ಸಂಧಾನ ವಿಫಲವಾದರೆ 25ರಿಂದ ನಿತ್ಯ ವಿಚಾರಣೆ
18ಕ್ಕೆ ಅಯೋಧ್ಯೆ ವರದಿ ಸಲ್ಲಿಕೆಗೆ ಸೂಚನೆ
Team Udayavani, Jul 12, 2019, 2:03 AM IST
ನವದೆಹಲಿ: ಅಯೋಧ್ಯೆಯಲ್ಲಿನ ಜಮೀನು ಮಾಲೀಕತ್ವದ ಬಗ್ಗೆ ರಚನೆ ಮಾಡಲಾಗಿರುವ ಸಮಿತಿ ಮಾತುಕತೆ ಮೂಲಕ ವಿವಾದ ಇತ್ಯರ್ಥ ಮಾಡಲು ಸಾಧ್ಯವಿಲ್ಲ ಎಂದು ಹೇಳಿದಲ್ಲಿ, ಜೂ.25ರಿಂದ ಪ್ರತಿದಿನ ಪ್ರಕರಣದ ವಿಚಾರಣೆ ನಡೆಸುತ್ತೇವೆ. ಹೀಗೆಂದು ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೋಯ್ ನೇತೃತ್ವದ ಸುಪ್ರೀಂಕೋರ್ಟ್ನ ಐವರು ಸದಸ್ಯರ ಸಾಂವಿಧಾನಿಕ ಪೀಠ ಗುರುವಾರ ಹೇಳಿದೆ.
ಮಾತ್ರವಲ್ಲದೆ 18ರ ಒಳಗಾಗಿ ನಿವೃತ್ತ ನ್ಯಾಯಮೂರ್ತಿ ಎಫ್.ಎಂ.ಐ.ಖಲೀಫುಲ್ಲಾ ನೇತೃತ್ವದ ಸಮಿತಿ ಪ್ರಸ್ತುತ ಸಂಧಾನ ಕುರಿತ ಸ್ಥಿತಿಗತಿ ವರದಿ ಸಲ್ಲಿಸುವಂತೆಯೂ ಸೂಚನೆ ನೀಡಿದೆ. ವರದಿ ಪರಿಶೀಲಿಸಿ, ಮಾತುಕತೆ ಮೂಲಕ ಜಮೀನು ಮಾಲೀಕತ್ವ ವಿಚಾರ ಇತ್ಯರ್ಥ ಸಾಧ್ಯವಿಲ್ಲ ಎಂದಾದರೆ 25ರಿಂದ ದಿನವಹಿ ಪ್ರಕರಣದ ವಿಚಾರಣೆ ನಡೆಸುವುದಾಗಿ ನ್ಯಾಯಪೀಠ ಹೇಳಿದೆ.
ರಾಮಲಲ್ಲಾ ವಿರಾಜಮಾನ್ ಸಂಘಟನೆ ಪರವಾಗಿ ವಾದಿಸಿದ ಹಿರಿಯ ನ್ಯಾಯವಾದಿ ರಂಜಿತ್ ಕುಮಾರ್, ಮಧ್ಯಸ್ಥಿಕೆ ಪ್ರಕ್ರಿಯೆಗೆ ಪ್ರಕರಣವನ್ನು ಒಪ್ಪಿಸಬಾರದು ಎಂಬ ಹಿಂದಿನ ನಿಲುವನ್ನೇ ಈಗಲೂ ಪ್ರಕಟಿಸುತ್ತಿರುವುದಾಗಿ ಹೇಳಿದ್ದಾರೆ. ಮುಸ್ಲಿಂ ಸಂಘಟನೆಗಳ ಪರ ವಾದಿಸಿದ ರಾಜೀವ್ ಧವನ್ ಮಧ್ಯಸ್ಥಿಕೆ ಪ್ರಕ್ರಿಯೆ ಮುಕ್ತಾಯ ಮಾಡಬಾರದು. ಹೊಸ ಅರ್ಜಿ ಸಲ್ಲಿಕೆ ಕೇವಲ ಪ್ರಚೋದನಕಾರಿ ಎಂದು ವಾದಿಸಿದರು.
ಅದಕ್ಕೆ ಉತ್ತರಿಸಿದ ನ್ಯಾಯಪೀಠ ‘ಸಮಿತಿ ರಚಿಸಲು ಹೇಳಿದ್ದೇ ನಾವು. ಹೀಗಾಗಿ, ಇದುವರೆಗೆ ಏನಾಗಿದೆ ಎನ್ನುವುದನ್ನು ಪರಿಶೀಲಿಸಲು ನಮಗೆ ಹಕ್ಕು ಇದೆ’ ಎಂದಿತು. ಅದಕ್ಕೆ ಪ್ರತಿಕ್ರಿಯೆ ನೀಡಿದ ಮೂಲ ಅರ್ಜಿದಾರ ಗೋಪಾಲ ಸಿಂಗ್ ವಿಶಾರದ್ ಪರ ನ್ಯಾಯವಾದಿ ಕೆ.ಎಸ್.ಪರಾಶರನ್, ಮಾತುಕತೆ-ಮಧ್ಯಸ್ಥಿಕೆ ಮೂಲಕ ವಿವಾದ ಪರಿಹರಿಸಲು ಕಷ್ಟ ಎಂದು ಹೇಳಿದರು. ಮಧ್ಯಸ್ಥಿಕೆ ಸಮಿತಿ ಸಭೆ ಸೇರಿದ ವಿವರ ನೀಡಿದ ಪರಾಶರನ್ ಸುಪ್ರೀಂಕೋರ್ಟ್ ವಿವಾದ ಪರಿಹರಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು ಎಂದರು. ಅದಕ್ಕೆ ಧವನ್ ವಿರೋಧಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Loksabha Election; ದೇಶದಲ್ಲಿ ಹಂತ-1: ಮತ ಇಂದು
EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ
Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ
Bombay High Court: ಆರತಕ್ಷತೆ ಮದುವೆಯ ಭಾಗ ಎಂದು ಪರಿಗಣಿಸಲಾಗದು: ಬಾಂಬೆ ಹೈಕೋರ್ಟ್
MUST WATCH
ಹೊಸ ಸೇರ್ಪಡೆ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ