IT ಫ್ರೆಂಡ್ಸ್ ಎಚ್ಚರ ಇರಲಿ! 8ಪುಟಗಳ ಸೂಸೈಡ್ ನೋಟ್ ಬರೆದಿಟ್ಟು ವಿದ್ಯಾರ್ಥಿ ಆತ್ಮಹತ್ಯೆ
Team Udayavani, Jul 5, 2019, 6:48 PM IST
ಹೈದರಾಬಾದ್:ಐಐಟಿ ಅಂತಿಮ ವರ್ಷದ ವಿದ್ಯಾರ್ಥಿಯೊಬ್ಬ ಬರೋಬ್ಬರಿ 8 ಪುಟಗಳ ಸೂಸೈಡ್ ನೋಟ್ ಬರೆದಿಟ್ಟು ಹಾಸ್ಟೆಲ್ ನಲ್ಲಿಯೇ ನೇಣಿಗೆ ಶರಣಾಗಿರುವ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ. ಅಷ್ಟೇ ಅಲ್ಲ ಐಟಿಯಲ್ಲಿ ಕೆಲಸ ಮಾಡುವ ಗೆಳೆಯರಿಗೆ ಎಚ್ಚರಿಕೆಯೊಂದನ್ನು ಕೊಟ್ಟಿದ್ದಾರೆ!
ನೇಣಿಗೆ ಶರಣಾಗುವ ಮುನ್ನ ಐಐಟಿ ವಿದ್ಯಾರ್ಥಿ ಮಾರ್ಕ್ ಆ್ಯಂಡ್ರ್ಯೂ ಚಾರ್ಲ್ಸ್, “ ಐಟಿಯಲ್ಲಿ ಕೆಲಸ ಮಾಡುತ್ತಾ, ಮಾಡುತ್ತಾ ನಿಮ್ಮ ಜೀವನವನ್ನೇ ಮರೆತು ಬಿಡಬೇಡಿ. ಇರುವುದು ಒಂದೇ ಒಂದು ಜೀವನ! ಎಂದು ಸುಮಾರು 8 ಪುಟಗಳ ಸೂಸೈಡ್ ನೋಟ್ ನಲ್ಲಿ ಬರೆದಿರುವುದಾಗಿ ದ ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.
ವಾರಣಾಸಿ ಮೂಲದ ಪೋಷಕರನ್ನು ಹೆಸರಿಸಿ ಪತ್ರದಲ್ಲಿ, ಕ್ಷಮಿಸಿ..ನನ್ನಂತಹ ಪ್ರಯೋಜನವಿಲ್ಲದವನಿಂದ ಏನು ಉಪಯೋಗವಿಲ್ಲ. ಹೀಗಾಗಿ ಆತ್ಮಹತ್ಯೆಗೆ ಶರಣಾಗುತ್ತಿದ್ದೇನೆ ಎಂದು ಬರೆದಿದ್ದಾನೆ. ನನಗೆ ಯಾವುದೇ ಕೆಲಸ ಇಲ್ಲ, ಬಹುಶ ಬೇರೆ ಕೆಲಸ ಸಿಗುವುದು ಇಲ್ಲ. ಇಂತಹ ಕಡಿಮೆ ಅಂಕ ಗಳಿಸಿದವನನ್ನು ಯಾರು ಕೆಲಸ ಸೇರಿಸಿಕೊಳ್ಳುತ್ತಾರೆ. ನನ್ನ ಅಂಕಪಟ್ಟಿ ನೋಡುವಾಗ ನನಗೇ ಅಚ್ಚರಿಯಾಗುತ್ತೆ ಎಂಬುದಾಗಿಯೂ ಪತ್ರದಲ್ಲಿ ಬರೆದಿಟ್ಟಿದ್ದಾನೆ!
ಈ ಇನ್ಸ್ ಟಿಟ್ಯೂಟ್ ನಲ್ಲಿ ನಡೆದ ಎರಡನೇ ಘಟನೆ ಇದಾಗಿದೆ. ಫೆಬ್ರುವರಿ ತಿಂಗಳಲ್ಲಿ ಐಐಟಿ ತೃತೀಯ ವರ್ಷದ ವಿದ್ಯಾರ್ಥಿ ಅನಿರುದ್ಯಾ ಮುಮ್ಮನೇನಿ ಹಾಸ್ಟೆಲ್ ನ ಏಳನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದ. ಅಂತಿಮ ಪ್ರಸೆಂಟೇಶನ್ ಕೊಡುವುದು ಬಾಕಿ ಇರುವುದರಿಂದ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ
MUST WATCH
ಹೊಸ ಸೇರ್ಪಡೆ
Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’
Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್ ಹೆಗ್ಡೆ
Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ
Subramanya ಏನೆಕಲ್ಲು: ಕಾರಿಗೆ ಗೂಡ್ಸ್ ಆಟೋ ಢಿಕ್ಕಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ