ಕಾಸ್ ಗಂಜ್ ಗಲಭೆ; ಅಯ್ಯೋ ನಾನ್ ಸತ್ತಿಲ್ಲ, ಹಿಂಸಾಚಾರ ನಡೆಸ್ಬೇಡಿ!


Team Udayavani, Jan 30, 2018, 3:59 PM IST

Kasganj-Man-alive-700.jpg

ಕಾಸಗಂಜ್‌: ಕಾಸ್‌ಗಂಜ್‌ ಹಿಂಸೆ ಹೆಚ್ಚಲು ಕಾರಣರಾಗಿದ್ದ  ರಾಹುಲ್‌ ಉಪಾಧ್ಯಾಯ ಎಂಬವರ ಸಾವಿನ ಸುದ್ದಿ ಕೇವಲ ವದಂತಿ ಎಂದು ಉತ್ತರ ಪ್ರದೇಶ ಪೊಲೀಸರು ಹೇಳಿದ ಒಂದು ದಿನದ ತರುವಾಯ ರಾಹುಲ್‌ ಉಪಾಧ್ಯಾಯ ಸ್ವತಃ “ನಾನು ಸತ್ತಿಲ್ಲ; ಜೀವಂತ ಇದ್ದೇನೆ’ ಎಂದು ಹೇಳಿದ್ದಾರೆ.

“ಕಾಸ್‌ಗಂಜ್‌ ಹಿಂಸೆಯಲ್ಲಿ  ನಾನು ಮೃತಪಟ್ಟಿರುವುದಾಗಿ ಸಾಮಾಜಿಕ ಜಾಲ ತಾಣದಲ್ಲಿ ಹಬ್ಬಿಕೊಂಡ ವದಂತಿಯ ಬಗ್ಗೆ ನನ್ನೋರ್ವ ಸ್ನೇಹಿತ ನನಗೆ ತಿಳಿಸಿದ. ಕಾಸ್‌ಗಂಜ್‌ನಲ್ಲಿ ದೊಂಬಿ, ಹಿಂಸೆ ಭುಗಿಲೆದ್ದಾಗ ನಾನು ಅಲ್ಲಿ  ಇರಲಿಲ್ಲ; ನಾನು ನನ್ನ ಗ್ರಾಮಕ್ಕೆ ಹೋಗಿದ್ದೆ. ನಾನು ಸತ್ತಿದ್ದೇನೆ ಎಂಬ ವದಂತಿಗಳು ಕೇವಲ ಸುಳ್ಳು; ನಾನು ಜೀವಂತ ಇದ್ದೇನೆ ಮತ್ತು ಆರೋಗ್ಯದಿಂದ ಇದ್ದೇನೆ’ ಎಂದು ರಾಹುಲ್‌ ಹೇಳಿದ್ದಾರೆ.

ಈ ನಡುವೆ ರಾಹುಲ್‌ ಸಾವಿನ ವದಂತಿಯನ್ನು ಹರಡಿದ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಆಲಿಗಢ ವಲಯದ ಇನ್ಸ್‌ಪೆಕ್ಟರ್‌ ಜನರಲ್‌ ಸಂಜೀವ್‌ ಗುಪ್ತಾ ತಿಳಿಸಿದ್ದಾರೆ. 

ಜನವರಿ 26ರ ಗಣರಾಜ್ಯೋತ್ಸವ ದಿನದಂದು ಕಾಸ್‌ಗಂಜ್‌ನಲ್ಲಿ ಭುಗಿಲೆದ್ದಿದ್ದ ಹಿಂಸೆಗೆ ರಾಹುಲ್‌ ಉಪಾಧ್ಯಾಯ ಅವರೊಂದಿಗೆ ಚಂದನ್‌ ಗುಪ್ತಾ ಎಂಬವರು ಹಿಂಸೆಗೆ ಬಲಿಯಾಗಿದ್ದಾರೆ ಎಂಬ ವದಂತಿ ತೀವ್ರವಾಗಿ ಹರಡಿತ್ತು. 

ರಾಹುಲ್‌ ಅವರ ಸಾವಿನ ವದಂತಿಯಿಂದ ಕೋಪೋದ್ರಿಕ್ತರಾಗಿದ್ದ ಜನಸಮೂಹ ಮೂರು ದಿನಗಳ ಕಾಲ ಕಾಸ್‌ಗಂಜ್‌ನಲ್ಲಿ ಹಿಂಸೆ, ದೊಂಬಿ ನಡೆಸಿತ್ತು. ಮೊನ್ನೆ ಭಾನುವಾರ ಈ ಸಂಬಂಧ 30 ಮಂದಿಯನ್ನು ಕೊಲೆ ಆಪಾದನೆ ಮೇಲೆ ಬಂಧಿಸಲಾಗಿತ್ತು. ಅಲ್ಲದೆ ಸುಮಾರು 51 ಮಂದಿಯನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದರು. 

ಗಣರಾಜ್ಯೋತ್ಸವ ದಿನದಂದು ತಿರಂಗ ಯಾತ್ರೆ ನಡೆಯುತ್ತಿದ್ದ ವೇಳೆ ಎರಡು ಸಮುದಾಯಗಳ ನಡುವೆ ಉಂಟಾಗಿದ್ದ ಸಂಘರ್ಷಕ್ಕೆ ಒಬ್ಬ ಬಲಿಯಾಗಿ ಇನ್ನಿಬ್ಬರು ಗಾಯಗೊಂಡಿದ್ದರು.  

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.