ್ದ ಪಾಕಿಸ್ಥಾನದ ಅರ್ಷದ್ ನದೀಮ್ ಅವರನ್ನು ನೀರಜ್ ಚೋಪ್ರಾ ಕೈಕುಲುಕಿ ಅಭಿನಂದಿಸಿದ್ದರು. ಆ ಸನ್ನಿವೇಶದ ಚಿತ್ರ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
MUST WATCH
ಹೊಸ ಸೇರ್ಪಡೆ
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು