ನಾನು ಹುಟ್ಟಿನಿಂದಲೇ ಕಾಂಗ್ರೆಸ್ಸಿಗ: ನವಜೋತ್ ಸಿಧು
Team Udayavani, Jan 17, 2017, 3:45 AM IST
ನವದೆಹಲಿ: ಭಾನುವಾರವಷ್ಟೇ ಕಾಂಗ್ರೆಸ್ ಸೇರಿರುವ ಮಾಜಿ ಬಿಜೆಪಿ ಸಂಸದ ನವಜೋತ್ ಸಿಂಗ್ ಸಿಧು, ತಾನು ಹುಟ್ಟಿನಿಂದಲೇ ಕಾಂಗ್ರೆಸ್ಸಿಗ ಎಂದು ಹೇಳಿಕೊಂಡಿದ್ದಾರೆ.
ಎಐಸಿಸಿ ಕಚೇರಿಗೆ ಸೋಮವಾರ ಭೇಟಿ ನೀಡಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ತನ್ನ ತಂದೆ ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಂಡು 40 ವರ್ಷ ಕಾಂಗ್ರೆಸ್ಸಿಗಾಗಿ ಹೋರಾಡಿದ್ದರು. ಇದೀಗ ನಾನು ಮತ್ತೆ ಬೇರುನೆಲಕ್ಕೆ ಮರಳಿದ್ದೇನೆ. ಕಾಂಗ್ರೆಸ್ನ ಅಗ್ರ ನಾಯಕತ್ವ ನಿಯೋಜಿಸುವ ಯಾವುದೇ ನಾಯಕತ್ವದಡಿ ಕೆಲಸ ಮಾಡಲು ತಾನು ಸಿದ್ಧ ಎಂದು ಅವರು ಹೇಳಿಕೊಂಡರು.
“ನಿಮಗೆ ಮುಖ್ಯಮಂತ್ರಿ ಅಭ್ಯರ್ಥಿಯಾಗುವ ಆಸಕ್ತಿಯಿದೆಯೇ’ ಎಂಬ ಪ್ರಶ್ನೆಗೆ ಸಿಧು ನೇರವಾಗಿ ಉತ್ತರಿಸದೇ ನುಣುಚಿಕೊಂಡರು.
“ರಾಜಕೀಯದಲ್ಲಿ ಒಂದು ವೇಳೆ, ಆದರೆ ಎಂಬ ಪದಗಳಿಲ್ಲ. ಒಂದು ವೇಳೆ ನನ್ನ ಚಿಕ್ಕಮ್ಮನಿಗೆ ಮೀಸೆ ಇದ್ದರೆ ಅವಳನ್ನು ನಾನು ಚಿಕ್ಕಪ್ಪ’ ಎಂದು ಕರೆಯುತ್ತಿದ್ದೆ ಎಂದು ಹೇಳುವ ಮೂಲಕ ರಾಜಕೀಯದಲ್ಲಿ ಏನು ಬೇಕಾದರೂ ಆಗಬಹುದು ಎಂಬ ಸೂಚನೆ ನೀಡಿದರು.
ಜೊತೆಗೆ ತನಗೆ ಅಮೃತ್ಸರದಿಂದ ಬಿಜೆಪಿ ಲೋಕಸಭಾ ಟಿಕೆಟ್ ತಪ್ಪಿಸಿದವರನ್ನು ಮಂಥರೆಗೆ ಹೋಲಿಸುವ ಮೂಲಕ ಕಿಡಿಕಾರಿದರು.
ಅಮೃತಸರ ಪೂರ್ವ ಕ್ಷೇತ್ರದಿಂದ ಪಂಜಾಬ್ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಹುರಿಯಾಳಾಗಿ ಸಿಧು ಕಣಕ್ಕಿಳಿಯಲಿದ್ದಾರೆ.
ಇಂದಿನಿಂದ ಉತ್ತರಪ್ರದೇಶ ಚುನಾವಣೆ ಪ್ರಕ್ರಿಯೆ ಶುರು
ಲಕ್ನೋ: ದೇಶದಲ್ಲೇ ಅತಿ ಹೆಚ್ಚು ವಿಧಾನಸಭಾ ಕ್ಷೇತ್ರಗಳನ್ನು ಹೊಂದಿ ರುವ ಮತ್ತು ಸಾಕಷ್ಟು ಕುತೂಹಲ ಕೆರಳಿಸಿರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಮಂಗಳವಾರದಿಂದ ಅಧಿಕೃತ ಚಾಲನೆ ಸಿಗಲಿದೆ.
ಫೆ. 11 ರಂದು ನಡೆಯುವ ಮೊದಲ ಹಂತದ 73 ವಿಧಾನಸಭಾ ಕ್ಷೇತ್ರಗಳ ಚುನಾವಣೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಮಂಗಳವಾರ (ಜ. 17) ದಿಂದ ಪ್ರಾರಂಭವಾಗಲಿದೆ. ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲು ಜ. 24 ಕೊನೆ ದಿನವಾಗಿದ್ದು, ಜ. 27ರೊಳಗೆ ತಮ್ಮ ಉಮೇದುವಾರಿಕೆಗಳನ್ನು ವಾಪಸ್ ಪಡೆಯಬಹುದಾಗಿದೆ. ಫೆ. 11 ರಿಂದ ಪ್ರಾರಂಭವಾಗುವ ಮತದಾನ ಪ್ರಕ್ರಿಯೆ ಮಾ. 8 ರವರೆಗೂ 7 ಹಂತಗಳಲ್ಲಿ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ