ಭಾರತಕ್ಕೆ ಬಂದ ಐಎಂಎ ವಂಚಕ ಮನ್ಸೂರ್ ಖಾನ್ ಇಡಿ ವಶಕ್ಕೆ
ರಾತ್ರೋರಾತ್ರಿ ಭಾರತಕ್ಕೆ ಬಂದಿಳಿದ ಮನ್ಸೂರ್
Team Udayavani, Jul 19, 2019, 8:42 AM IST
ಹೊಸದೆಹಲಿ: ದೇಶ ಬಿಟ್ಟು ಪರಾರಿಯಾಗಿದ್ದ ಬಹುಕೋಟಿ ಐಎಂಎ ಜ್ಯುವೆಲ್ಲರಿ ವಂಚಕ ಮನ್ಸೂರ್ ಖಾನ್ ರಾತ್ರೋರಾತ್ರಿ ಭಾರತಕ್ಕೆ ಮರಳಿದ್ದಾನೆ.
ಶುಕ್ರವಾರ ಬೆಳಗಿನ ಜಾವ ಮೂರು ಗಂಟೆಗೆ ದೆಹಲಿ ವಿಮಾನ ನಿಲ್ದಾಣಕ್ಕೆ ಬಂದಿಳಿದ ಮನ್ಸೂರ್ ನನ್ನು ಎಸ್ ಐಟಿ ಮತ್ತು ಇಡಿ ಅಧಿಕಾರಿಗಳು ವಶಕ್ಕೆ ತೆಗೆದುಕೊಂಡಿದ್ದಾರೆ.
ಬೆಂಗಳೂರಿನ ಐಎಂಎ ಜ್ಯುವೆಲ್ಲರಿ ಮಾಲಕನಾಗಿದ್ದ ಮೊಹಮ್ಮದ್ ಮನ್ಸೂರ್ ಖಾನ್ ಸಾವಿರಾರು ಜನರಿಗೆ ವಂಚಿಸಿ ವಿದೇಶಕ್ಕೆ ಪರಾರಿಯಾಗಿದ್ದ.
ಸದ್ಯ ಮನ್ಸೂನ್ ನನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸಲಿದ್ದಾರೆ. ದೆಹಲಿಯಲ್ಲಿರುವ ಜಾರಿ ನಿರ್ದೇಶನಾಲಯದ ಕೇಂದ್ರ ಕಚೇರಿ ಎಂಟಿಎನ್ ಎಲ್ ಕಟ್ಟಡಕ್ಕೆ ಕರೆದೊಯ್ಯಲಾಗಿದೆ.
ತಿಂಗಳ ಹಿಂದೆ ವಿದೇಶಕ್ಕೆ ಪರಾರಿಯಾಗಿದ್ದ ಮನ್ಸೂನ್, ನಂತರ ವಿಡಿಯೋ ಮೂಲಕ ತನಗಿರುವ ಜೀವ ಬೆದರಿಕೆ, ತಾನು ಭಾರತಕ್ಕೆ ಬಂದರೆ ನನಗೆ ಜೀವ ಭಯವಿದೆ ಎಂದು ಹೇಳಿಕೆ ನೀಡಿದ್ದ.
ಜುಲೈ 15ರಂದು ಮತ್ತೊಂದು ವಿಡಿಯೋ ಮಾಡಿದ್ದ ಖಾನ್, “ನನಗೆ ಅನಾರೋಗ್ಯ ಕಾಡುತ್ತಿದೆ. ಹೃದಯ ಸಂಬಂಧಿ ಅನಾರೋಗ್ಯವಿದೆ. ಹಾಗಾಗಿ ನಾನು ಭಾರತಕ್ಕೆ ಬರುತ್ತಿದ್ದು ಭಾರತೀಯ ನ್ಯಾಯಾಂಗ ವ್ಯವಸ್ಥೆಯ ಬಗ್ಗೆ ನಂಬಿಕೆಯಿದೆ” ಎಂದಿದ್ದ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ
MUST WATCH
ಹೊಸ ಸೇರ್ಪಡೆ
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ
OBC ವರ್ಗಕ್ಕೆ ಕಾಂಗ್ರೆಸ್ನಿಂದ ಅನ್ಯಾಯ: ಸುನಿಲ್ ಕುಮಾರ್
ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ
Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ